ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮದಲ್ಲಿ ರೇಷ್ಮೆ, ಯುವ ಸಬಲೀಕರಣ, ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ Minister Narayana Gowda ಅವರು ಕನ್ನಡ ಗೀತೆಗಳ ಗಾಯನಕ್ಕೆ ದನಿಗೂಡಿಸಿದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ನಗರದ ವಿವಿಧ ಕನ್ನಡ ಸಂಘಟನೆಗಳು, ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಕನ್ನಡದ ಗೀತೆಗಳನ್ನು ಹಾಡಿದರು.

ಗಾಯನ ಕಾರ್ಯಕ್ರಮದ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಎಲ್ಲರೂ ಭಾಗಿಯಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದೀರಿ. ಎರಡನೇ ಬಾರಿ ಈ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕನ್ನಡಿಗರಿಗೆ ಇದೊಂದು ಹೆಮ್ಮೆಯಾಗಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ಬೇರೆಡೆಗಳಲ್ಲಿ ಸಹ ನಡೆಯುತ್ತಿರುವುದು ಸಂತಸದ ವಿಚಾರವಾಗಿದ್ದು, ಕಾರ್ಯಕ್ರಮ ಆಯೋಜಿಸಿದ ಮುಖ್ಯಮಂತ್ರಿಗಳು ಮತ್ತು ಯಶಸ್ವಿಗೊಳಿಸಿದ ಎಲ್ಲರಿಗೆ ಅಭಿನಂದಿಸುತ್ತೇನೆ ಎಂದರು.

ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ Ayanuru Manjunath ಮಾತನಾಡಿ, ಕೋಟಿ ಕಂಠಗಳ ನಿನಾದ ಮುಗಿಲೆತ್ತರಕ್ಕೇರುತ್ತಿದೆ. ಎರಡು ಜ್ಞಾನಪೀಠ ಪ್ರಶಸ್ತಿ ಪಡೆದ ಏಕಮಾತ್ರ ಜಿಲ್ಲೆ ನಮ್ಮದಾಗಿದ್ದು, ಇಬ್ಬರು ರಾಷ್ಟ್ರಕವಿಗಳನ್ನು ಹೊಂದಿರವ, ಎಲ್ಲ ರೀತಿಯ ಪ್ರಾಕೃತಿಕ ಸೊಬಗ£ ಮತ್ತು ಕನ್ನಡದ ಮೊದಲ ಕವಯಿತ್ರಿ ಅಕ್ಕಮಹಾದೇವಿ ಹುಟ್ಟಿದ ನಮ್ಮ ಜಿಲ್ಲೆಯ ಸ್ವರ ವಿಶೇಷವಾಗಿದ್ದು ಕಾರ್ಯಕ್ರಮ ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರಕ್ಕೆ ಹಾಗೂ ಯಶಸ್ವಿಗೊಳಿಸಿದ ಎಲ್ಲರಿಗೆ ಧನ್ಯವಾದಗಳು ಎಂದು ತಿಳಿಸಿದರು.

Also read: ಶಿವಮೊಗ್ಗ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ: ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮಿ?
ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಕೋಟಿ ಕಂಠ ಗಾಯನ:
ಜಿಲ್ಲಾಧಿಕಾರಿಗಳ ಕಚೇರಿರಿ ಆವರಣ, ಜೋಗ ಜಲಪಾತ ಎದುರು, ಜೋಗ, ನರಸಿಂಹಸ್ವಾಮಿ ದೇವಸ್ಥಾನ ಎದುರು, ಭದ್ರಾವತಿ, ಬಿದನೂರು ಕೋಟೆ ಎದುರು, ನಗರ, ಹೊಸನಗರ, ಕುವೆಂಪು ಮನೆ, ಕುಪ್ಪಳಿ, ತೀರ್ಥಹಳ್ಳಿ, ಶಾಹಿ ಗಾರ್ಮೆಂಟ್ಸ್, ಶಿವಮೊಗ್ಗ, ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಿವಮೊಗ್ಗ, ಕುವೆಂಪು ವಿಶ್ವವಿದ್ಯಾಲಯ ಶಂಕರಘಟ್ಟ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಸೇರಿದಂತೆ ದೇಶೀಯ ವಿದ್ಯಾಶಾಲೆ, ಪೆಸಿಟ್, ಜವಾಹರಲಾಲ್ ನೆಹರು ತಾಂತ್ರಿಕ ಕಾಲೇಜು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಇತರೆ ವಿದ್ಯಾಲಯಗಳಲ್ಲಿಯೂ ಸಹ ಕೋಟಿ ಕಂಠ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.












Discussion about this post