No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 5, 2022
in ಶಿವಮೊಗ್ಗ
0
ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮುಸಲ್ಮಾನ ಹೆಣ್ಣು ಮಕ್ಕಳು ಕಾಲೇಜುಗಳಿಗೆ ಹಿಜಾಬ್ ಧರಿಸಿ ಬಂದು ವಸ್ತ್ರಸಂಹಿತೆಯ ಉದ್ದೇಶವನ್ನು ಬುಡಮೇಲು ಮಾಡುತ್ತಿದ್ದು ವಿದ್ಯಾಕೇಂದ್ರದಲ್ಲಿ ಸಮಾನತೆಯ ಭಾವನೆ ಮೂಡಿಸದೆ ವಿದ್ಯೆಗಿಂತಲೂ ಧರ್ಮವೇ ಹೆಚ್ಚು, ಎಂದಿಗೂ ಭಾವೈಕ್ಯತೆಗೆ ನಮ್ಮ ಗೌರವವಿಲ್ಲ. ಸಂವಿಧಾನಕ್ಕೆ ನಮ್ಮ ಗೌರವವಿಲ್ಲ ಎಂದು ಸಾಬೀತುಪಡಿಸುತ್ತಿದ್ದಾರೆ ಎಂದು ಎಸ್. ದತ್ತಾತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿ ವಿದ್ಯಾರ್ಥಿನಿಯರ ಉದ್ದೇಶ ಜ್ಞಾನಸಂಪಾದನೆ ಆಗಿರುತ್ತದೆ, ಹಾಗೂ ಜೀವನದಲ್ಲಿ ಒಳ್ಳೆಯ ‘ಜಾಬ್’ ಹಿಡಿದು ಜೀವನ ಕಟ್ಟಿಕೊಳ್ಳುವ ಕನಸುಗಳೂ ಸಾಮಾನ್ಯವಾಗಿ ಎಲ್ಲರಲ್ಲಿಯೂ ಇರುತ್ತದೆ. ಆದರೆ ಇತ್ತೀಚಿಗೆ ಕೆಲವರಿಗೆ ‘ಜಾಬ್’ ಗಿಂತಲೂ ‘ಹಿಜಾಬ್’ ಎನ್ನುವುದೇ ಅವರ ಜೀವನದ ಪರಮಗುರಿಯೇನೋ ಎನ್ನುವ ಅನುಮಾನ ಕಾಡತೊಡಗಿದೆ. ಈ ವಿವಾದದ ಬಗ್ಗೆ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬರುವುದು ವಸ್ತ್ರಸಂಹಿತೆಯ ಉಲ್ಲಂಘನೆ ಅನ್ನೋದಾದ್ರೆ, ಇತರ ವಿದ್ಯಾರ್ಥಿಗಳೂ ಕುಂಕುಮ, ಬಳೆ, ಜನಿವಾರ ಅಥವಾ ಲಿಂಗಧಾರಣೆ ಮಾಡಿಕೊಂಡು ಶಾಲೆಗೆ ಬರುವುದನ್ನು ಸರ್ಕಾರ ನಿಷೇಧಿಸಲಿ. ಶಾಲೆಗಳಲ್ಲಿ ಶಾರದಾ ಪೂಜೆ ಮಾಡುವುದನ್ನು ನಿಲ್ಲಿಸಲಿ. ಶಾಲೆಗಳಲ್ಲಿರುವ ಹಿಂದೂ ದೇವರುಗಳ ಫೋಟೋವನ್ನು ತೆಗೆಯಿರಿ ಈ ಮುಂತಾದ ಸಲಹೆಗಳನ್ನು ನ್ಯೂಸ್ ಚಾನೆಲ್ ಒಂದರ ಡಿಬೇಟ್ ನಲ್ಲಿ ಪಾಲ್ಗೊಂಡಿದ್ದ ಮುಸ್ಲಿಮ್ ಹೆಣ್ಣುಮಗಳೊಬ್ಬಳು ಪುಂಖಾನುಪುಂಖವಾಗಿ ನೀಡುತ್ತಾಳೆ. ಈ ವಾದಕ್ಕೆ ಹಲವು ಮುಸ್ಲಿಮರು ಹಾಗೂ ಕೆಲವು ಹಿಂದೂಗಳೂ ಅಹುದಹುದು ಎಂದು ತಲೆದೂಗುವವರಿದ್ದಾರೆ ಇದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ಇಂತಹ ಮೂರ್ಖತನದ ವಾದವನ್ನು ಮಂಡಿಸುವ ಕೊಂಕು ಬುದ್ದಿಯ ಕೆಲ ಅಲ್ಪಸಂಖ್ಯಾತರಿಗೆ ಹಾಗೂ ಈ ವಾದವನ್ನು ಬೆಂಬಲಿಸುವ ಸ್ವಲ್ಪಸಂಖ್ಯಾತರಿಗೆ ಭರತಭೂಮಿಯ ಇತಿಹಾಸದ ಪುಟದಲ್ಲಿ ಸೇರಿರುವ, ನಾವು ಎಂದೂ ಮರೆಯದ ಕಹಿಸತ್ಯವೊಂದನ್ನು ಮತ್ತೊಮ್ಮೆ ಜ್ಞಾಪಿಸುವ ಪ್ರಯತ್ನ ಮಾಡೋದು ಅನಿವಾರ್ಯವಾಗಿದೆ ಎಂದು ಕುಟುಕಿದ್ದಾರೆ.

ಆಗಬಾರದಿದ್ದ ನಮ್ಮ ದೇಶವಿಭಜನೆ ಆಗಿಹೋಗಿದೆ. ಅದೂ ಕೂಡಾ ಧರ್ಮದ ಆಧಾರದಲ್ಲಿ. ಹಿಂದೂಗಳಿಗೆ ಹಿಂದುಸ್ಥಾನ, ಮುಸ್ಲಿಮರಿಗೆ ಪಾಕಿಸ್ಥಾನ. ತದನಂತರ ಪಾಕಿಸ್ತಾನ ಎನ್ನುವುದು ಹಿಂದೂಗಳಿಗೆ ಹಾಗೂ ಇತರ ಅಲ್ಪಸಂಖ್ಯಾತರಿಗೆ ನರಕವಾಯಿತು. ಭಾರತ ಎನ್ನುವುದು ಕಾಂಗ್ರೆಸ್ಸಿನ ಓಲೈಕೆ ರಾಜಕಾರಣದ ಪರಿಣಾಮ ಅಲ್ಪಸಂಖ್ಯಾತರ ಸ್ವರ್ಗವಾಯಿತು. ಮೊನ್ನೆ ಪಾಕಿಸ್ತಾನದಲ್ಲಿ ಹಿಂದೂ ಪತ್ರಕರ್ತನೊಬ್ಬನಿಗೆ ಬೆಂಕಿಹಚ್ಚಿ ಸಜೀವದಹನ ಮಾಡಲಾಯಿತು, ಅದರ ಬಗ್ಗೆ ಸಂತಾಪಸೂಚಿಸದ ಮೆಹಬೂಬಾ ಮಫ್ತಿ, ಉಡುಪಿಯ ವಿದ್ಯಾರ್ಥಿನಿಯರಿಗೆ ಹಿಜಾಬ್ ಗೆ ಅವಕಾಶ ಕೊಡದಿರುವುದನ್ನು ವಿರೋಧಿಸಿ ಟ್ವೀಟ್ ಮಾಡಿದ್ದಾರೆ. ಈ ಇಬ್ಬಗೆಯ ನೀತಿಯನ್ನು ಮುಸ್ಲಿಮರನ್ನು ಓಲೈಸುವ ಲಜ್ಜೆಗೆಟ್ಟ ರಾಜಕಾರಣಿಗಳು ಮೊದಲಿನಿಂದಲೂ ಚಾಚೂತಪ್ಪದೆ ಅನುಸರಿಸಿಕೊಂಡು ಬಂದಿದ್ದಾರೆ ಎಂದು ಹೇಳಿದ್ದಾರೆ.

ಹಿಂದೂಸ್ಥಾನ ಎನ್ನುವುದು ನಿಂತಿರುವುದು ಹಿಂದೂಗಳ ಪಾರಂಪರಿಕ ಸಂಸ್ಕೃತಿ ಹಾಗೂ ನಮ್ಮ ಧಾರ್ಮಿಕ ನೆಲೆಗಟ್ಟಿನ ಆಧಾರದಮೇಲೆ. ತಿಲಕ, ಬಳೆ, ಕೇಸರಿಬಣ್ಣ ಹಾಗೂ ನಮ್ಮ ಇತರ ಭಾವತ್ಮಕ ಅಂಶಗಳನ್ನು ಪ್ರಶ್ನಿಸುವವರಿಗೆ ನಾವು ಬೇರೆಯದೇ ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಕುಂಕುಮವು ಭಾವನಾತ್ಮಕ ಅಷ್ಟೇ ಅಲ್ಲ ಅದೊಂದು ಅಲಂಕಾರಿಕ ವಸ್ತು. ಅಲಂಕಾರಿಕ ವಸ್ತುಗಳಿಗೂ, ಸಮವಸ್ತ್ರಕ್ಕೂ ವ್ಯತ್ಯಾಸ ಗೊತ್ತಿಲ್ಲವೇ? ಹಣೆಯ ತಿಲಕ, ಕೈ ಬಳೆ, ಗೆಜ್ಜೆ, ಉಗುರಿನ ಬಣ್ಣ, ಮದರಂಗಿ, ಕಾಡಿಗೆಗಳೆಲ್ಲ ಅಲಂಕಾರಿಕ ವಸ್ತುಗಳು. ತಲೆಯ ಮೇಲೆ ಹಾಕುವ ಬಟ್ಟೆಗಳು ಸಮವಸ್ತ್ರದ ಸಾಲಿಗೆ ಬರುತ್ತದೆ. ಹೀಗಿರುವಾಗ ತಿಲಕವನ್ನು ಹಿಜಾಬ್ ಗೆ ಹೋಲಿಸುವುದು ಎಲ್ಲಿಂದೆಲ್ಲಿಯ ವಾದ? ಎಂದಿದ್ದಾರೆ.

ನಮ್ಮ ದೇಶದಲ್ಲಿ ಮುಸ್ಲಿಮ್ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಸಿಗುವ ಪ್ರೋತ್ಸಾಹ ಹಾಗೂ ಅವರ ಸಾಮಾಜಿಕ ಜೀವನಕ್ಕೆ ಸಿಗುವಷ್ಟು ಗೌರವ ಈ ಪ್ರಪಂಚದಲ್ಲಿ ಇನ್ಯಾವ ದೇಶದಲ್ಲಿ ಸಿಗುತ್ತಿದೆ ಎನ್ನುವುದನ್ನು ಹಿಜಾಬ್ ವಿಚಾರದಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರ ಹಿತಾಸಕ್ತಿಗಳ ರಕ್ಷಕರೆಂದು ಹೇಳಿಕೊಳ್ಳುತ್ತಿರುವ ಧಾರ್ಮಿಕ ಮುಖಂಡರು ಒಮ್ಮೆ ಪ್ರಶ್ನಿಸಿಕೊಳ್ಳಿ. ಶರಿಯಾ ಕಾನೂನು ಇರುವ ದೇಶಗಳಲ್ಲಿ ಮುಸ್ಲಿಂ ಮಹಿಳೆಯರ ಸಾಮಾಜಿಕ ಸ್ಥಾನಮಾನ ಏನಿದೆ ಎನ್ನುವುದು ಎಲ್ಲರಿಗೂ ಗೊತ್ತು ಎಂದಿದ್ದಾರೆ.

ತರಗತಿಗೆ ಹಿಜಾಬ್ ಹಾಕಿಕೊಂಡು ಹೋಗಿ ಇಯರ್ ಫೋನ್ ಕಿವಿಗೆ ಸಿಕ್ಕಿಸಿಕೊಂಡು ಪಾಠ ಕೇಳುವ ಬದಲು ಹಾಡು ಕೇಳುತ್ತಾ ಕಾಲಹರಣ ಮಾಡುವವರಷ್ಟೇ ಹಿಜಾಬ್ ನೆಪದಲ್ಲಿ ತರಗತಿ ತಪ್ಪಿಸಿಕೊಂಡು ಕಾಲೇಜಿನಿಂದ ಹೊರಗೆ ನಿಂತಿದ್ದಾರೆ. ನಿಜವಾಗಿಯೂ ಕಲಿಯುವ ಬಯಕೆ ಇರುವವರು ಸಮವಸ್ತ್ರದಲ್ಲಿ ತರಗತಿಯಲ್ಲಿ ಕುಳಿತಿದ್ದಾರೆ. ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು. ಅಲ್ಲಿನ ನಿಯಮ ಮತ್ತು ಅನುಶಾಸನದ ಜೊತೆಗೆ ಕಲಿಯುವುದು ಎಲ್ಲರ ಧರ್ಮ, ಶಾಲೆಯ ನಿಯಮದಡಿಯಲ್ಲೇ ಎಲ್ಲರೂ ಕಲಿಯಬೇಕು ಎಂದು ಸಲಹೆ ನೀಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: HIjabKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaS DattatriShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹಿಜಾಬ್
Share202Tweet123Send
Previous Post

ಫೆ.6ರಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ

Next Post

ಭಾರತರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ

ಭಾರತರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL