No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಯದ ಪರಿವೇ ಇಲ್ಲದೆ ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅತ್ಯವಶ್ಯ

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ ಅಭಿಪ್ರಾಯ

kalpa News by kalpa News
June 13, 2022
in ಶಿವಮೊಗ್ಗ
0
ಸಮಯದ ಪರಿವೇ ಇಲ್ಲದೆ ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅತ್ಯವಶ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಿತ್ಯ ಒತ್ತಡದ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹದೊಂದು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ನಿಜಕ್ಕೂ ಒಳ್ಳೆಯ ಕೆಲಸ. ರಾಜಕಾರಣಿಗಳ ಹಾಗೆಯೇ ಅನೇಕ ಸಮಯದಲ್ಲಿ ಊಟ ತಿಂಡಿ, ನಿದ್ರೆಗಳೆಲ್ಲವೂ ಪತ್ರಕರ್ತರಿಗೆ ಮರೀಚಿಕೆಯಾಗಿರುತ್ತವೆ. ಸಮಯದ ಪರಿವೆಯೇ ಇಲ್ಲದೆ ಕೆಲಸಮಾಡಬೇಕಾದ ಪರಿಸ್ಥಿತಿಗಳು ಇರುತ್ತವೆ. ಹಾಗಾಗಿ ಅವರಿಗೆ ಆರೋಗ್ಯ ತಪಾಸಣೆ ಅವಶ್ಯಕತೆ ಇದೆ. ಪತ್ರಕರ್ತರು ಆರೋಗ್ಯ ಚೆನ್ನಾಗಿದ್ದರೆ ಸುದ್ದಿಕೂಡವೂ ಆರೋಗ್ಯವಾಗಿರುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್.‌ ರುದ್ರೇಗೌಡ ಹೇಳಿದರು.

ಪತ್ರಕರ್ತರಿಗಾಗಿ ನಗರದ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಯೋಗದೊಂದಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪತ್ರಕರ್ತರಿಗಾಗಿ ಮೇಟ್ರೋ ಯುನೈಟೆಡ್‌ ಹೆಲ್ತ್‌ ಕೇರ್‌ ಆಸ್ಪತ್ರೆ ಹಾಗೂ ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ನಿಜಕ್ಕೂ ಶ್ಲಾಘನೀಯವಾದದ್ದು. ಶಿವಮೊಗ್ಗ ಎಲ್ಲಾ ಆಸ್ಪತ್ರೆಗಳು ಕೂಡ ಪತ್ರಕರ್ತರಿಗೆ ಇಂತಹ ಶಿಬಿರ ಹಮ್ಮಿಕೊಳ್ಳಲಿ ಎಂದು ಸಲಹೆ ನೀಡಿದರಲ್ಲದೆ, ಪತ್ರಕರ್ತರು ಈ ಆರೋಗ್ಯ ತಪಾಸಣೆ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಲಿ. ಹಾಗೆಯೇ ಅವರೆಲ್ಲರೂ ಆರೋಗ್ಯವಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲಿ ಎಂದರು. ಇದೇ ವೇಳೆ ಅವರು ಪತ್ರಕರ್ತರಾಗಿ ಕೆಲಸ ಮಾಡುವವರ ಕುಟುಂಬದವರಿಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇಂತಹ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಿ ಎಂದು ಸಲಹೆ ನೀಡಿದರು.

Also read: ಸಿನಿಮಾ ಪ್ರಪಂಚಕ್ಕೇ ಹೊಸ ಭಾಷ್ಯ ಬರೆಯಿತಾ ಕನ್ನಡದ ಸಿನಿಮಾ ಕೆ.ಜಿ.ಎಫ್-2!?

ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಮಾತನಾಡಿ, ಸಮಾಜದಲ್ಲಿ ರಾಜಕಾರಣಿಗಳು ಹಾಗೂ ಪತ್ರಕರ್ತರು ಇಬ್ಬರೂ ಒಂದೇ ಬಗೆಯ ಜನರು. ಅವರ ನಾಡಿಮಿಡಿತಗಳನ್ನು ಅಷ್ಟು ಸುಲಭವಾಗಿ ಪತ್ತೆ ಹಚ್ಚಲಾಗೋದಿಲ್ಲ ಎಂಬ ಹಾಸ್ಯದ ಮಾತುಗಳೊಂದಿಗೆ ಪತ್ರಕರ್ತರ ಮಹತ್ವದ ಕುರಿತು ಮಾತನಾಡಿದರು. ಪತ್ರಕರ್ತರು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ಆರೋಗ್ಯ ತುಂಬಾನೆ ಮುಖ್ಯವಾಗುತ್ತದೆ. ಹಾಗೆಯೇ ಹೃದಯ ಮತ್ತು ಹೃದಯವಂತಿಕೆಯೂ ಇರಬೇಕಾಗುತ್ತದೆ. ಯಾಕಂದ್ರೆ ಈಗ ಪತ್ರಿಕೋದ್ಯಮ ಹಿಂದಿನಂತಿಲ್ಲ. ವರದಿಗಳೇ ಪರ್ತಕರ್ತರ ಅಭಿಪ್ರಾಯಗಳಾಗಿ ಪರಿವರ್ತನೆ ಆಗುತ್ತಿವೆ. ಇದು ಸಮಾಜಕ್ಕೆ ತಪ್ಪು ಸಂದೇಶ ಹೊಂದಂತಾಗುತ್ತದೆ. ವರದಿಯೇ ಬೇರೆ, ಅಭಿಪ್ರಾಯವೇ ಬೇರೆ. ಅದನ್ನು ಅವರು ವರ್ಗಿಕರಿಸಿಯೇ ಪತ್ರಿಕೆಗಳನ್ನು ತರಬೇಕಿದೆ. ಯಾಕಂದ್ರೆ ಪತ್ರಕರ್ತರ ಚೆನ್ನಾಗಿದ್ದರೆ ಸಮಾಜವೂ ಚೆನ್ನಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಹಾಗೂ ಯುವ ಮುಖಂಡ ಕೆ.ಈ. ಕಾಂತೇಶ್‌ ಮಾತನಾಡಿ, ಸಮಾಜದ ಓರೆಕೋರೆಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದು. ಅವರ ಸಹಾಯಕ್ಕೆ ನಾನು ಮತ್ತು ನಮ್ಮ ಕುಟುಂಬ ಸದಾ ಸಿದ್ದವಿದೆ. ಪತ್ರಕರ್ತರು ಮತ್ತು ಅವರ ಕುಟುಂಬಕ್ಕೆ ಮೆಟ್ರೋ ಆಸ್ಪತ್ರೆಯಲ್ಲಿ ತಪಾಸಣೆ ಮತ್ತು ಚಿಕಿತ್ಸೆಗೆ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಘೋಷಿಸಿದರು. ಇದೇ ವೇಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು, ಇನ್ನು ಹೆಚ್ಚಿನ ರಿಯಾಯಿತಿ ನೀಡುವಂತೆ ಮಾಡಿಕೊಂಡ ಮನವಿಗೆ ಅಲ್ಲಿಯೇ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಆ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗ ನಗರಾಭಿವೃದ್ದಿ ಪ್ರಾಧಿಕಾರಿ ಮಾಜಿ ಅಧ್ಯಕ್ಷ ಎಸ್.‌ ಎಸ್.‌ ಜ್ಯೂತಿ ಪ್ರಕಾಶ್‌ ಮಾತನಾಡಿ, ಪತ್ರಕರ್ತರು ತಮ್ಮ ಒತ್ತಡ ಕೆಲಸದ ನಡುವೆಯೂ ಆರೋಗ್ಯಕ್ಕೆ ಅಂತಲೇ ಒಂದಷ್ಟು ಸಮಯವನ್ನು ಮೀಸಲಿಡಬೇಕು. ಈಗ ಆರೋಗ್ಯಕರವಾಗಿರಲು ಯೋಗವೂ ಪ್ರಮುಖ ಪಾತ್ರ ವಹಿಸುತ್ತಿದೆ. ನಿತ್ಯವೂ ಒಂದಷ್ಟು ಸಮಯ ಯೋಗ ಮಾಡುವುದರ ಮೂಲಕವೂ ಪತ್ರಕರ್ತರು ಒತ್ತಡವನ್ನು ರಿಲ್ಯಾಕ್ಸ್‌ ಮಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಿಗಾಗಿ ಆರೋಗ್ಯ ಶಿಬಿರ ಹಮ್ಮಿಕೊಳ್ಳುವುದಕ್ಕೆ ಕಾರಣವಾದ ವಿಚಾರವನ್ನು ಹಂಚಿಕೊಂಡರು. ಹಾಗೆಯೇ ಮೆಟ್ರೋ ಆಸ್ಪತ್ರೆ ಮತ್ತು ಹೃದಯ ಸ್ಪೆಷಾಲಿಟಿ ಕ್ಲಿನಿಕ್‌ ಸಹಾಯಕ್ಕೆ ಅಭಿನಂದನೆ ತಿಳಿಸಿದರು. ಸಮಾರಂಭದಲ್ಲಿ ಮೇಟ್ರೋ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪೃಥ್ವಿ ಬಿ.ಸಿ, ಹೃದಯ ರೋಗ ತಜ್ಞ ಮಹೇಶ ಮೂರ್ತಿ, ಮೇಟ್ರೋ ಸಿಇಓ ಡಾ. ತೇಜಸ್ವಿ ಹಾಜರಿದ್ದರು.

ಶಿವಮೊಗ್ಗ ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳಿಂದ ಬಂದಿದ್ದ ಸುಮಾರು 120 ಮಂದಿ ಪತ್ರಕರ್ತರು ಆರೋಗ್ಯ ತಪಾಸಣೆಗೆ ಒಳಗಾಗುವ ಮೂಲಕ ಶಿಬಿರದ ಸದುಪಯೋಗ ಪಡೆದುಕೊಂಡರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿನಿಮಾ ಪ್ರಪಂಚಕ್ಕೇ ಹೊಸ ಭಾಷ್ಯ ಬರೆಯಿತಾ ಕನ್ನಡದ ಸಿನಿಮಾ ಕೆ.ಜಿ.ಎಫ್-2!?

Next Post

ಬೀದಿ ನಾಯಿ ದಾಳಿಗೆ ತುತ್ತಾದ 5 ವರ್ಷದ ಬಾಲಕ ಸಾವು!

kalpa News

kalpa News

Next Post
ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಬೀದಿ ನಾಯಿ ದಾಳಿಗೆ ತುತ್ತಾದ 5 ವರ್ಷದ ಬಾಲಕ ಸಾವು!

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL