ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರ ತಾಲೂಕಿನ ಕೊಡಚಾದ್ರಿಯ ಸರ್ವಜ್ಞ ಪೀಠದಿಂದ – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದವರೆಗೆ ಕೇಬಲ್ ಕಾರ್ ಅಳವಡಿಸುವ ಕಾರ್ಯ ಯೋಜನೆಯ ಹಿನ್ನೆಲೆಯಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ, ಸರ್ವೆ ಕಾರ್ಯ ನಡೆಸಿದೆ.
ಕೇಂದ್ರ ಭೂಸಾರಿಗೆ ಮಂತ್ರಾಲಯದ National Highways Logistics Management Limited ಅಧಿಕಾರಿಗಳ ತಂಡವು ಡಿಪಿಆರ್ ಮತ್ತು ಪತನ ನಕ್ಷೆಯನ್ನು ಅಂತಿಮಗೊಳಿಸಲು ಹಾಗೂ ಡಿಪಿಆರ್ ಅನುಮೋದನೆಗೆ ಇರುವ ತೊಡಕುಗಳ ಬಗ್ಗೆ ಅಭ್ಯಾಸ ಮಾಡಿ, ಪರಿಶೀಲಿಸುವ ನಿಟ್ಟಿನಲ್ಲಿ ಎರಡು ದಿನದ ಸರ್ವೇ ಕಾರ್ಯ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಕೊಡಚಾದ್ರಿಯಿಂದ ಕೊಲ್ಲೂರಿನವರೆಗೆ ಕೇಬಲ್ ಕಾರ್ ನಿರ್ಮಾಣಕ್ಕೆ ಇರುವ ತೊಡಕುಗಳನ್ನು ಪರಿಹರಿಸಲು ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ರಾಷ್ಟೀಯ ಹೆದ್ದಾರಿ ಅಧಿಕಾರಿಗಳ ಜೊತೆಗೆ ಸೇರಿ ಪರಿಹರಿಸಿ, ಕನಿಷ್ಠ ಒಂದು ತಿಂಗಳ ಅವಧಿಯಲ್ಲಿ ಡಿಪಿಆರ್ ಮಂಜೂರಾತಿ ಪಡೆಯುವುದಾಗಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post