No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಿಯುಸಿ ನಂತರ ವಾಸ್ತವತೆಯ ಜ್ಞಾನ ಪಡೆಯಲು ಮುಕ್ತ ಅವಕಾಶ: ಶಿಕ್ಷಣ ತಜ್ಞೆ ಸೀತಾಲಕ್ಷ್ಮೀ ಅಭಿಪ್ರಾಯ

ಎನ್‌ಇಎಸ್: ದ್ವಿತೀಯ ಪಿಯುಸಿ ನಂತರ ಮುಂದೇನು? ಕಾರ್ಯಾಗಾರ ಸಂಪನ್ನ

kalpa News by kalpa News
June 21, 2021
in ಶಿವಮೊಗ್ಗ
0
ದ್ವಿತೀಯ ಪಿಯುಸಿ ನಂತರ ಮುಂದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ವತಿಯಿಂದ ಭಾನುವಾರ ಆನ್‌ಲೈನ್ ಮೂಲಕ ಈ ಸಾಲಿನ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ನಂತರ ಮುಂದೇನು? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿಕ್ಷಣ ತಜ್ಞೆ ಸೀತಾಲಕ್ಷ್ಮೀ, ಸ್ವಯಂ ಶಿಸ್ತಿನ ಅಧ್ಯಯನ ಎಂಬುದು ಸದಾ ಮಕ್ಕಳಲ್ಲಿ ಕಡಿಮೆಯಿರುತ್ತದೆ. ಇಂತಹ ಸಂದರ್ಭಗಳಲ್ಲಿ ಕಾಲೇಜುಗಳು ನಡೆಸುವ ಕಿರು ಮತ್ತು ವಾರ್ಷಿಕ ಪರೀಕ್ಷೆಗಳು ವಿದ್ಯಾರ್ಥಿಗಳ ಅಧ್ಯಯನಶೀಲತೆ ಹೆಚ್ಚಿಸಲು ಸಹಕಾರಿಯಾಗಿರುತ್ತದೆ. ಆದರೆ ಸಂದರ್ಭದ ಅನಿವಾರ್ಯತೆಗೆ ಸಿಲುಕಿ ಇದೇ ಮೊದಲ ಬಾರಿಗೆ ಪರೀಕ್ಷೆಗಳಿಲ್ಲದೆ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಮಕ್ಕಳು ಗುರುಗಳ ನಡುವೆ ಬಾಂಧವ್ಯ ಬೆಳೆಯಲು ಸಾಧ್ಯವಾಗಲಿಲ್ಲ. ಆದರೆ ವಿದ್ಯಾರ್ಥಿಗಳು, ಪೋಷಕರು ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ. ಪಿಯುಸಿ ನಂತರ ಹಲವು ಶೈಕ್ಷಣಿಕ ವಿಷಯಗಳ ಜೊತೆಗೆ ವಾಸ್ತವತೆಯ ಜ್ಞಾನ ಪಡೆಯಲು ಮುಕ್ತ ಅವಕಾಶವಿದೆ. ಒಂದೇ ಕೋರ್ಸ್ ಕುರಿತು ಒಲವು ಬೇಡ. ವಿದ್ಯಾರ್ಥಿಗಳಲ್ಲಿರುವ ಆಸಕ್ತಿ, ಶೈಕ್ಷಣಿಕ ನೈಪುಣ್ಯತೆಯ ಆಧಾರದ ಮೇಲೆ ಕೋರ್ಸ್‌ಗಳ ಆಯ್ಕೆ ನಡೆಯಲಿ. ಮಕ್ಕಳ ಆಸಕ್ತಿಗೆ ಅನುಗುಣವಾಗಿ ಅಧ್ಯಯನ ನಡೆಸಲು ಉತ್ತೇಜನ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಹೇಳಿದರು.

ಶಿಕ್ಷಣ ತಜ್ಞ ಡಾ. ಎಸ್.ಎನ್. ಜಗದೀಶ ಮಾತನಾಡಿ, ಎಲ್ಲರಿಗೂ ಸಾಧ್ಯವಾಗಬಲ್ಲ ಅನೇಕ ಕೋರ್ಸ್‌ಗಳು ಲಭ್ಯವಿದೆ. ಒಂದು ವಿಷಯಕ್ಕೆ ಸಿಮಿತವಾಗದೆ ಮುಕ್ತವಾಗಿ ಅಧ್ಯಯನ ನಡೆಸಲು ಭಾರತ ಸರ್ಕಾರದ ಎನ್‌ಪಿಟಿಎಲ್, ಸ್ವಯಂ ನಂತಹ ಅನೇಕ ವೇದಿಕೆಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಅನೇಕ ಗೊಂದಲಗಳಿಗೆ ಒಳಗಾಗದೆ ನಮ್ಮ ಆಸಕ್ತಿ, ನೈಪುಣ್ಯತೆಯ ವಿಮರ್ಶೆಗಳು ಅವಶ್ಯಕವಾಗಿದ್ದು, ಸಿಇಟಿ, ಕಾಮೆಡ್-ಕೆ ಪರೀಕ್ಷೆಗಳನ್ನು ಬರೆಯುವುದರ ಮೂಲಕ ಅಂತಹ ಸ್ವಯಂ ವಿಮರ್ಶೆ ಸಾಧ್ಯವಾಗಲಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾತನಾಡಿ, ಪಿಯುಸಿ ತೇರ್ಗಡೆ ನಂತರ ಮುಂದೇನು ಎಂಬ ಹಲವು ಗೊಂದಲಗಳು ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಮೂಡುವುದು ಸಹಜ. ಕೋವಿಡ್ ಆತಂಕದ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜ್ಞಾನ ವಿಸ್ತಾರಗೊಳ್ಳಲು ಹಾಗೂ ಹಲವು ಗೊಂದಲಗಳಿಗೆ ತೆರೆ ಎಳೆಯುವ ಸಲುವಾಗಿ ಇಂದಿನ ಈ ಕಾರ್ಯಕ್ರಮ ಸಂಘಟಿಸಿದ್ದೇವೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷ ಟಿ.ಆರ್. ಅಶ್ವಥ ನಾರಾಯಣಶೆಟ್ಟಿ ಮಾತನಾಡಿ, ಪ್ರಪಂಚದ ಹಲವು ದೇಶಗಳಲ್ಲಿ ಭಾರತೀಯರು ಪ್ರಮುಖ ಸ್ಥಾನ ಪಡೆದಿರುವುದು ಸಂತೋಷದ ವಿಚಾರ. ಕೋರ್ಸ್‌ಗಳ ಆಯ್ಕೆಯಲ್ಲಿ ಇನ್ನಿತರರ ಮಾತುಗಳಿಗೆ ಕಿವಿಗೊಡದೆ ಸ್ಪಷ್ಟತೆಯಿರುವ ನಿಮ್ಮ ಇಷ್ಟದ ಕೋರ್ಸ್‌ಗಳನ್ನು ಆಯ್ಕೆ ಮಾಡುಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕುಲಸಚಿವರಾದ ಪ್ರೋ.ಹೂವಯ್ಯ ಗೌಡ, ಶಿಕ್ಷಣ ತಜ್ಞರಾದ ಪ್ರೋ. ಆರ್.ಕೆ. ಬಾಳಿಗ, ನ್ಯಾಷನಲ್ ಫಾರ್ಮಸಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಸತೀಶ್ ಕುಮಾರ್ ಶೆಟ್ಟಿ, ಜೆಎನ್‌ಎನ್‌ಸಿಇ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ಮಂಜುನಾಥ, ಎಂಬಿಎ ವಿಭಾಗದ ಪ್ರಾಧ್ಯಾಪಕರಾದ ಡಾ. ಎಂ.ಜಿ. ಕೃಷ್ಣಮೂರ್ತಿ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು. ಎನ್‌ಇಎಸ್ ಪಿಆರ್‌ಒ ಸಿ.ಎಂ. ನೃಪತುಂಗ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಲೆ, ವಾಣಿಜ್ಯ, ವಿಜ್ಞಾನ, ಎಂಜಿನಿಯರಿಂಗ್, ಫಾರ್ಮಸಿ, ಡಿಪ್ಲೊಮಾ, ನರ್ಸಿಂಗ್, ಮೆಡಿಕಲ್ ಕೋರ್ಸ್‌ಗಳ ಕುರಿತು ಹಾಗೂ ಲಭ್ಯವಿರುವ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಲಾಯಿತು. ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಏಳು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮದ ಮುದ್ರಿತ ಪ್ರಸಾರ ಯುಟ್ಯೂಬ್ ಲಿಂಕ್ hಣಣhttps://youtu.be/F9dOIfKeHc0 ನಲ್ಲಿ ಲಭ್ಯವಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNational Education Society ShivamoggaNews in KannadaNews KannadaPUCShimogaShivamoggaShivamogga Newsಪಿಯುಸಿಮಲೆನಾಡು_ಸುದ್ಧಿರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುದೀರ್ಘ ಸಮಯದ ನಂತರ ಶಿವಮೊಗ್ಗದಲ್ಲೂ ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್‌ಗಳು…!

Next Post

ಮಹಿಳೆ ಸರ ಅಪಹರಣ: ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

kalpa News

kalpa News

Next Post
ಮಹಿಳೆ ಸರ ಅಪಹರಣ: ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಮಹಿಳೆ ಸರ ಅಪಹರಣ: ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL