ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೆ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರಿಂದಗಿ ಬಿಜೆಪಿಯಲ್ಲಿ ಎಲ್ಲ ಅಧಿಖಾರ ಅನುಭವಿಸಿ ಈಗ ಅವರ ವಿರುದ್ಧವೇ ಆಯನೂರು ಮಂಜುನಾಥ್ ಮಾತನಾಡುವುದು ಸಮರ್ಥನೀಯವಲ್ಲ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಆದ ಡಾ. ಧನಂಜಯ ಸರ್ಜಿ Dhananjaya Sarji ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಶೀರ್ವಾದ ಮತ್ತು ಬಿಜೆಪಿ ಪಕ್ಷದಿಂದ ನಾಲ್ಕೂ ಸಧನಗಳಲ್ಲೂ ಸ್ಥಾನ-ಮಾನ, ಅಧಿಕಾರ ಅನುಭವಿಸಿದ ಎಲ್ಲ ರೀತಿಯ ಫಲಾನುವಿ ಆಯನೂರು ಮಂಜುನಾಥ್ ಅವರು. ಇದೀಗ ಕಾಂಗ್ರೆಸ್’ನಲ್ಲಿದ್ದೀನಿ ಎನ್ನುವ ಕಾರಣಕ್ಕೋಸ್ಕರ ಯಡಿಯೂರಪ್ಪ ಅವರ ವಿರುದ್ಧ ಟೀಕೆ ಮಾಡುತ್ತಿರುವುದು ಸಮರ್ಥನೀಯವಲ್ಲ ಎಂದರು.
ಬಿಜೆಪಿಯಿಂದ ಬೇರೆ ಯಾರೂ ಪಡೆಯಲಾಗದಂತಹ ಎಲ್ಲ ಫಲಗಳನ್ನು ಅವರು ಪಡೆದ ಬಹುದೊಡ್ಡ ಫಲಾನುಭವಿ. ಬರೀ ಮಾತನಾಡಲಿಕ್ಕೊಬ್ಬರು ರಾಜಕಾರಣಿ ಬೇಕೆನ್ನುವ ಕಾರಣಕ್ಕಾಗಿ ಕಾಂಗ್ರೆಸ್ ಅವರಿಗೆ ಮನ್ನಣೆ ಹಾಕಿದೆಯಷ್ಟೆ. ಅಂತವರು ಯಡಿಯೂರಪ್ಪ ಅವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ ಎಂದರು.
Also read: ಮೋದಿ, ಶಾ ಮೌನ | ನನ್ನ ಸ್ಪರ್ಧೆ ಅವರಿಗೆ ಇಷ್ಟವಿದ್ದಂತೆ ಅನಿಸುತ್ತಿದೆ | ಕೆ.ಎಸ್. ಈಶ್ವರಪ್ಪ
ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಅವರು ಗಳಿಸಿಕೊಂಡ ಮತಗಳ ಸಂಖ್ಯೆ ಅವರ ಸಾಮರ್ಥ್ಯಕ್ಕೆ ಹಿಡಿದ ಕನ್ನಡಿಯಾಗಿದೆ. ಅದಕ್ಕಿಂತ ಬೇರೆ ಅವರ ಸಾಮರ್ಥ್ಯವನ್ನು ಅಳೆಯಬೇಕಿಲ್ಲ. ಮುಂದಿನ ನೈಋತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ವಿದ್ಯಾವಂತರು ಹಾಗೂ ಪ್ರಜ್ಞಾವಂತರು ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post