ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಚಿನ್ನದ ಸರ ಮತ್ತು ನಗದು ಕಳ್ಳತನವಾಗಿರುವ ಘಟನೆ ನಡೆದಿದ್ದು, ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ಬ್ಯಾಗ್ ತೆಗೆದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಹಿನ್ನೆಲೆ:
ಪದ್ಮಾವತಿ ರಾವ್ ಎಂಬುವವರು ಉಡುಪಿಯಲ್ಲಿ ಮನೆ ದೇವರ ಪೂಜೆ ಮುಗಿಸಿ ಖಾಸಗಿ ಬಸ್ಸಿನಲ್ಲಿ ಶಿವಮೊಗ್ಗಕ್ಕೆ ಬಂದಿದ್ದರು. ಇಲ್ಲಿಂದ ತಮ್ಮೂರು ಹಾವೇರಿ ಜಿಲ್ಲೆ ಹಿರೇಕೆರೂರಿನ ಹಂಸಬಾವಿಗೆ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಹೊರಟಿದ್ದರು. ಬಸ್ಸಿನಲ್ಲಿ ಟಿಕೆಟ್ ಮಾಡಿಸಲು ತಮ್ಮ ವ್ಯಾನಿಟಿ ಬ್ಯಾಗ್ ತೆಗೆದಾಗ ಕಳ್ಳತನವಾಗಿರುವ ಬಗ್ಗೆ ತಿಳಿದುಬಂದಿದೆ.
Also read: ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಮುಚ್ಚಿ: ಕಾಂಗ್ರೆಸ್ ಆಗ್ರಹ
ವ್ಯಾನಿಟಿ ಬ್ಯಾಗಿನಲ್ಲಿ 15 ಸಾವಿರ ರೂ. ನಗದು, ಅಂದಾಜು 1.32 ಲಕ್ಷ ರೂ. ಮೌಲ್ಯದ 33 ಗ್ರಾಂ ತೂಕದ ಬಂಗಾರದ ಅವಲಕ್ಕಿ ಸರ ಕಳ್ಳತನವಾಗಿದ್ದು, ಪದ್ಮಾವತಿ ರಾವ್ ಅವರು ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಸಂಬಂಧ ತನಿಖೆ ಮುಂದುವರೆದಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















