ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೈಕಿಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡಿರುವ ಘಟನೆ ತ್ಯಾವರೆಕೊಪ್ಪದ ಬಳಿಯಲ್ಲಿ ನಡೆದಿದೆ.
ಸಿಂಹಧಾಮದ ಬಳಿ ಘಟನೆ ನಡೆದಿದ್ದು, ಮೃತನನ್ನು ದಾವಣಗೆರೆ ಜಿಲ್ಲೆ ನ್ಯಾಮತಿಯ ರಮೇಶ್(43) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಸುನಿಲ್ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ.
ಸುನಿಲ್ ಮತ್ತು ಮಂಜುನಾಥ್ ಪ್ರತಿದಿನ ಶಿವಮೊಗ್ಗಕ್ಕೆ ಬಂದು ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ಬೈಕ್’ನಲ್ಲಿ ಮರಳುತ್ತಿದ್ದರು. ಮಂಜುನಾಥ್ ಮತ್ತು ರಮೇಶ್ ಹಿಂಬದಿ ಕುಳಿತಿದ್ದರು. ಸಿಂಹಧಾಮದ ಬಳಿ ಇವರು ತೆರಳುತ್ತಿದ್ದ ಬೈಕಿಗೆ ಹಿಂಬದಿಯಿAದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಗಾಯಾಳುಗಳನ್ನು ತತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಮೇಶ್ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಡಿಕ್ಕಿ ಹೊಡೆದ ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post