ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಹಾಗೂ ಶಾಂತಿ ಪ್ರಿಯರಾಗಿರುವ ಬಿ.ಕೆ. ಸಂಗಮೇಶ್ವರ BKSangameshwar ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಭದ್ರಾವತಿ ಕಾಂಗ್ರೆಸ್ ಮುಖಂಡರು ಹಾಗೂ ರಾಜ್ಯ ಬಂಜಾರ್ ಯುವ ರೈತ ಮುಖಂಡರು ಆಗ್ರಹಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು ಅವರು ಶಾಂತಿ ಪ್ರಿಯ ಬಿಕೆ ಸಂಗಮೇಶ್ವರ್ ಗೆ ಸಚಿವ ಸ್ಥಾನ ದೊರಕಿದ್ದೆ ಆದಲ್ಲಿ ಭದ್ರಾವತಿಯಲ್ಲಿ ಉಳಿವಿನ ಹಂಚಿನಲ್ಲಿರುವ ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಗಳನ್ನು ಪುನರಾರಂಭ ಮಾಡಿಸಿ ಸಾವಿರಾರು ಕಾರ್ಮಿಕರಿಗೆ ಕೆಲಸ ದೊರಕಲಿದೆ ಜೊತೆಗೆ ಸಾವಿರಾರು ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದರು.

ಇನ್ನು ಸಂಗಮೇಶ ಅವರಿಗೆ 2018ರಲ್ಲಿ ಬಿಜೆಪಿಯಿಂದ ಸಾಕಷ್ಟು ಆಫರ್ ಗಳು ಬಂದಿದ್ದರೂ ಕೂಡ ಅವರು ನಯವಾಗೆ ತಿರಸ್ಕರಿಸಿ ನಾನು ಪಕ್ಷಕ್ಕೆ ನಿಷ್ಠ ಎಂದು ಅವರು ಪಕ್ಷದಲ್ಲಿ ಉಳಿದುಕೊಂಡಿದ್ದರು ಹಾಗಾಗಿ ಅವರ ಮೇಲೆ ನಂಬಿಕೆ ಇಟ್ಟುಕೊಂಡು ಈ ಬಾರಿ ಸಚಿವ ಸ್ಥಾನ ನೀಡಿದೆ ಆದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಭದ್ರಾವತಿ ತಾಲೂಕಿನ ಅಭಿವೃದ್ಧಿಯನ್ನು ಕಾಣಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕೃಷ್ಣಾನಾಯ್ಕ್, ಕವಿತಾ ಮತ್ತಿರರು ಉಪಸಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post