ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯೋಧ್ಯೆ ಮತ್ತು ಕಾಶಿ ಯಾತ್ರೆಯು #Ayodhya-Kashi Yathre ನಮ್ಮ ಜನ್ಮವನ್ನು ಸಾರ್ಥಕಗೊಳಿಸಿದೆ ಎಂದು ಮಾಜಿ ಜಿ.ಪಂ. ಸದಸ್ಯ ಕೆ.ಈ. ಕಾಂತೇಶ್ #K E Kanthesh ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನ.23ರಂದು ಸುಮಾರು 1,600 ಯಾತ್ರಾರ್ಥಿಗಳನ್ನು ನಾವು ವಿಶೇಷವಾದ ರೈಲಿನಲ್ಲಿ ಆಯೋಧ್ಯೆ ಮತ್ತು ಕಾಶಿಗೆ ಯಾತ್ರೆ ಕರೆದುಕೊಂಡು ಹೋಗಿದ್ದೆವು. ಈ ಯಾತ್ರೆಯೂ ಅತ್ಯಂತ ಯಶಸ್ವಿಯಾಗಿ ಮನಸ್ಸನ್ನು ಹರ್ಷಗೊಳಿಸಿದೆ. ಯಾವ ಚಿಕ್ಕ ಲೋಪದೋಷವು ಇಲ್ಲದಂತೆ ನಡೆದಿದೆ. ಒಂದು ರೀತಿಯ ಸಾರ್ಥಕ ಮನೋಭಾವ ನಮಗೆ ಬಂದಿದೆ. ಯಾತ್ರಾರ್ಥಿಗಳು ಕೂಡ ನಮ್ಮ ಜನ್ಮ ಸಾರ್ಥಕವಾಯಿತು ಎಂದು ಹೇಳಿದ್ದು, ನಮಗೆ ಸಂತೋಷ ತಂದಿದೆ ಎಂದರು.

Also read: ಶಿವಮೊಗ್ಗ ಪಾಲಿಕೆಗೆ ಭೈರತಿ ಸುರೇಶ್ ದಿಢೀರ್ ಭೇಟಿ | ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ಚಳಿ ಬಿಡಿಸಿದ ಸಚಿವರು
ಯಾತ್ರೆಯ ಸಮಯದಲ್ಲಿ ಶಿವಮೊಗ್ಗದ ಸಾಕಷ್ಟು ಸಾರ್ವಜನಿಕರು ನಾವು ಬರುತ್ತಿದ್ದೆವು ಎಂದು ಪೋನ್ ಮಾಡುತ್ತಿದ್ದರು. ನಮಗೆ ಪ್ರಸಾದ ತನ್ನಿ ಎಂದು ಹೇಳಿದರು. ಇದನ್ನು ಮನದಲ್ಲಿಟ್ಟುಕೊಂಡು ನಾವು ಆಯೋಧ್ಯೆ ಮತ್ತು ಕಾಶಿಯಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಪ್ರಸಾದವನ್ನು ತಂದಿದ್ದೇವೆ. ಅಲ್ಲದೆ ವಿಶೇಷವಾಗಿ ಬೆಳ್ಳಿಕೋಟ್ ಇರುವ ಕಾಯಿನ್ನ್ನು ಕೂಡ ತಂದಿದ್ದೇವೆ. ಈ ಕಾಯಿನ್ನಲ್ಲಿ ಒಂದು ಭಾಗದಲ್ಲಿ ಆಯೋಧ್ಯೆಯ ಶ್ರೀರಾಮ, ಮತ್ತೊಂದು ಭಾಗದಲ್ಲಿ ಕಾಶಿಯ ವಿಶ್ವನಾಥನ ಭಾವಚಿತ್ರವಿದೆ. ಒಂದು ಲಕ್ಷ ಕಾಯಿನ್ ತಂದಿದ್ದು, ಇದನ್ನು ಶಿವಮೊಗ್ಗದ ಪ್ರತಿಯೊಂದು ಮನೆಗೂ ಹಂಚಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ.ವಿಶ್ವಾಸ್, ಕುಬೇಂದ್ರಪ್ಪ, ವಾಗೀಶ್, ಚಿದಾನಂದ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post