No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಲಿಕೆಯಲ್ಲಿ ಮಾತೃಭಾಷೆಗೆ ಮೊದಲ ಪ್ರಾಧಾನ್ಯತೆ ನೀಡಿ: ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ

kalpa News by kalpa News
December 14, 2024
in ಶಿವಮೊಗ್ಗ
0
ಕಲಿಕೆಯಲ್ಲಿ ಮಾತೃಭಾಷೆಗೆ ಮೊದಲ ಪ್ರಾಧಾನ್ಯತೆ ನೀಡಿ: ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಲಿಕೆ ಮತ್ತು ಬಳಕೆಯಲ್ಲಿ ಮೊದಲ ಪ್ರಾಧಾನ್ಯತೆಯನ್ನು ನಮ್ಮ ಮಾತೃಭಾಷೆಗೆ #Mother Tongue ನೀಡಿ ಎಂದು ಕರ್ನಾಟಕ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ #UpaLokayuktha Justice K N Panindra ಹೇಳಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ #NES ಹಾಗೂ ಸಿ.ಬಿ.ಆರ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ  ಚಂದನ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ‘ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತರ ಪಾತ್ರ’ ಕುರಿತಾಗಿ ಮಾತನಾಡಿದರು.

ಕಲಿಕೆಗೆ ಯಾವುದೇ ಸೀಮಿತತೆಯಿಲ್ಲ. ಯಾವುದೇ ವಿಷಯಗಳ ಪರಿಣಿತಿಗೆ ಭಾಷೆಯ ಗೊಂದಲಬೇಡ. ಮಾತೃಭಾಷೆಗೆ ಪ್ರಾಮುಖ್ಯತೆ ನೀಡುವ ಜೊತೆಯಲ್ಲಿ, ಯಾವ ಸಂದರ್ಭದಲ್ಲಿ ಯಾವ ಭಾಷೆಯ ಮೂಲಕ ಮಾತನಾಡಿದರೆ ಅದು ಜನರ ಮನಸ್ಸಿಗೆ ತಲುಪುತ್ತದೆ ಎಂಬ ಅರಿವು ಬೇಕಿದೆ. ವಿದ್ಯಾರ್ಥಿ ಜೀವನ ಎಂಬುದು ಆಶೀರ್ವಾದ ಪಡೆದ ಜೀವನ. ನಾವು ಕಲಿತ ವಿಷಯಗಳೇ ವೃತ್ತಿ ಜೀವನದ ತಳ ಹದಿ.
ವಕೀಲಿ ವೃತ್ತಿ ಎಂಬುದು ಜನರಿಗೆ ಹತ್ತಿರವಾಗಿರುವ ವೃತ್ತಿ. ಹೇಗೆ ತಮ್ಮ ದೈಹಿಕ ನೋವಿಗೆ ವೈದ್ಯರನ್ನು ಸಂಪರ್ಕಿಸುತ್ತಾರೆ, ಅದೆ ರೀತಿಯಲ್ಲಿ ಸಾಮಾಜಿಕ ಜೀವನ ನೋವಿಗೆ ಸ್ಪಂದಿಸುವವರು ವಕೀಲರು. ಹಾಗಾಗಿಯೇ ವಕೀಲಿ ವೃತ್ತಿಯನ್ನು ನೊಬಲ್‌ ಪ್ರೊಫೆಷನ್‌ ಎಂದು ಬಣ್ಣಿಸಲಾಗಿದೆ.

ದೇಶವನ್ನು ಸುಭದ್ರವಾಗಿ ಕಟ್ಟುವ ಕಾರ್ಯದಲ್ಲಿ ವಕೀಲರ ಪಾತ್ರ ಮಹತ್ವದ್ದು. ವಕೀಲರಾಗಿದ್ದ ಮಹಾತ್ಮ ಗಾಂಧೀಜಿ ಸ್ವಾತಂತ್ರ ಚಳುವಳಿಗೆ ಅದ್ಫುತ ಕೊಡುಗೆ ನೀಡಿದರು. ಅಂತಹ ಸಂಘನೆಗೆ ವಕೀಲಿ ವೃತ್ತಿಯ ಅನುಭವವು ಹೆಚ್ಚು ಪ್ರೇರಣೆ ನೀಡಿದೆ. ಇಂತಹ ಒಂದು ಪೀಳಿಗೆಯಿಂದ ಬಂದ ವಕೀಲಿ‌ ವೃತ್ತಿಯ ಮೂಲಕ ಸಮಾಜವನ್ನು ಕಟ್ಟುವ ಕಾರ್ಯ ಯುವ ಸಮೂಹ ಮಾಡಬೇಕಿದೆ.

Also read: ಗಮನಿಸಿ ! ಡಿ.15, 16ರಂದು ಶಿವಮೊಗ್ಗ ಗ್ರಾಮಾಂತರ-ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸಾರ್ವಜನಿಕ ಆಡಳಿತದಲ್ಲಿ ಉಂಟಾಗುತ್ತಿರುವ ತೊಡಕುಗಳನ್ನು ನಿವಾರಿಸಲು ಲೋಕಾಯುಕ್ತ ಕಾಯ್ದೆ ಉತ್ತಮವಾದ ಕಾನೂನು. ಪ್ರತಿಯೊಬ್ಬ ಮಾನವನಿಗೆ ಬದುಕುವ ಹಕ್ಕಿದೆ. ಅಂತಹ ಬದುಕಿಗೆ ಬೇಕಾದ ಮೂಲಭೂತ ಅಗತ್ಯತೆಗಳನ್ನು ಒದಗಿಸುವುದು ಆಡಳಿತದ ಕರ್ತವ್ಯ. ಅದರೆ ಭ್ರಷ್ಟಾಚಾರ ವ್ಯವಸ್ಥೆಯಿಂದ, ದುರಾಡಳಿತದಿಂದ ಮನುಷ್ಯನಿಗೆ ಬದುಕಲು ಬೇಕಾದ ಅನಿವಾರ್ಯತೆಗಳನ್ನು ನೀಡುವಲ್ಲಿ ವಿಫಲವಾದಾಗ, ಲೋಕಾಯುಕ್ತ ವ್ಯವಸ್ಥೆ ಸಾಮಾನ್ಯ ಜನರ ಪರವಾಗಿ ನಿಲ್ಲುತ್ತದೆ.

ಸಮಯೋಚಿತವಾಗಿ ಕಾನೂನನ್ನು ಬಳಕೆ ಮಾಡಿಕೊಳ್ಳಬೇಕು. ಕರ್ತವ್ಯ ಮತ್ತು ಹಕ್ಕು ಒಂದು ನಾಣ್ಯದ ಎರಡು ಮುಖಗಳು. ಸತ್ತ ನಂತರವೂ ವ್ಯಕ್ತಿಯ ಮೃತದೇಹವನ್ನು ಕಾನೂನು ಕಾಪಾಡುತ್ತದೆ.‌ ಅಷ್ಟರ ಮಟ್ಟಿಗೆ ಕಾನೂನು ಮಾನವ ಹಕ್ಕುಗಳನ್ನು ಎತ್ತಿಹಿಡಿಯುತ್ತಿದೆ. ಮೌಡ್ಯತೆ ಹೆಚ್ಚು ಪ್ರಾಬಲ್ಯಗೊಂಡಾಗ ಕಾನೂನು ಮಧ್ಯಪ್ರವೇಶಿಸುತ್ತದೆ. ಅದಕ್ಕೆ ಲಿಂಗ ತಾರತಮ್ಯ ಹೋಗಲಾಡಿಸಿ, ಎಲ್ಲರಿಗೂ ಬದುಕುವ ಹಕ್ಕಿದೆ ಎಂದು ಸಾರಿ ಹೇಳುವ ಕಾಯ್ದೆಗಳು ತೀರ್ಪುಗಳು ಉದಾಹರಣೆಯಾಗಿದೆ. ಒಬ್ಬರ ಹಕ್ಕುಗಳನ್ನು ಇನ್ನೊಬ್ಬರು ಕಾಪಾಡುವುದು ಕೂಡ ಮೂಲಭೂತವಾಗಿ ಕರ್ತವ್ಯವೆ ಆಗಿದೆ.
ಲಂಚಕ್ಕೆ #Bribe ಹೆಚ್ಚು ಪ್ರಾಮುಖ್ಯತೆ ಸಿಗುತ್ತಿದೆ. ಹಣವಿಲ್ಲದೆ ಏನು ಆಗುವುದಿಲ್ಲ ಎಂಬ ಪರಿಸ್ಥಿತಿ ಸಾರ್ವಜನಿಕ ಆಡಳಿತದಲ್ಲಿದೆ. ಇಂತಹ ವ್ಯವಸ್ಥೆಯನ್ನು ಸರಿಪಡಿಸುವಲ್ಲಿ ಸಾಮಾನ್ಯ ಜನರು ಕೂಡ ಲೋಕಾಯುಕ್ತದೊಂದಿಗೆ ಕೈಜೋಡಿಸಿ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್‌ ಮಾತನಾಡಿ, ಆಧುನಿಕತೆ ಬೆಳೆದಂತೆಲ್ಲ ಭ್ರಷ್ಟಾಚಾರವು ತನ್ನ ಪ್ರಾಬಲ್ಯವನ್ನು ಬೆಳೆಸಿದೆ. ಈ ನಿಟ್ಟಿನಲ್ಲಿ ಲೋಕಾಯುಕ್ತ ವ್ಯವಸ್ಥೆ ನೊಂದವರ ದನಿಯಾಗಲಿ ಎಂದು ಆಶಿಸಿದರು.

ಎನ್‌ಇಎಸ್‌ ಕಾರ್ಯದರ್ಶಿ ಎಸ್.ಎನ್.ನಾಗರಾಜ, ನಿರ್ದೇಶಕರಾದ ಎಂ.ಆರ್.ಸೀತಾಲಕ್ಷ್ಮೀ, ಅನಂತದತ್ತ, ಅಶ್ವಥನಾರಾಯಣ ಶ್ರೇಷ್ಟಿ, ಶಿವಕುಮಾರ್‌, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಸ್ವಾಮಿ, ಪ್ರಾಂಶುಪಾಲರಾದ ಡಾ.ಎ.ಅನಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: BribeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMother tongueNESNews_in_KannadaNews_KannadaShimogaShivamoggaNewsUpaLokayuktha Justice K N Panindraಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರಮಲೆನಾಡು_ಸುದ್ಧಿಮಾತೃಭಾಷೆರಾಷ್ಟ್ರೀಯ ಶಿಕ್ಷಣ ಸಮಿತಿಲಂಚಕ್ಕೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ ! ಡಿ.15, 16ರಂದು ಶಿವಮೊಗ್ಗ ಗ್ರಾಮಾಂತರ-ನಗರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ರಾಯಚೂರು | ಪೋಟ್ನಾಳದಲ್ಲಿ ನಿರ್ಮಾಣವಾಗಲಿದೆ ಹೊಸ ಕ್ರಾಸಿಂಗ್ ರೈಲ್ವೆ ನಿಲ್ದಾಣ

kalpa News

kalpa News

Next Post
ಪ್ರಯಾಣಿಕರೆ ಗಮನಿಸಿ! ಮಾರ್ಚ್ 31ರವರೆಗೂ ದೇಶದಲ್ಲಿ ಎಲ್ಲ ರೈಲು ಸಂಚಾರ ರದ್ದಾಗಿದೆ

ರಾಯಚೂರು | ಪೋಟ್ನಾಳದಲ್ಲಿ ನಿರ್ಮಾಣವಾಗಲಿದೆ ಹೊಸ ಕ್ರಾಸಿಂಗ್ ರೈಲ್ವೆ ನಿಲ್ದಾಣ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL