ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯಲ್ಲಿ (Shivamogga) ಪೊಲೀಸ್ ಕಾನ್ಸ್ಟೇಬಲ್ (Police Constable) ಹುದ್ದೆಗಳ ನೇಮಕಾತಿಗೆ ಸಜ್ಜಾಗುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಸರ್ಜಿ ಫೌಂಡೇಶನ್ ಹಾಗೂ ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಸಂಯುಕ್ತವಾಗಿ ಉಚಿತ ತರಬೇತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ.
ನಗರದ ಕುವೆಂಪು ರಂಗಮಂದಿರದಲ್ಲಿ ಜುಲೈ 01 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2ರವರೆಗೆ ನಡೆಯುವ ಈ ಒಂದು ದಿನದ ಕಾರ್ಯಾಗಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತಜ್ಞರಾದ ಸೋಮಪ್ಪ ಡುಂಡಿಗೆರೆ ಮತ್ತು ನಾಗರಾಜ್ ರೆಡ್ಡಿ ಮಾರ್ಗದರ್ಶನ ನೀಡಲಿದ್ದಾರೆ.
Also Read>> ಅವಿಸ್ಮರಣೀಯ ಸವಾರಿಯಲ್ಲಿ ಪರಿಸರ ಕಾಳಜಿ ಶ್ಲಾಘನೀಯ: ಶ್ರೀಪಾದ ಬಿಚ್ಚುಗತ್ತಿ
ಇತ್ತೀಚಿನ ಪರೀಕ್ಷಾ ಪದ್ಧತಿ, ಪ್ರಶ್ನೆಪತ್ರಿಕೆ ಮಾದರಿ, ದೈಹಿಕ ಪರೀಕ್ಷೆಗಳ ವಿಧಾನ, ಪಠ್ಯಕ್ರಮ ವಿಶ್ಲೇಷಣೆ ಹಾಗೂ ಪರೀಕ್ಷೆ ಎದುರಿಸುವ ತಂತ್ರಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ.
ಉಚಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರ
ಎರಡು ಸಂಸ್ಥೆಗಳ ವತಿಯಿಂದ ಜಿಲ್ಲೆಯ ಸ್ಪರ್ಧಾಕಾಂಕ್ಷಿಗಳಿಗೆ ಜುಲೈ 01 ರ ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷಾ ತಜ್ಞರಾದ ಸೋಮಪ್ಪ ಡುಂಡಿಗೆರೆ ಮತ್ತು ನಾಗರಾಜ್ ರೆಡ್ಡಿ ಅವರ ನೇತೃತ್ವದಲ್ಲಿ ಒಂದು ದಿನದ ಉಚಿತ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಸ್ಪರ್ಧಾಕಾಂಕ್ಷಿಗಳಿಗೆ ಇತ್ತೀಚಿನ ಪರೀಕ್ಷಾ ಪದ್ಧತಿ, ಪ್ರಶ್ನೆಪತ್ರಿಕೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಪದ್ಧತಿ. ಪಠ್ಯಕ್ರಮದ ವಿಶ್ಲೇಷಣೆ, ಪರೀಕ್ಷೆಗಳನ್ನು ಎದುರಿಸಲು ಅಭ್ಯರ್ಥಿಗಳು ಅನುಸರಿಸಬೇಕಾದ ಸುಲಭ ತಂತ್ರಗಳು, ಪ್ರಸ್ತುತ ಜಾಗತಿಕ ಸ್ಪರ್ಧೆಯ ವಾಸ್ತವತೆಗಳು ಹಾಗೂ ಪರೀಕ್ಷಾ ಪ್ರಕ್ರಿಯೆಯಲ್ಲಿನ ಇತ್ತೀಚಿನ ಬದಲಾವಣೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಸಮಗ್ರ ಮಾಹಿತಿ ನೀಡಲಿದ್ದಾರೆ.
ಪರೀಕ್ಷಾ ತರಬೇತಿಗೆ ಕಾಯಕಸೇತು ಪರೀಕ್ಷಾಪಥ
ನಂತರ “ಕಾಯಕಸೇತು ಪರೀಕ್ಷಾಪಥ” ಎಂಬ ಶೀರ್ಷಿಕೆಯಡಿ ’30 ದಿನಗಳ ಉಚಿತ ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ’ ಕಾರ್ಯಕ್ರಮ ಲೋಕಾರ್ಪಣೆಯಾಗಲಿದ್ದು, ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಈ ಎರಡು ಮಹತ್ವದ ಕಾರ್ಯಕ್ರಮಗಳು ವೇದಿಕೆಯಾಗಲಿವೆ.
Also Read>> ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ | ಕಟ್ಟಡಗಳು ನೆಲಸಮ | ಸಾವಿರಾರು ಜನರು ಮೃತಪಟ್ಟಿರುವ ಶಂಕೆ
30 ದಿನಗಳ ಆನ್ಲೈನ್ ತರಬೇತಿ ಮುಂಬರುವ ದಿನಾಂಕ 29.06.2026 ಸೋಮವಾರದಿಂದ ಆರಂಭವಾಗಲಿದ್ದು.ಈ ತರಬೇತಿಯಲ್ಲಿ ಪ್ರತಿದಿನ ಬೆಳಿಗ್ಗೆ 2 ಗಂಟೆ ಮತ್ತು ಸಂಜೆ 2 ಗಂಟೆಗಳ ಕಾಲ ನುರಿತ ಉಪನ್ಯಾಸಕರಿಂದ ಬೋಧನೆ ನೀಡಲಾಗುವುದು. ವಿದ್ಯಾರ್ಥಿಗಳ ನಿರಂತರ ಮೌಲ್ಯಮಾಪನ ಹಾಗೂ ಸಮಯ ನಿರ್ವಹಣಾ ಕೌಶಲ್ಯ ಹೆಚ್ಚಿಸಲು ಪ್ರತಿದಿನ ಮತ್ತು ವಾರಕ್ಕೊಮ್ಮೆ ಟೆಸ್ಟ್ ಸೀರೀಸ್ ನಡೆಸಲಾಗುತ್ತದೆ.
ಜೊತೆಗೆ, ಭಾಗವಹಿಸುವ ಅಭ್ಯರ್ಥಿಗಳಿಗೆ ಸುಲಭವಾಗಿ ಓದಲು ಅನುಕೂಲವಾಗುವಂತೆ ಸಮಗ್ರ ‘ಸ್ಟಡಿ ಮೆಟೀರಿಯಲ್’ (ಕ್ಲಾಸ್ ನೋಟ್ಸ್) ಅನ್ನು ಡಿಜಿಟಲ್ ರೂಪದಲ್ಲಿ ಉಚಿತವಾಗಿ ಒದಗಿಸಲಾಗುತ್ತದೆ.
ಸರ್ಕಾರಿ ಉದ್ಯೋಗ ಪಡೆಯಬೇಕೆಂಬ ಕನಸು ಹೊತ್ತ ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ಗ್ರಾಮೀಣ ಅಭ್ಯರ್ಥಿಗಳಿಗೆ ದುಬಾರಿ ಶುಲ್ಕ ಭರಿಸಿ ತರಬೇತಿ ಕೇಂದ್ರಗಳಿಗೆ ಹೋಗುವುದು ಕಷ್ಟ. ಇಂತಹ ಆಕಾಂಕ್ಷಿಗಳಿಗೆ ಸರಿಯಾದ ಸ್ವಯಂ ಮಾರ್ಗದರ್ಶನದ ಕೊರತೆಯೂ ಕಾಡುತ್ತದೆ. ಈ ಸಮಸ್ಯೆಯನ್ನು ನೀಗಿಸಿ, ಜಿಲ್ಲೆಯ ಪದವೀಧರ ಯುವಜನತೆಗೆ ಉನ್ನತ ಮಟ್ಟದ ಶೈಕ್ಷಣಿಕ ನೆರವು ನೀಡುವ ಸದುದ್ದೇಶದಿಂದ ಈ ಎರಡೂ ಕಾರ್ಯಕ್ರಮಗಳನ್ನು (ಮಾರ್ಗದರ್ಶನ ಮತ್ತು ತರಬೇತಿ) ರೂಪಿಸಲಾಗಿದೆ. ಗುಣಮಟ್ಟದ ಶಿಕ್ಷಣವನ್ನು ಖಚಿತಪಡಿಸುವ ದೃಷ್ಟಿಯಿಂದ 30 ದಿನಗಳ ಆನ್ಲೈನ್ ತರಬೇತಿಗೆ ಕೇವಲ 1,000 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
Also Read>> ನಿರ್ಜಲ ಏಕಾದಶಿ | ವಿಷ್ಣುವಿನ ಆರಾಧನೆಗೆ ಪ್ರಶಸ್ತ ದಿನ
ಈ ಕಾರ್ಯಕ್ರಮಗಳ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ‘ಕಾಯಕ ಸೇತು’ ಜಾಬ್ ಪೋರ್ಟಲ್ ಮೂಲಕ ಕಡ್ಡಾಯವಾಗಿ ಆನ್ಲೈನ್ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿಸಿಕೊಂಡ ಅರ್ಹ ಪದವೀಧರ ಅಭ್ಯರ್ಥಿಗಳನ್ನು ಮಾತ್ರ ತರಬೇತಿಗೆ ಪರಿಗಣಿಸಲಾಗುವುದು. ಮಲೆನಾಡು ಭಾಗದ ವಿದ್ಯಾವಂತ ಯುವಜನತೆ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ, ಜೆ.ಸಿ.ಐ ಶಿವಮೊಗ್ಗ ಮಲ್ನಾಡ್ ಅಧ್ಯಕ್ಷರಾದ ಘನಶ್ಯಾಮ್ ಜಿ ಗಿರಿಮಾಜಿ ಅವರು ತಿಳಿಸಿದ್ದಾರೆ.
ಜೂನ್ 8 ರಿಂದ 13 ರವರೆಗೆ 6 ದಿನಗಳ ಕಾಲ ನಡೆದ ಕಾಯಕಸೇತು ಉದ್ಯೋಗ ಸಂದರ್ಶನಕ್ಕೆ ಶಿವಮೊಗ್ಗ ಹಾಗೂ ಸುತ್ತ ಮುತ್ತ ಜಿಲ್ಲೆಯ 600 ಕ್ಕೂ ಹೆಚ್ಚು ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಂಡಿದ್ದು, 404 ಅಭ್ಯರ್ಥಿಗಳು ಆಯ್ಕೆಯಾಗಿ ನೇಮಕಾತಿ ಪತ್ರವನ್ನು ಪಡೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









