ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಐದು ರಾಜತಾಂತ್ರಿಕ ಯೋಜನೆಗಳನ್ನು ಜಾರಿಗೆ ತಂದು, ಪಾಕಿಸ್ತಾನಕ್ಕೆ ಬಲವಾದ ಹೊಡೆತ ನೀಡುವುದರ ಮೂಲಕ ಭಾರತೀಯ ಸೈನಿಕರಿಗೆ ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ನೈತಿಕ ಸ್ಥೈರ್ಯ ತುಂಬಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕರಾದ ಎಸ್.ದತ್ತಾತ್ರಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಿಜೆಪಿಯೇತರ ಸರ್ಕಾರ ಇರುವ ಹಲವು ರಾಜ್ಯಗಳಲ್ಲಿ ಪಾಕಿಸ್ತಾನೀಯರನ್ನು ಹೊರಗಟ್ಟುವ ಕೆಲಸ ಆಗುತ್ತಿಲ್ಲ. ಗೃಹಸಚಿವ ಅಮೀತ್ ಷಾ ಅವರು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದು, 48 ಗಂಟೆಯೊಳಗೆ ಪಾಕಿಸ್ತಾನೀಯರನ್ನು ಹೊರಹಾಕಬೇಕು ಎಂದು ತಿಳಿಸಲಾಗಿತ್ತು. ಆದರೆ ಕರ್ನಾಟಕದಲ್ಲಿ ಈ ಕೆಲಸ ನಿಧಾನವಾಗಿದೆ. ತುಷ್ಠೀಕರಣ ನೀತಿಯಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರದ ಈ ಆದೇಶವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದ ಧಾರಾವಾಡ, ಉತ್ತರ ಕನ್ನಡ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 100 ರಿಂದ 150 ಜನ ಪಾಕಸ್ತಾನಿ ಪ್ರಜೆಗಳಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಲಕ್ಷ್ಯಧೋರಣೆ ವಿರುದ್ಧ ಬಿಜೆಪಿಯ ಎಲ್ಲಾ ಪ್ರಕೋಷ್ಠಗಳ ಮುಖಾಂತರ ಕಳೆದ 5 ದಿನಗಳಿಂದ ಸರ್ಕಾರದ ಈ ನೀತಿಯ ವಿರುದ್ಧ ಸಹಿಸಂಗ್ರಹ ಅಭಿಯಾನ ನಡೆಯುತ್ತಿದ್ದು, 1 ಲಕ್ಷಕ್ಕೂ ಹೆಚ್ಚು ಸಹಿಸಂಗ್ರಹ ಮಾಡಿದ್ದು, ಮೇ9ರಂದು ಬೆಳಿಗ್ಗೆ 12ಗಂಟೆಗೆ ರಾಜ್ಯಪಾಲರಿಗೆ ದೂರು ನೀಡಲಿದ್ದೇವೆ ಎಂದರು.
ಕೂಡಲೇ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಪಾಕಿಸ್ತಾನೀಯರನ್ನು ಹೊರಗಟ್ಟಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ. ನಾಳೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಎಲ್ಲಾ ಪ್ರಕೋಷ್ಠಗಳ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಜಗದೀಶ್, ಪ್ರಮುಖರಾದ ಪೆರುಮಾಳ್, ಡಾ. ಶ್ರೀನಿವಾಸ ರೆಡ್ಡಿ. ಭವಾನಿರಾವ್ ಮೋರೆ, ಎನ್. ಮಂಜುನಾಥ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post