ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರೀ ಮಳೆ ಕೇರಳದ ವಯನಾಡಿನಲ್ಲಿ #Wayanadu ಗ್ರಾಮವನ್ನೇ ಸರ್ವನಾಶ ಮಾಡಿರುವ ಬೆನ್ನಲ್ಲೇ ಜಿಲ್ಲೆಯಲ್ಲೂ ಸಹ ಹಲವು ಕಡೆಗಳಲ್ಲಿ ಗುಡ್ಡ ಕುಸಿತ #Landslide ಉಂಟಾಗಿದ್ದು, ಮೂರು ತಾಲೂಕುಗಳನ್ನು ಭೂಕುಸಿತ ಪೀಡಿತ ಎಂದು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಈ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕುಗಳನ್ನು ಭೂಕುಸಿತ ಪೀಡಿತ ಎಂದು ಘೋಷಿಸಿ, ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

Also read: ತೀರ್ಥಹಳ್ಳಿ | ಮತ್ತಿಗ ಬಳಿ ಭೀಕರ ರಸ್ತೆ ಅಪಘಾತ ಪ್ರಕರಣ | ಚಿಕಿತ್ಸೆ ಫಲಕಾರಿ ಆಗದೇ ಯುವಕ ಸಾವು
ಉತ್ತರ ಕನ್ನಡ ಜಿಲ್ಲೆಯ ಶಿರೂರು, ಕೇರಳದ ವಯನಾಡಿನಲ್ಲಿ ಸಂಭವಿಸಿದ ವಿನಾಶಕಾರಿ ಭೂ ಕುಸಿತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜಿಲ್ಲೆಯ 3 ಸೇರಿ 31 ತಾಲೂಕುಗಳನ್ನು ಭೂ ಕುಸಿತ ಪೀಡಿತ ಎಂದು ಘೋಷಿಸಿ ಗರಿಷ್ಠ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post