ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶತಾಯುಷಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಾಡಿನ ಹೆಮ್ಮೆಯ ಚೇತನ ಎಚ್.ಎಸ್.ದೊರೆಸ್ವಾಮಿಯವರ ನಿಧನಕ್ಕೆ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಕಂಬನಿ ಮಿಡಿದಿದ್ದಾರೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿ ಜನಪರ ಹೋರಾಟವನ್ನೇ ತಮ್ಮ ಬದುಕನ್ನಾಗಿಸಿಕೊಂಡ ಹಿರಿಯ ಮುತ್ಸದ್ದಿ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿಯವರು ನಮ್ಮನ್ನಗಲಿದ್ದಾರೆ.
ಗಾಂಧಿ ಶಾಂತಿ ಪ್ರತಿಷ್ಠಾನದ ಹಿರಿಯ ಸದಸ್ಯರಾಗಿ ನಮಗೆ ಸದಾ ಮಾರ್ಗದರ್ಶನ ಮಾಡುತ್ತಿದ್ದ ದೊರೆಸ್ವಾಮಿ ಅವರು ಯುವ ಜನತೆಯನ್ನು ನಾಚಿಸುವಂತೆ ಪ್ರಚಲಿತ ಜನಪರ ಹೋರಾಟಗಳಲ್ಲಿ ಹಾಗೂ ಬೇರೆ ಬೇರೆ ಸಾಮಾಜಿಕ ಚಳವಳಿಗಳಲ್ಲಿ ಇನ್ನೂ ತೊಡಗಿಸಿಕೊಂಡಿದ್ದರು. ಆ ಪರಂಪರೆಯ ಕೊಂಡಿ ಕಳಚುವ ಮೂಲಕ ಆಸ್ಥಾನ ಶೂನ್ಯ ಆವರಿಸಿದೆ,
ತಮ್ಮ ಇಳಿವಯಸ್ಸಿನಲ್ಲೂ ಅನೇಕಾನೇಕ ಶಾಂತಿಯುತ ಧರಣಿ, ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡು ನಾಗರಿಕ ಪ್ರಜ್ಞೆ ಮೆರೆದು ಆಡಳಿತದ ಗಮನ ಸೆಳೆದ ಹಿರಿಯ ಚೇತನ ಇಂದು ನಮ್ಮಿಂದ ದೂರವಾಗಿದೆ ಎಂದು ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಜೀರಿಗೆ ಲೋಕೇಶ್ ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post