ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೀತಾ ಶಿವರಾಜ್ ಕುಮಾರ್ Geetha Shivarajkumar ಗ್ಯಾರಂಟಿಯಾಗಿ ಗೆಲ್ಲುತ್ತಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು, ಕೇಂದ್ರ ಕಾಂಗ್ರೆಸ್ ನಾಯಕರ ಚುನಾವಣಾ ಪೂರ್ವ ಹೊಸ ಗ್ಯಾರಂಟಿಗಳ ಆಶ್ವಾಸನೆಗಳು ಅವರನ್ನು ಗೆದ್ದೇ ಗೆಲ್ಲಿಸುತ್ತವೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್ Y H Nagaraj ಹೇಳಿದ್ದಾರೆ.
ಬಿ.ವೈ. ರಾಘವೇಂದ್ರ B Y Raghavendra ಅವರಿಗೆ ಬೈಂದೂರು ಕ್ಷೇತ್ರದಿಂದ ಹೆಚ್ಚು ಮತಗಳು ಸಿಗಲು ಅಲ್ಲಿನ ಮಾಜಿ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಕಾರಣರಾಗಿದ್ದರು. ಆದರೆ, ಇಂದು ಅವರು ಕಾಂಗ್ರೆಸ್ ಸೇರಿದ್ದಾರೆ. ಇದು ರಾಘವೇಂದ್ರ ಅವರಿಗೆ ಬಹುದೊಡ್ಡ ಹೊಡೆತವಾಗಲಿದೆ.
ಹಾಗೆಯೇ ಕೆ.ಎಸ್. ಈಶ್ವರಪ್ಪ K S Eshwarappa ಈಗಾಗಲೇ ಬಂಡಾಯವೆದ್ದಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸಲಿ, ಬಿಡಲಿ. ರಾಘವೇಂದ್ರ ಅವರಿಗೆ ತೊಂದರೆಯಾಗುವುದಂತೂ ನಿಜ. ಹೀಗಾಗಿ ಇದರ ಲಾಭವನ್ನು ಗೀತಾ ಶಿವರಾಜ್ ಕುಮಾರ್ ಪಡೆಯಲಿದ್ದಾರೆ.
Also read: ಗಮನಿಸಿ! ಈ ಇಲಾಖೆಯ ಸಿಬ್ಬಂದಿಗಳಿಗೆ ಅಂಚೆ ಮತದಾನಕ್ಕೆ ಅವಕಾಶ | ಕೊನೆಯ ದಿನಾಂಕ ಎಂದು?
ಜೊತೆಗೆ ಗ್ಯಾರಂಟಿಗಳ ಅಲೆಯಲ್ಲಿ ಮತದಾರರಿದ್ದಾರೆ. ಇದು ಗೀತಾ ಶಿವರಾಜ್ ಕುಮಾರ್ ಅವರ ಕೈಹಿಡಿಯಲಿದೆ. ಈ ಎಲ್ಲಾ ಲೆಕ್ಕಾಚಾರಗಳು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ವರವಾಗಿ ಪರಿಣಮಿಸಲಿವೆ. ಗೀತಾ ಶಿವರಾಜ್ ಕುಮಾರ್, ಸುಮಾರು 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವೈ.ಹೆಚ್. ನಾಗರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post