No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮ್ಯಾಕ್ಸ್ ಆಸ್ಪತ್ರೆ ವೈದ್ಯರ ಐತಿಹಾಸಿಕ ಸಾಧನೆ: ಟಿಒಇಟಿವಿಎ ಯಶಸ್ವಿ ಶಸ್ತ್ರಚಿಕಿತ್ಸೆ

ಕಲೆಯೇ (ಶಸ್ತ್ರ ಚಿಕಿತ್ಸೆಯ ಗುರುತು ) ಇಲ್ಲದೇ ಥೈರಾಯ್ಡ್ ಶಸ್ತ್ರಚಿಕಿತ್ಸೆ ಮಾಡುವ ನೂತನ ವಿಧಾನ ಈಗ ಶಿವಮೊಗ್ಗದಲ್ಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 28, 2021
in ಶಿವಮೊಗ್ಗ
0
ಮ್ಯಾಕ್ಸ್ ಆಸ್ಪತ್ರೆ ವೈದ್ಯರ ಐತಿಹಾಸಿಕ ಸಾಧನೆ: ಟಿಒಇಟಿವಿಎ ಯಶಸ್ವಿ ಶಸ್ತ್ರಚಿಕಿತ್ಸೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ ಬೆಂಗಳೂರು ಹೊರತುಪಡಿಸಿ ಇಡೀ ರಾಜ್ಯದಲ್ಲೇ ಅತಿ ವಿನೂತನ ಶಸ್ತ್ರಚಿಕಿತ್ಸೆಯೊಂದನ್ನು ನೆರವೇರಿಸುವಲ್ಲಿ ನಗರದ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದು, ಜಿಲ್ಲೆಯ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲು ಸ್ಥಾಪಿಸಿದ್ದಾರೆ.

ಹೌದು… ಥೈರಾಯ್ಡ್’ಗೆ ಸಂಬಂಧಿಸಿದ ಟ್ರಾನ್ಸ್ ಓರಲ್ ಎಂಡೋಸ್ಕೋಪಿಕ್ ಥೈರಾಯ್ಡೆಕ್ಟಮಿ ವೆಸ್ಟಿಬುಲರ್ ಅಪ್ರೋಚ್(ಟಿಒಇಟಿವಿಎ) ಎಂಬ ಅತ್ಯಂತ ಸುಧಾರಿತ ಶಸ್ತ್ರಚಿಕಿತ್ಸೆಯನ್ನು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಈ ಶಸ್ತ್ರಚಿಕಿತ್ಸೆಯನ್ನು ಬೆರಳೆಣಿಕೆಯಷ್ಟು ವೈದ್ಯರಷ್ಟೇ ಇದುವರೆಗೂ ನೆರವೇರಿಸಿದ್ದಾರೆ. ಆದರೆ, ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಇಂತಹ ಸಾಧನೆ ಮಾಡಿರುವುದು ಇದೇ ಮೊದಲು.


ಟಿಒಇಟಿವಿಎ ಎಂದರೇನು?

ಥೈರಾಯ್ಡ್ ಸಮಸ್ಯೆಗಾಗಿ ಸಾಮಾನ್ಯವಾಗಿ ಕುತ್ತಿಗೆ ಭಾಗದಲ್ಲಿ ಚರ್ಮವನ್ನು ಕೊಯ್ದು ಶಸ್ತ್ರಚಿಕಿತ್ಸೆ ನಡೆಸಿ, ಹೊಲಿಗೆ ಹಾಕಲಾಗುತ್ತದೆ. ಆದರೆ, ಶಸ್ತ್ರಚಿಕಿತ್ಸೆಯಾದ ಭಾಗದಲ್ಲಿ ಕಲೆ ಅಥವಾ ಗುರುತು ಉಳಿದುಬಿಡುತ್ತದೆ. ಇದು ಚಿಕ್ಕ ವಯಸ್ಸಿನ ಯುವತಿಯರಲ್ಲಿ, ರೂಪದರ್ಶಿಗಳಿಗೆ ಹಾಗೂ ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿಯುಳ್ಳವರಿಗೆ ಸಮಸ್ಯೆಯಾಗಿ ಕಾಡುತ್ತದೆ.

ಈ ಸಮಸ್ಯೆ ಹೋಗಲಾಡಿಸಲು ಕುತ್ತಿಗೆ ಹೊರತುಪಡಿಸಿ ಬೇರೆ ಭಾಗದಿಂದ ರಿಮೋಟ್ ಆಕ್ಸಿಸ್ ಸರ್ಜರಿ ಎಂಬ ವಿಧಾನದ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಆದರೆ, ಆ ಭಾಗದಲ್ಲೂ ಕಲೆ ಉಳಿಯುವ ಜೊತೆಯಲ್ಲಿ ಕೆಲವು ಅಡ್ಡಪರಿಣಾಮಗಳು ಕಾಣಿಸಿಕೊಂಡವು. ಹೀಗಾಗಿ, ಇದರಲ್ಲಿ ಹೆಚ್ಚಿನ ಸಂಶೋಧನೆ ನಡೆಸಿದರ ಪರಿಣಾಮ ಈಗ ಅನುಸರಿಸುತ್ತಿರುವ ಟಿಒಇಟಿವಿಎ ವಿಧಾನವಾಗಿದೆ.


ಇದರಲ್ಲಿ, ದೇಹದ ಸ್ವಾಭಾವಿಕ ರಂಧ್ರಗಳ ಮೂಲಕ ದರ್ಶಕಗಳನ್ನು ಬಳಸಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ (NOTES- Natural Orifice Transluminal Endoscopic Surgery). ಬಾಯಿಯ ವಸಡು ಹಾಗೂ ತುಟಿಯ ನಡುವಿನ ಕೆಳ ವಸಡಿನಲ್ಲಿ 1 ಸೆಮೀ ಹಾಗೂ ಅರ್ಧ ಸೆಮೀ ಭಾಗದಷ್ಟು ರಂಧ್ರ ಕೊರೆಯಲಾಗುತ್ತದೆ. ಆನಂತರ ಚರ್ಮದ ಕೆಳಭಾಗದಲ್ಲಿ ಸಣ್ಣ ಕೊಳವೆ ಹೋಗುವ ರೀತಿ ಮಾಡಿ, ಕುತ್ತಿಗೆಯ ಮೂಲಕ ಥೈರಾಯ್ಡ್ ತಲುಪಿ ಶಸ್ತ್ರಚಿಕಿತ್ಸೆ ನಡೆಸಿ ಅದನ್ನು ಹೊರತೆಗೆಯಲಾಗುತ್ತದೆ.

ಈ ವಿಧಾನದ ಪ್ರಯೋಜನಗಳೇನು?
ಇದು ಪ್ರಪಂಚದಲ್ಲಿ ಅತ್ಯಂತ ಸುಧಾರಿತ ವಿಧಾನವಾಗಿದೆ. ಈ ವಿಧಾನದಲ್ಲಿ ಶಸ್ತ್ರಚಿಕಿತ್ಸೆ ನಡೆಸಿದರೆ ಯಾವುದೇ ಭಾಗದಲ್ಲಿ ಕಲೆ ಅಥವಾ ಗುರುತು ಉಳಿಯುವುದಿಲ್ಲ. ಬಾಯಿಯ ಒಳಭಾಗದಲ್ಲಿ ರಂಧ್ರ ಮಾಡಿದ ಜಾಗದಲ್ಲಿ ಹಾಕುವ ಸಣ್ಣ ಹೊಲಿಗೆ ತಾನಾಗಿಯೇ ಕರಗಿ ಹೋಗುವುದರಿಂದ ಹೊಲಿಗೆ ತೆಗೆಸಬೇಕು ಎಂಬ ಸಮಸ್ಯೆಯಿಲ್ಲ. ಅತಿ ಕಡಿಮೆ ನೋವು ನೀಡುವ ಈ ವಿಧಾನದಲ್ಲಿ ಚಿಕಿತ್ಸೆ ಮಾಡಿಕೊಂಡರೆ 1-2 ದಿನದ ಒಳಗಾಗಿ ಆಸ್ಪತ್ರೆಯಿಂದ ಮನೆಗೆ ತೆರಳಬಹುದಾಗಿದೆ.

ಥೈರಾಯ್ಡ್ ಶಸ್ತ್ರಚಿಕಿತ್ಸೆಯಲ್ಲಿ ಇದು ಅತ್ಯಂತ ಸುಧಾರಿತವಾದ ವಿಧಾನವಾಗಿದ್ದು, ನಮ್ಮ ಆಸ್ಪತ್ರೆಯಲ್ಲಿ ನಡೆಸಲಾದ ಇದು ಸಂಪೂರ್ಣ ಯಶಸ್ವಿಯಾಗಿದೆ. ಚಿಕ್ಕಮಗಳೂರಿನ 17 ವರ್ಷದ ಬಾಲಕಿಗೆ ಥೈರಾಯ್ಡ್ ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. ಆಕೆ ಹಾಗೂ ಅವರ ಕುಟುಂಬಸ್ಥರು ಶಸ್ತ್ರಚಿಕಿತ್ಸೆಯ ಬಗ್ಗೆ ಕೊಂಚ ಆತಂಕಗೊಂಡಿದ್ದರು. ಆದರೆ, ಈ ನೂತನ ವಿಧಾನದ ಬಗ್ಗೆ ಸಂಫೂರ್ಣವಾಗಿ ತಿಳಿಸಿದ ನಂತರ ಒಪ್ಪಿಕೊಂಡರು. ಆಕೆಗೆ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಅದಾದ ಅರ್ಧ ಗಂಟೆಯಲ್ಲಿಯೇ ಆಕೆ ಮಾತನಾಡಲು ಆರಂಭಿಸಿದರು. ಮೊದಲ ದಿನ ಕೇವಲ ದ್ರವ ರೂಪದ ಆಹಾರ ಕೊಡಲಾಗಿದ್ದು, ಮರುದಿನದಿಂದ ಸಾಮಾನ್ಯ ಆಹಾರವನ್ನು ತೆಗೆದುಕೊಳ್ಳಲು ಸೂಚಿಸಲಾಗಿತ್ತು. ಡೇ ಕೇರ್ ರೀತಿಯಲ್ಲಿ ಕೇವಲ ೨೪ ಗಂಟೆಗಳ ಅವಧಿಯಲ್ಲಿ ಈ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮನೆಗೆ ಹಿಂತಿರುಗಬಹುದಾಗಿದೆ.

-ಡಾ.ಶ್ರೇಯಾಂಸ ಎಂ, ಎಂಡೋಕ್ರೈನ್ ಮತ್ತು ಆಂಕೋಪ್ಲಾಸ್ಟಿಕ್ ಸ್ತನ ಶಸ್ತ್ರಚಿಕಿತ್ಸಕ, ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ವೈದ್ಯರು ವಹಿಸಬೇಕಾದ ಎಚ್ಚರಿಕೆಗಳೇನು?
ಬಾಯಿಯ ಮೂಲಕ ಕುತ್ತಿಗೆಯಲ್ಲಿ ನಡೆಸುವ ಅತಿ ಸುಧಾರಿತ ಶಸ್ತ್ರಚಿಕಿತ್ಸೆಯಾದ ಇದನ್ನು ಅತ್ಯಂತ ಪರಿಣಿತಿ ಹೊಂದಿರುವ ವೈದ್ಯರು ಮಾತ್ರ ನೆರವೇರಿಸಬೇಕು. ಚಿಕಿತ್ಸೆಯ ವೇಳೆ ಯಾವುದೇ ಸೂಕ್ಷ್ಮ ಅಂಗಗಳಿಗೆ ಹಾನಿಯಾಗದಂತೆ ನಡೆಸುವ ಅಗತ್ಯವಿದ್ದು ಭಾರೀ ಜಾಗ್ರತೆ ವಹಿಸಬೇಕಿರುತ್ತದೆ. ಕನಿಷ್ಠ 200 ರಿಂದ 300ರಷ್ಟು ಥೈರಾಯ್ಡ್ ಶಸ್ತ್ರಚಿಕಿತ್ಸೆ ನಡೆಸಿ ಅನುಭವ ಇರುವ ವೈದ್ಯರು ಇದರ ಪ್ರಯೋಗ ಮಾಡಬಹುದು.


ರೋಗಿಗಳು ವಹಿಸಬೇಕಾದ ಎಚ್ಚರಿಕೆಗಳೇನು?

ಈ ಶಸ್ತ್ರಚಿಕಿತ್ಸೆಗೆ ಒಳಗಾದವರು ಬಾಯಿಯ ಶುಚಿತ್ವವನ್ನು ನಿರಂತರವಾಗಿ ಕಾಪಾಡಿಕೊಳ್ಳಬೇಕು. ಯಾವುದೇ ರೀತಿಯ ಆಹಾರ ಸೇವಿಸಿದ ನಂತರ ಸ್ವಚ್ಛವಾಗಿ ಬಾಯಿಯನ್ನು ಶುಭ್ರಗೊಳಿಸಿ, ಇನ್ಪೆಕ್ಷನ್ ಆಗದಂತೆ ಜಾಗ್ರತೆ ವಹಿಸಬೇಕು. ಆರಂಭದಲ್ಲಿ ಒಂದೆರಡು ದಿನ ದ್ರವ ಆಹಾರ ಸೇವಿಸಿ, ಆನಂತರ ಸಾಮಾನ್ಯ ಆಹಾರ ತೆಗೆದುಕೊಳ್ಳಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMax HospitalNews in KannadaNews KannadaShimogaShivamoggaShivamogga NewsThyroidಥೈರಾಯ್ಡ್ಮಲೆನಾಡು_ಸುದ್ಧಿಮ್ಯಾಕ್ಸ್‌ ಆಸ್ಪತ್ರೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share232Tweet123Send
Previous Post

ಯಲ್ಲಾಪುರ: ಜನಪ್ರಿಯ ಟ್ರಸ್ ವತಿಯಿಂದ ಉಚಿತ ಪಠ್ಯ ಪುಸ್ತಕ ವಿತರಣೆ

Next Post

ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು: ತಹಸೀಲ್ದಾರ್ ಪ್ರದೀಪ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು: ತಹಸೀಲ್ದಾರ್ ಪ್ರದೀಪ್

ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು: ತಹಸೀಲ್ದಾರ್ ಪ್ರದೀಪ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ-ಚೆನ್ನೈ, ಬೆಂಗಳೂರು-ಕನ್ಯಾಕುಮಾರಿ ಸೇರಿ 12 ಎಕ್ಸ್’ಪ್ರೆಸ್ ರೈಲು ಮಹತ್ವದ ಮಾಹಿತಿ

May 11, 2026
ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

ಸತ್ಯನಾರಾಯಣರಾವ್‍ ನಿಧನ | ತಾಲ್ಲೂಕು ಬ್ರಾಹ್ಮಣ ಸೇವಾ ಸಂಘ ಸಂತಾಪ

May 11, 2026
`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

`ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ | ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಸಚಿವ ಮಧು ಬಂಗಾರಪ್ಪ

May 11, 2026
ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

ಭದ್ರತೆಯಲ್ಲಿ ರಾಜಿಯಿಲ್ಲ | ಬಾಂಗ್ಲಾ ಗಡಿ ಬೇಲಿಗಾಗಿ BSFಗೆ ಭೂಮಿ ಹಸ್ತಾಂತರಕ್ಕೆ ಸುವೇಂದು ಸರ್ಕಾರ ಅಸ್ತು

May 11, 2026
ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

ಸಚಿವ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ಸಂತಾಪ

May 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL