No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಣ, ವಸತಿ, ರೈತರ ಸಾಲಕ್ಕೆ ಆದ್ಯತೆ ನೀಡಿ | ಬ್ಯಾಂಕ್’ಗಳಿಗೆ ಸಂಸದ ರಾಘವೇಂದ್ರ ಸೂಚನೆ

ಶಿವಮೊಗ್ಗ | ಡಿಸಿಸಿ, ಡಿಎಲ್'ಆರ್'ಸಿ ಸಭೆ | ಬ್ಯಾಂಕ್ ಅಧಿಕಾರಿಗಳು ಭಾಗಿ

kalpa News by kalpa News
March 24, 2026
in ಶಿವಮೊಗ್ಗ
0
ಶಿಕ್ಷಣ, ವಸತಿ, ರೈತರ ಸಾಲಕ್ಕೆ ಆದ್ಯತೆ ನೀಡಿ | ಬ್ಯಾಂಕ್’ಗಳಿಗೆ ಸಂಸದ ರಾಘವೇಂದ್ರ ಸೂಚನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ ಯೋಜನೆಗಳನ್ನು ಹಾಗೂ ಬ್ಯಾಂಕಿಂಗ್ ಸೇವೆಗಳನ್ನು ಸರಳಗೊಳಿಸಿ ಜನಸಾಮಾನ್ಯರಿಗೆ ತಲುಪಿಸಬೇಕೆಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಡಿಸಿಸಿ ಮತ್ತು ಡಿಎಲ್‌ಆರ್’ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಯಾಂಕುಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದ್ದು ಬ್ಯಾಂಕ್’ಗಳ ಸೇವೆ ಸ್ಮರಣೀಯವಾಗಿರುತ್ತದೆ. ಸರ್ಕಾರದ ಪ್ರತಿಯೊಂದು ಸೌಲಭ್ಯವು ಜಿಲ್ಲೆಯ ಕಟ್ಟಕಡೆಯ ವ್ಯಕ್ತಿಗೂ ತಲುಪುಂತಾಗಬೇಕು. ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ನಿಲುಕುವಂತೆ ಸರಳಗೊಳಿಸಿ ನೀಡಬೇಕು ಎಂದು ತಿಳಿಸಿದರು.
ಪಿಎಂ ವಿಶ್ವಕರ್ಮ ಯೋಜನೆಯಡಿ #PM Vishwakarma Scheme ಬ್ಯಾಂಕುಗಳಲ್ಲಿ ಸುಮಾರು ಅರ್ಧದಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಯಾವ ಕಾರಣಕ್ಕೆ ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಬ್ಯಾಂಕ್ ಅಧಿಕಾರಿಗಳು ಮತ್ತೊಮ್ಮೆ ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸಾಲ, ಶಿಕ್ಷಣ ಸಾಲ, ವಸತಿ ಯೋಜನೆಯಡಿ ಸಾಲ ವಿತರಣೆಗೆ ಆದ್ಯತೆ ನೀಡಬೇಕು ಎಂದರು.

ಬ್ಯಾಂಕ್’ಗಳ ಅಧಿಕಾರಿಗಳು ಸಭೆಗೆ ಹಾಜರಾಗಿ ಮಾಹಿತಿ ನೀಡಬೇಕು. 260 ಬ್ರಾಂಚ್’ಗಳಲ್ಲಿ ಮಾತ್ರ ಡಿಎಲ್ಸಿಸಿ ಸಭೆ ಆಗಿದೆ. 85 ಬ್ರಾಂಚ್’ಗಳಲ್ಲಿ ಆಗಿಲ್ಲ. ನಿಯಮಿತವಾಗಿ ಸಭೆಗಳನ್ನು ಕೈಗೊಂಡು ಕ್ರಮ ವಹಿಸಬೇಕೆಂದು ಇದೇ ವೇಳೆ ತಿಳಿಸಿದರು.

ಮಾರ್ಚ್ 24 ರಿಂದ 26 ರವರೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಪಿಎಂ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ವ್ಯಾಪಾರ ಮೇಳ ಏರ್ಪಡಿಸಲಾಗಿದ್ದು ಇಲ್ಲಿ ಒಟ್ಟು 50 ಮಳಿಗೆಗಳನ್ನು ತೆರೆಯಲಾಗುತ್ತಿದೆ. ಫಲಾನುಭವಿಗಳು ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಹಾಗೂ ಕಾರ್ಯಕ್ರಮ ಯಶಸ್ವಿಯಾಗಲು ಎಲ್ಲಾ ಬ್ಯಾಂಕುಗಳು ಕೈಜೋಡಿಸಬೇಕೆಂದು ಎಂದು ಮನವಿ ಮಾಡಿದರು.

ಪಿಎಂ ಕಿಸಾನ್, ಪಿಎಂ ಮುದ್ರಾ, ಪಿಎಂ ಸ್ವನಿಧಿ, ಎಸ್ಸಿ/ಎಸ್ಟಿ, ಮಹಿಳೆ ಮತ್ತು ಅಲ್ಪಸಂಖ್ಯಾತರಿಗಾಗಿ ಇರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಕೆನರಾ ಬ್ಯಾಂಕ್ ಡಿಜಿಎಂ ಮತ್ತು ಪ್ರಾದೇಶಿಕ ಮುಖ್ಯಸ್ಥರಾದ ಆರ್. ದೇವರಾಜ್ ಮಾತನಾಡಿ, 2025 ರ ಡಿಸೆಂಬರ್ ಅಂತಕ್ಕೆ ಕೃಷಿ ಕ್ಷೇತ್ರದಲ್ಲಿ ಶೇ.74.26 ಪ್ರಗತಿ ಸಾಧನೆ ಮಾಡಿದ್ದು 2024 ನೇ ಸಾಲಿಗಿಂತ ಶೇ.31.26 ಪ್ರಗತಿ ಸಾಧಿಸಲಾಗಿದೆ. ಎಂಎಸ್’ಎಅಇ ವಲಯದಲ್ಲಿ ಶೇ.80.03 ಪ್ರಗತಿ ಸಾಧಿಸಿದ್ದು 2024 ನೇ ಸಾಲಿಗಿಂತ ಶೇ.11.49 ಹೆಚ್ಚು ಪ್ರಗತಿ ಸಾಧಿಸಲಾಗಿದೆ.

ವಸತಿ ಸಾಲ ವಿತರಣೆ ಪ್ರಗತಿ ಕಡಿಮೆಯಾಗಿದ್ದು, ಆದ್ಯತೆ ಮೇಲೆ ಸಾಲ ವಿತರಣೆಗೆ ಬ್ಯಾಂಕುಗಳು ಕ್ರಮ ವಹಿಸಬೇಕು. ಪಿಎಂ ವಿಶ್ವಕರ್ಮ ಯೋಜನೆಯಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.

ಜಿಪಂ ಸಿಇಓ ಎನ್. ಹೇಮಂತ್ ಮಾತನಾಡಿ, ಬ್ಯಾಂಕುಗಳು ಪ್ರಧಾನಮಂತ್ರಿ ವಿಶ್ವಕರ್ಮ, ಮುದ್ರಾ ಸೇರಿದಂತೆ ಪಿಎಂ ಸಾಲ/ಸೌಲಭ್ಯ ನೀಡುವ ಯೋಜನೆಗಳಡಿ ಬಂದಅತಹ ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಮಂಜೂರು ಮಾಡಬೇಕು. ಪಿಎಂ ವಿಶ್ವಕರ್ಮ ಯೋಜನೆಯಡಿ 10994 ಅರ್ಜಿಗಳು ಸ್ವೀಕೃತವಾಗಿದ್ದು 5169 ಅರ್ಜಿಗಳು ಮಂಜೂರಾಗಿವೆ. ಶೇ.50 ರಷ್ಟು ಅರ್ಜಿಗಳು ತಿರಸ್ಕೃತಗೊಂಡಿವೆ. ಇದಕ್ಕೆ ಸಮರ್ಪಕವಾದ ಕಾರಣಗಳನ್ನು ಒದಗಿಸುವ ವರದಿಯನ್ನು ಬ್ಯಾಂಕುವಾರು ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳು ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ, ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಪಿಎಂ ಸ್ವನಿಧಿ ಯೋಜನೆಯಡಿ ಮೊದಲನೇ ಹಂತದ ಸಾಲ ವಿತರಣೆ ಪ್ರಗತಿ ಚೆನ್ನಾಗಿದೆ. 2 ಮತ್ತು ಮೂರನೇ ಭಾಗದ ಸಾಲ ಪ್ರಗತಿ ಮತ್ತು ಪ್ರಕ್ರಿಯೆ ನಿಧಾನವಾಗಿದೆ. ಇದನ್ನು ಚುರುಕುಗೊಳಿಸಿ, ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದರು.

ಎಲ್ಲ ಬ್ಯಾಂಕುಗಳು ಕಿಸಾನ್ ಕ್ರೆಡಿಟ್ ಕಾರ್ಡ್’ಗಳನ್ನು ಸಮರ್ಪಕವಾಗಿ ನಿಗದಿತ ಗುರಿಯನ್ವಯ ವಿತರಣೆ ಮಾಡಬೇಕು. ಪ್ರಗತಿ ಸಾಧಿಸದ, ಹಾಗೂ ಕಡಿಮೆ ಪ್ರಗತಿ ಮಾಡಿರುವ ಬ್ಯಾಂಕುಗಳು ಈ ಕುರಿತು ಕೂಡಲೇ ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದರು.

ಹಣಕಾಸು ಸಾಕ್ಷರತಾ ಕೇಂದ್ರ(ಎಫ್’ಎಲ್ಸಿ)ಗಳು ಹಾಗೂ ಸೆಂಟರ್ ಫಾರ್ ಫೈನಾನ್ಷಿಯಲ್ ಲಿಟರಸಿಗಳು ಪರಿಣಾಮಕಾರಿಯಾಗಿ ಆಯ್ದ ಸ್ಥಳಗಳಲ್ಲಿ ಶಿಬಿರಗಳನ್ನು, ಸಭೆಗಳನ್ನು ನಡೆಸಿ ಬ್ಯಾಂಕ್ ಖಾತೆ ತೆರೆಯುವುದು, ವಿವಿಧ ಯೋಜನೆಗಳು ಸೇರಿದಂತೆ ಹಣಕಾಸು ವಿಷಯದಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.

ಪಿಎಂ ಫಾರ್ಮಲೈಸೇಷನ್ ಆಫ್ ಮೈಕ್ರೊ ಫುಡ್ ಪ್ರಾಸೆಸಿಂಗ್ ಎಂಟಪ್ರೈಸಸ್ ಯೋಜನೆಯಡಿ ಶಿವಮೊಗ್ಗಕ್ಕೆ 200 ಗುರಿ ನೀಡಲಾಗಿದ್ದು 114 ಸಾಧನೆ ಸಾಧಿಸಿದೆ. ಬಾಕಿ ಉಳಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ತಿಳಿಸಿದರು.
ಪಿಎಂಜೆಜೆಬಿವೈ, ಪಿಎಂಎಸ್ಬಿವೈ, ಕೆವಿಐಬಿ ಪ್ರಾಯೋಜಿತ ಪಿಎಂಇಜಿಪಿ ಯೋಜನೆಗಳಡಿ ಗುರಿಯನ್ವಯ ಸಾಧನೆ ಮಾಡಬೇಕು. ಪಿಎಂ ಯೋಜನೆಗಳು/ಕಾರ್ಯಕ್ರಮಗಳ ಪ್ರಗತಿಯಲ್ಲಿ ಹಿಂದೆ ಇರುವ ಬ್ಯಾಂಕುಗಳು ಸೂಕ್ತ ಕ್ರಮ ಕೈಗೊಂಡು ನಿಗದಿತ ಪ್ರಗತಿಯನ್ನು ಸಾಧಿಸಬೇಕು. ಯಾವುದೇ ಸಾಲ/ಸೌಲಭ್ಯ/ಅರಿವು ನೀಡುವ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಜಿಪಂ ಸಹಕಾರ ಎಂದಿಗೂ ಇದೆ. ಆಶಾ, ಅಂಗನವಾಡಿ ಸಹಾಯಕರು, ಪಂಚಾಯ್ತಿ ಸಹಾಯಕರ ಸಹಾಯವನ್ನು ಸಹ ಪಡೆಯಬಹುದು ಎಂದರು.

ಸಭೆಯಲ್ಲಿ ಪಿಎಂಇಜಿಪಿ, ಪಿಎಂ ಸೂರ್ಯ ಘರ್ ಪಿಎಂ ಎಫ್’ಎಂಇ ಯೋಜನೆಯಡಿ 15 ಫಲಾನುಭವಿಗಳಿಗೆ ಶಾಮಿಯಾನ, ರೋಟಿ ಮೇಕರ್, ಶಿಕ್ಷಣಕ್ಕೆ ಸಂ ಬಂಧಿಸಿದ ಸಾಲದ ಚೆಕ್ ವಿತರಿಸಲಾಯಿತು.

ಸಭೆಯಲ್ಲಿ ಆರ್’ಬಿಐ ಲೀಡ್ ಜಿಲ್ಲಾ ಅಧಿಕಾರಿ ಎಸ್. ಸೂರಜ್, ನಬಾರ್ಡ್ ಜಿಲ್ಲಾ ಅಭಿವೃದ್ದಿ ಪ್ರಬಂಧಕ ಶರತ್ ಗೌಡ, ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಪಿ, ವಿವಿಧ ಬ್ಯಾಂಕುಗಳ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaPM Vishwakarma SchemeShimogaShivamoggaNewsಪಿಎಂ ವಿಶ್ವಕರ್ಮ ಯೋಜನೆಯಡಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

3 ದಿನ ಮಡಿಕೇರಿಯಲ್ಲಿ ನಡೆಯಲಿದೆ ಉದ್ಯೋಗ ಮೇಳ | ಯಾರೆಲ್ಲಾ ಪಾಲ್ಗೊಳ್ಳಬಹುದು?

Next Post

ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು | ಸುಪ್ರೀಂ ಕೋರ್ಟ್

kalpa News

kalpa News

Next Post
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಈ ಮೂರು ಧರ್ಮ ಬಿಟ್ಟು ಬೇರೆ ಧರ್ಮಕ್ಕೆ ಕನ್ವರ್ಟ್ ಆದರೆ SC, ST ಸ್ಥಾನಮಾನ ರದ್ದು | ಸುಪ್ರೀಂ ಕೋರ್ಟ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL