ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ JNNCE ಕಾಲೇಜಿನಲ್ಲಿ ಶುಕ್ರವಾರ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಓರಿಯಂಟೇಷನ್ ಕಾರ್ಯಕ್ರಮ ಹಾಗೂ ಅಭಿಯಂತರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಪೂರ್ವಜರು ಅಖಂಡ ಶಿಲೆಗಳನ್ನು ವೈಜ್ಞಾನಿಕವಾಗಿ ಕೊರೆದು ಸುಂದರ ದೇವಾಲಯಗಳನ್ನು ನಿರ್ಮಾಣ ಮಾಡಿದ್ದಾರೆ. ಸಾವಿರ ವರ್ಷಗಳ ಹಿಂದೆಯೇ ನಾಲ್ಕು ತಲೆಮಾರುಗಳು ಅದ್ಭುತ ಚಿಂತನೆಗಳೊಂದಿಗೆ ಅತ್ಯುತ್ತಮ ಕಲಾ ಕೃತಿಗಳನ್ನು, ಕಟ್ಟಡ ದೇವಾಲಯಗಳನ್ನು ಸೃಷ್ಟಿಸಿದ ಉದಾಹರಣೆಗಳಿವೆ. ಈ ಎಲ್ಲಾ ವಿಷಯಗಳು ನಮ್ಮ ಪೂರ್ವಜರ ನಾವೀನ್ಯ ಅಭಿಯಂತರ ಚಿಂತನೆಗಳಿಗೆ ಕೈಗನ್ನಡಿಯಾಗಿದೆ.
ಪ್ರಾಸ್ತಾವಿಕ ಮಾತುಗಳನ್ನಾಡಿದ ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ಗಾಂಧೀಜಿಯವರ ಕರೆಯ ಮೇರೆಗೆ ಸ್ಥಾಪಿಸಲ್ಪಟ್ಟ ಎನ್ಇಎಸ್ ಸಂಸ್ಥೆ ಎಲ್ಲರಿಗೂ ಕೈಗೆಟುಕುವ ರೀತಿಯಲ್ಲಿ ಶಿಕ್ಷಣ ನೀಡುತ್ತ ಬಂದಿದೆ. ಕಾಲಕ್ಕೆ ತಕ್ಕಂತೆ ಹೊಸ ತಾಂತ್ರಿಕ ವಿಷಯಗಳನ್ನು ಅಳವಡಿಸಿಕೊಂಡು ಬರುತ್ತಿದೆ. ಕಾಲೇಜಿಗೆ ದಾಖಲಾತಿ ಮಾಡಿದ ಮಾತ್ರಕ್ಕೆ ಪೋಷಕರು ಜವಾಬ್ದಾರಿಯಿಂದ ನುಣುಚಿಕೊಳ್ಳಬೇಡಿ. ಮಕ್ಕಳ ಪ್ರತಿಯೊಂದು ವಿದ್ಯಾಭ್ಯಾಸದ ನಡೆಗೆ ಗಮನಹರಿಸಲು ಕಾಲೇಜಿನ ಮೆಂಟಾರ್ ವ್ಯವಸ್ಥೆಗಳನ್ನು ಬಳಸಿಕೊಳ್ಳಿ ಎಂದು ಹೇಳಿದರು.
ರ್ಯಾಂಕ್ ವಿಜೇತರಿಗೆ ಎನ್ಇಎಸ್ ಚಿನ್ನದ ಪದಕ:
Also read: ಹಿಂದಿ ಎಂದಿಗೂ ಯಾವುದೇ ಭಾರತೀಯ ಭಾಷೆಯೊಂದಿಗೆ ಸ್ಪರ್ಧಿಸಿಲ್ಲ, ಮುಂದೆಯೂ ಸ್ಪರ್ಧಿಸುವುದಿಲ್ಲ: ಅಮಿತ್ ಶಾ
ಕಾರ್ಯಕ್ರಮದಲ್ಲಿ ಎನ್ಇಎಸ್ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಧ್ಯಕ್ಷತೆ ವಹಿಸಿದ್ದರು. ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎನ್.ಟಿ. ನಾರಾಯಣರಾವ್, ಹೆಚ್.ಸಿ.ಶಿವಕುಮಾರ್, ಮಧುರಾವ್, ಎಂ.ಆರ್.ಸೀತಾಲಕ್ಷ್ಮೀ, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಪ್ರಾಂಶುಪಾಲರಾದ ಡಾ.ಪಿ.ಮಂಜುನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post