ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಿಂದೂ ಮಹಾಸಭಾದ ಅಂಗಸಂಸ್ಥೆಯಾದ ‘ಹಿಂದೂ ಸಂಘಟನಾ ಮಹಾ ಮಂಡಳಿ, ಅಧ್ಯಕ್ಷರಾಗಿ ಸುದೀರ್ಘ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಎಂ.ಕೆ. ಸುರೇಶ್ ಕುಮಾರ್ ಅವರು ನಿಧನರಾಗಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಹಲವಾರು ವರ್ಷಗಳಿಂದ ಹಿಂದೂ ಸಂಘಟನಾ ಮಹಾ ಮಂಡಳಿಯ ನೇತೃತ್ವ ವಹಿಸಿದ್ದ ಅವರು, ಸಂಘಟನೆಯ ಬೆಳವಣಿಗೆಗೆ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಸಮಾಜದ ಬಗ್ಗೆ ಅವರಿಗಿದ್ದ ಕಳಕಳಿ ಹಾಗೂ ನಾಯಕತ್ವದ ಗುಣಗಳು ಅನೇಕ ಯುವ ಕಾರ್ಯಕರ್ತರಿಗೆ ಪ್ರೇರಣೆಯಾಗಿದ್ದವು. ಅವರ ಅಕಾಲಿಕ ನಿಧನದಿಂದ ಸಂಘಟನೆಗೆ ಹಾಗೂ ಶಿವಮೊಗ್ಗದ ಜನತೆಗೆ ತುಂಬಲಾರದ ನಷ್ಟ ಉಂಟಾಗಿದೆ.
ಸಂಘಟನೆಯ ಏಳಿಗೆಗಾಗಿ ಅವರು ನೀಡಿದ ಅಪಾರ ಕೊಡುಗೆ ಹಾಗೂ ಮಾರ್ಗದರ್ಶನವನ್ನು ಹಿಂದೂ ಸಂಘಟನಾ ಮಹಾ ಮಂಡಳಿಯು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬ ವರ್ಗದವರಿಗೆ, ಬಂಧು-ಮಿತ್ರರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Also read: ಜು.7ರಂದು ಎಸ್ಐಆರ್ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಉದ್ಘಾಟನೆ: ಕೆ.ಎಸ್. ಈಶ್ವರಪ್ಪ
ಬಂಟ ಸಮಾಜ ಬಾಂಧವರಿಂದ ಶ್ರದ್ಧಾಂಜಲಿ
ಶಿವಮೊಗ್ಗ ಬಂಟ ಸಮಾಜದ ಮಾಜಿ ಅಧ್ಯಕ್ಷರು, ಹಾಲಿ ಗೌರವಾಧ್ಯಕ್ಷರು ಹಾಗೂ ಶಿವಮೊಗ್ಗದ ಹಲವು ಹತ್ತು ಕ್ಷೇತ್ರಗಳಲ್ಲಿ ಅಪಾರ ಜನಮನ್ನಣೆ ಯೊಂದಿಗೆ ಸೇವೆ ಸಲ್ಲಿಸಿದ್ದ ನಮ್ಮೆಲ್ಲರ ಪ್ರೀತಿಯ ಚಾಲುಕ್ಯ ಸುರೇಶ್ ಕುಮಾರ್ ಇವರ ನಿಧನಕ್ಕೆ ದುಃಖತಪ್ತ ನಮನಗಳು.
ಎಂ ಕೆ ಸುರೇಶ್ ಕುಮಾರ್ ಇವರ ನಿಧನಕ್ಕೆ ಶಿವಮೊಗ್ಗ ಬಂಟ ಸಮಾಜದ ಅಧ್ಯಕ್ಷರಾದ ಡಾ. ಎ. ಸತೀಶ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷರಾದ ರಾಜ್ ಮೋಹನ್ ಹೆಗ್ಡೆ, ಪ್ರಭಾರ ಕಾರ್ಯದರ್ಶಿ ಮಹೇಶ್ ಶೆಟ್ಟಿ, ಖಜಾಂಚಿ ಅರುಣ್ ಕುಮಾರ್ ಶೆಟ್ಟಿ, ನಿರ್ದೇಶಕರಾದ ದಿವಾಕರ್ ಶೆಟ್ಟಿ, ಮಹಿಳಾ ಅಧ್ಯಕ್ಷರಾದ ಪುಷ್ಪ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸಮಸ್ತ ಸಮಾಜ ಬಾಂಧವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಶ್ರದ್ಧಾಂಜಲಿ ಸಭೆ
ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷರು, ಹಾಲಿ ನಿರ್ದೇಶಕರು, ಮಾಜಿ ನಗರಸಭಾ ಅಧ್ಯಕ್ಷರು , ಕೋಟೆ ಮಾರಿಕಾಂಬ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು, ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷರು, ಹಿರಿಯ ಸಹಕಾರಿ ಎಂ ಕೆ ಸುರೇಶ್ ಕುಮಾರ್ (ಚಾಲುಕ್ಯ ಸೂರಿ) ಅವರು ನಿನ್ನೆ ಸಂಜೆ ದೈವಧೀನರಾಗಿದ್ದು
ಇಂದು ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಅವರ ಕುಟುಂಬ ವರ್ಗಕ್ಕೂ ಹಾಗೂ ಸ್ನೇಹಿತರಿಗೂ ಆ ಭಗವಂತ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪ, ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾದ ಕೆ ರಂಗನಾಥ್, ಉಪಾಧ್ಯಕ್ಷರಾದ, ಸಿ ಹೊನ್ನಪ್ಪ, ಖಜಾಂಚಿ ಘನಶಾಮ್, ಹಿರಿಯ ನಿರ್ದೇಶಕರುಗಳಾದ ಉಮಾಶಂಕರ ಉಪಾಧ್ಯ, ಎಸ್ ಪಿ ಶೇಷಾದ್ರಿ, ಜಿ ಚಂದ್ರಶೇಖರ್, ಜಿ ರಾಜು, ಎಂ ರಾಕೇಶ್,ಎಸ್ ಎನ್ ಮಹೇಶ್, ಬಿ ಲೋಕೇಶ್, ಪ್ರೇಮಾ ಚಂದ್ರಶೇಖರ್, ಹೌಸಿಂಗ್ ಸೊಸೈಟಿ ನಿರ್ದೇಶಕರಾದ ಎಂ ಆರ್ ಪ್ರಕಾಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮನೋಜ್ ಕುಮಾರ್, ಬ್ಯಾಂಕಿನ ಸಿಬ್ಬಂದಿ ವರ್ಗದವರು, ಪಿಗ್ಮಿ ಸಂಗ್ರಹಕರು, ಶೇರುದಾರರು, ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







