Wednesday, June 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನಗಳ ಸದ್ಭಳಕೆ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿ: ಡಾ. ನಾಗರಾಜ್ ಅಭಿಪ್ರಾಯ

ಪಿಇಎಸ್‌ಐಟಿಎಮ್ ಕಾಲೇಜಿನಲ್ಲಿ ಇಂಟರ್‌ನೆಟ್ ಆಫ್ ಥಿಂಗ್ಸ್ ಕುರಿತು ಪ್ರಾಯೋಗಿಕ ಪ್ರದರ್ಶನ ಮೇಳ ಸಂಪನ್ನ

February 19, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರಸಕ್ತ ಕಾಲಘಟ್ಟದಲ್ಲಿ ದೈನಂದಿನ ಚಟುವಟಿಕೆಗಳನ್ನು ಚಾಣಾಕ್ಷತನದಿಂದ ಅತಿ ಕಡಿಮೆ ಅವಧಿಯಲ್ಲಿ ಸಂಪೂರ್ಣಗೊಳಿಸಲು ತಾಂತ್ರಿಕ ಕ್ಷೇತ್ರವು ಕೊಡುಗೆಯಾಗಿ ನೀಡುತ್ತಿರುವ ಹಲವು ಪ್ರಾಯೋಗಿಕ ತಂತ್ರಜ್ಞಾನಗಳ ಸದ್ಭಳಕೆಯು ಪ್ರಸ್ತುತತೆಯನ್ನು ಹೊಂದಿದೆ ಎಂದು ಪಿಇಎಸ್ ಟ್ರಸ್ಟ್‌ನ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ನಾಗರಾಜ್ ಆರ್. ತಿಳಿಸಿದರು.

ನಗರದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಇಂಟರ್‌ನೆಟ್ ಆಫ್ ಥಿಂಗ್ಸ್ ವಿಷಯದ ಕುರಿತಾದ ಪ್ರಾಯೋಗಿಕ ಪ್ರದರ್ಶನ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿ, ಕಾಲಕಾಲಕ್ಕೆ ವೈಜ್ಞಾನಿಕ ಹಾಗೂ ತಾಂತ್ರಿಕ ಕ್ಷೇತ್ರವು ಒಟ್ಟಾರೆಯಾಗಿ ಪ್ರಯೋಗಗಳನ್ನು ಕಾರ್ಯಗತರೂಪಕ್ಕೆ ತಂದು ಅಸಾಧಾರಣ ಮಟ್ಟದಲ್ಲಿ ದೇಶದ ಹಾಗೂ ಮಾನವ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗುವಂತೆ ಕಾರ್ಯನಿರ್ವಹಿಸುತ್ತಲೇ ಬಂದಿದೆ ಎಂದರು.
ಜೀವನಮಟ್ಟವನ್ನು ಸುಧಾರಿಸುವಲ್ಲಿ ಹಾಗೂ ಉತ್ತುಂಗದೆಡೆಗೆ ತಲುಪುವಲ್ಲಿ ಒಂದು ಪ್ರಮುಖ ಅಸ್ತ್ರವಾಗಿ ತಂತ್ರಜ್ಞಾನ ಕ್ಷೇತ್ರದ ಇಂಟರ್‌ನೆಟ್ ಆಫ್ ಥಿಂಗ್ಸ್ ಎಂಬ ತಂತ್ರಜ್ಞಾನವು ಸಹಾಯ ಹಸ್ತವನ್ನು ಚಾಚಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತ ಇಲ್ಲ. ಕಾಲಮಾನಕ್ಕೆ ತಕ್ಕಂತೆ ಸಾಮಾಜಿಕವಾಗಿ ಉತ್ತಮ ಗುಣಮಟ್ಟದ ಜೀವನವನ್ನು ನಡೆಸಲು ವೈಜ್ಞಾನಿಕ ಕ್ಷೇತ್ರವು ಹಲವು ಅಸಾಧಾರಣ ತಾಂತ್ರಿಕ ನೈಪುಣ್ಯತೆಯುಳ್ಳ ಪ್ರಯೋಗಗಳನ್ನು ಅನಾವರಣಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ದಿನನಿತ್ಯದ ಹಲವು ಕೆಲಸಗಳನ್ನು ಕಡಿಮೆ ಸಮಯದಲ್ಲಿ ಉತ್ಕೃಷ್ಟ ರೀತಿಯಲ್ಲಿ ಪೂರ್ಣಗೊಳಿಸಲು ಸಹಕಾರಿಯಾಗಲು ತಾಂತ್ರಿಕ ಹಾಗೂ ವೈಜ್ಞಾನಿಕ ಕ್ಷೇತ್ರದಲ್ಲಿ ಹಲವು ತಂತ್ರಜ್ಞಾನಗಳ ಸದ್ಬಳಕೆಯ ಪ್ರಸ್ತುತತೆಯನ್ನು ಪಡೆದಿವೆ ಎಂದರು.

Also read: Nation will be completely free from terrorism, separatism, and Naxalism in Modi 3.0: Amit Shah

ತಂತ್ರಜ್ಞಾನ ಕ್ಷೇತ್ರವು ಅದ್ವಿತೀಯ ಮಟ್ಟದಲ್ಲಿ ಪ್ರಚಲಿತದಲ್ಲಿರುವ ಇಂಟರ್‌ನೆಟ್ ಆಫ್ ಥಿಂಗ್ಸ್ ಎಂಬ ವಿಷಯದ ಕುರಿತಾಗಿ ಪ್ರಾಯೋಗಿಕ ಚಾಕಚಕ್ಯತೆಗಳನ್ನು ಒಳಗೊಂಡಿರುವ ತಂತ್ರಜ್ಞಾನಗಳನ್ನು ಇಂಜಿನಿಯರ್‌ಗಳು ಅಳವಡಿಸಿಕೊಳ್ಳುವಲ್ಲಿ ಕಾರ್ಯತತ್ಪರರಾಗಿದ್ದಾರೆ. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಹೆಚ್ಚಿನ ಜ್ಞಾನಾರ್ಜನೆ ಹೊಂದಲು ತಂತ್ರಜ್ಞಾನವನ್ನು ಸದಪಯೋಗ ಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಪಿಇಎಸ್‌ಐಟಿಎಮ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎನ್. ಯುವರಾಜು ಮಾತನಾಡಿ, ಐಓಟಿ ತಂತ್ರಜ್ಞಾನವು ಮಾನವ ಸಮಾಜದ ಅನೇಕ ಚಟುವಟಿಕೆಗಳಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತನ್ನ ಪ್ರಸ್ತುತತೆಯನ್ನು ನಿರೂಪಿಸುತ್ತಾ ಬಂದಿರುವುದರಲ್ಲಿ ಅದರ ಅಗಾಧತೆ ಅಡಗಿದೆ ಎಂದು ಹಲವು ಪ್ರಾಯೋಗಿಕ ಉದಾಹರಣೆಗಳ ಸಮೇತ ಮನಮುಟ್ಟುವಂತೆ ತಿಳಿಸಿದರು.

ವಿದ್ಯಾರ್ಥಿಗಳು ಪ್ರಸ್ತುತ ಕಂಪ್ಯೂಟರ್ ತಂತ್ರಜ್ಞಾನ ಔದ್ಯೋಗಿಕ ಕ್ಷೇತ್ರದಲ್ಲಿ ಐಓಟಿ ತಂತ್ರಜ್ಞಾನದ ಹೆಚ್ಚಿನ ಬಳಕೆಯನ್ನು ಮಾಡಿಕೊಳ್ಳುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಸೂಚ್ಯವಾಗಿ ನುಡಿದರು.
Kalahamsa Infotech private limitedಎಂಸಿಎ ವಿಭಾಗದ ಮುಖ್ಯಸ್ಥ ಡಾ. ಸಂಜಯ್ ಮಾತನಾಡಿ, ಇಂಟರ್‌ನೆಟ್ ಆಫ್ ಥಿಂಗ್ಸ್ ತಂತ್ರಜ್ಞಾನದೊಂದಿಗೆ ಪಾರಿವಾರಿಕ, ಔದ್ಯೋಗಿಕ, ಬ್ಯಾಂಕಿಂಗ್, ಆರೋಗ್ಯ ಹಾಗೂ ಹತ್ತು ಹಲವಾರು ಕ್ಷೇತ್ರಗಳಲ್ಲಿ ಘಟಿಸುತ್ತಿರುವ ಪ್ರಯೋಗಗಳ ಆಮೂಲಾಗ್ರ ಮಾಹಿತಿಯನ್ನು ಪಡೆದುಕೊಳ್ಳುವಲ್ಲಿ ಕಾರ್ಯತತ್ಪರರಾಗಬೇಕೆಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ನಗರದ ಹಲವಾರು ಪದವಿ ಕಾಲೇಜಿನ 200ಕ್ಕೂ ಅಧಿಕ ವಿದ್ಯಾರ್ಥಿಗಳು ತಾವು ತಯಾರಿಸಿದ್ದ ಪ್ರಾತ್ಯಕ್ಷಿಕೆಗಳನ್ನು ಪ್ರದರ್ಶಿಸುವ ಮೂಲಕ ಸಭೀಕರನ್ನು ಮಂತ್ರಮುಗ್ಧಗೊಳಿಸಿದರು. ಪಿಇಎಸ್‌ಐಟಿಎಂನ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

Nation will be completely free from terrorism, separatism, and Naxalism in Modi 3.0: Amit Shah

Next Post

ಫೆ.22ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.22ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶಿವಮೊಗ್ಗಕ್ಕೆ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

June 11, 2025

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025

ಹೊಂಬಾಳೆ ಉತ್ಸವ | ಜೂ.12ರಿಂದ 14 ವೈವಿಧ್ಯಮಯ ಹಣ್ಣುಗಳ ಪ್ರದರ್ಶನ

June 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

June 11, 2025

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!