ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ನಿನ್ನೆ ರಾತ್ರಿಯಿಂದಲೇ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತವಾಗಿರುವುದರಿಂದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ಉಂಟಾಗಿದೆ.


ಶಿವಮೊಗ್ಗ ಕೆಎಸ್ಆರ್ಟಿಸಿ ವಿಭಾಗದಿಂದ 321 ಬಸ್ ಗಳು ಸಂಚರಿಸುತ್ತಿದ್ದವು. 1100 ಚಾಲಕ ಮತ್ತು ನಿರ್ವಾಹಕರಿದ್ದಾರೆ. ಬೆಳಿಗ್ಗೆ 6 ಗಂಟೆಗೆ 10 ಬಸ್ಗಳು ನಗರದಲ್ಲಿ ಸಂಚರಿಸಬೇಕಿತ್ತು. ಆದರೆ ಯಾವ ಬಸ್ಗಳು ರಸ್ತೆಗಿಳಿದಿಲ್ಲ. ಆದರೆ ನೌಕರರು ಕರ್ತವ್ಯಕ್ಕೆ ಹಾಜರಾಗುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post