ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣೆಯ ಸೋಲಿನ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಒಬ್ಬರು ಗೆಲ್ಲಬೇಕಿತ್ತು. ಅವರು ಗೆದ್ದಿದ್ದಾರೆ. ನಮಗೆ ಯಾರೂ ಶತ್ರುಗಳಲ್ಲ, ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದೂ ಸರಿಯಲ್ಲ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ನಟ ಶಿವರಾಜ್ ಕುಮಾರ್ #Shivarajkumar ಹೇಳಿದರು.
ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಗೀತಾ ಗೆಲುವಿಗಾಗಿ ಎಲ್ಲರೂ ಶ್ರಮಪಟ್ಟಿದ್ದಾರೆ. ಗೆಲ್ಲುವ ವಿಶ್ವಾಸವಿತ್ತು ನಿಜ. ಆದರೆ ಸೋತಿದ್ದಾರೆ. ಫಿಲಂ ಚೇಂಬರ್ ನಿಂದ ಹಿಡಿದು ನಟರು, ನಟಿಯರು ಕೂಡ ಪ್ರಚಾರಕ್ಕೆ ಬಂದಿದ್ದರು. ಕಾರ್ಯಕರ್ತರು ಕೂಡ ಹಗಲು ರಾತ್ರಿ ಕೆಲಸ ಮಾಡಿದ್ದಾರೆ. ಎಲ್ಲರಿಗೂ ಅಭಿನಂದನೆ ಎಂದರು.
Also read: ಲೋಕಸಭಾ ಚುನಾವಣೆ ಪರಾಭವದ ಬಳಿಕ ಗೀತಾ ಶಿವರಾಜ್ಕುಮಾರ್ ಫಸ್ಟ್ ರಿಯಾಕ್ಷನ್
ಕುಮಾರ್ ಬಂಗಾರಪ್ಪರ #Kumar Bangarappa ಮನೆ ಮೇಲೆ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ. ದೇವರು ಇದ್ದಾನೆ. ನೋಡಿಕೊಳ್ಳುತ್ತಾನೆ. ನಟರೆಂದ ಮೇಲೆ ಅಭಿಮಾನಿಗಳು ಇದ್ದೇ ಇರುತ್ತಾರೆ. ಯಾರ ಬಗ್ಗೆಯೂ ನಾನು ಹೇಳುವುದಿಲ್ಲ. ಯಾರಾದರೊಬ್ಬರು ಗೆಲ್ಲಲೇಬೇಕಿತ್ತಲ್ಲವೇ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























