ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರಧಾನಿ ಮೋದಿ ಅವರ ಗ್ಯಾರಂಟಿಗಳು ಹುಸಿಯಾಗಿದ್ದು, ಕಾಂಗ್ರೆಸ್ ಗ್ಯಾರಂಟಿಗಳೇ ನಿಜವಾಗಿರುವುದರಿಂದ ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.
ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೋದಿ ಅವರ ಗ್ಯಾರಂಟಿಗಳಲ್ಲಿ ಬಿಜೆಪಿಯ ಹೆಸರೇ ಇಲ್ಲ. ಆ ಗ್ಯಾರಂಟಿಗಳೆಲ್ಲಾ ಸುಳ್ಳು ಎಂಬುದು ಈಗಾಗಲೇ ಜನರಿಗೆ ಗೊತ್ತಾಗಿದೆ. ರಾಜ್ಯದ ಗ್ಯಾರಂಟಿಗಳ ಜೊತೆಗೆ ಕೇಂದ್ರ ಕಾಂಗ್ರೆಸ್ ನ ಗ್ಯಾರಂಟಿಗಳು ಕೂಡ ಸೇರಿ ಈ ಬಾರಿ ಕಾಂಗ್ರೆಸ್ಗೆ ಗೆಲುವಾಗಲಿದೆ. ರಾಜ್ಯದಲ್ಲಿ ಎಲ್ಲಾ 28 ಸ್ಥಾನಗಳಲ್ಲೂ ಗೆಲ್ಲುವ ವಿಶ್ವಾಸವಿದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.43 ರಷ್ಟು ಮತಗಳು ಲಭಿಸಿದ್ದವು. ಹಾಗಾಗಿ 135 ಸ್ಥಾನ ಲಭಿಸಿತ್ತು. ಇದರ ಆಧಾರದ ಮೇಲೆ ಸುಮಾರು 18 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಿರಾಯಾಸವಾಗಿ ಗೆಲುವು ಸಾಧಿಸಲಿದೆ. ಇನ್ನು ಆಡಳಿತಕ್ಕೆ ಬಂದ ತಕ್ಷಣ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮಾತಿನಂತೆ ಜಾರಿಗೆ ತಂದಿದೆ. ಇದರಿಂದಾಗಿ ಲೋಕ¸ಭಾ ಚುನಾವಣೆಯಲ್ಲಿ ಇನ್ನೂ ಶೇ.5 ರಿಂದ 6 ರಷ್ಟು ಮತಗಳು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚುವರಿಯಾಗಿ ಲಭಿಸಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದ್ದೇವೆ ಎಂದರು.
ಚುನಾವಣೆಗೂ ಮೊದಲು ಎಲ್ಲಾ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳುತ್ತಿದ್ದರು. ಯಾವ ಆಧಾರದಲ್ಲಿ ಹಾಗೆ ಹೇಳುತ್ತಿದ್ದರೋ ಗೊತ್ತಿಲ್ಲ. ಆದರೆ ಈಗ 20 ರಿಂದ 24 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದಾರೆ. ಇದರಿಂದಲೇ ಅವರು ಗೆಲ್ಲುವುದಿಲ್ಲ ಎಂಬುದು ಗೊತ್ತಾಗುತ್ತದೆ. ಶಿವಮೊಗ್ಗದಲ್ಲಿಯೂ ಗೀತಾ ಶಿವರಾಜ್ಕುಮಾರ್ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಘೋಷಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ #PM Narendra Modi ಕೂಡ ಈ ಬಾರಿ 400 ಸ್ಥಾನ ಗೆಲ್ಲುವುದಾಗಿ ಹೇಳುತ್ತಿದ್ದರು. ಎರಡು ಹಂತದ ಚುನಾವಣೆ ಬಳಿಕ ಅದರ ಬಗ್ಗೆ ಮಾತೇ ಆಡುತ್ತಿಲ್ಲ. ಅವರಿಗೂ ಮತದಾನದ ಮಾಹಿತಿ ಸಿಕ್ಕಿರುತ್ತದೆ. ಹೆಚ್ಚೆಂದರೆ 200 ಸ್ಥಾನ ಗಳಿಸಬಹುದು. ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರೂ, ನಿರುದ್ಯೋಗಿಗಳಿಗೆ ವರ್ಷಕ್ಕೆ ಹಣ ಸೇರಿದಂತೆ ಲೋಕಸಭಾ ಚುನಾವಣೆಗೂ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳು ಪ್ರಭಾವ ಬೀರಿದೆ. ದೇಶದ ಜನತೆ ಇದಕ್ಕೆ ಮತ ನೀಡಲಿದ್ದಾರೆ ಎಂದರು.
Also read: ಶಿವಮೊಗ್ಗ | ಕೆ.ಎಸ್. ಈಶ್ವರಪ್ಪ ಕಚೇರಿ ಮುಂದೆ ವಾಮಾಚಾರ | ಮಾಜಿ ಡಿಸಿಎಂ ಆರೋಪ ಯಾರ ವಿರುದ್ಧ?
ಹತ್ತು ವರ್ಷ ಆಡಳಿತ ನಡೆಸಿದ ಬಿಜೆಪಿ ಸರ್ಕಾರ ಏನನ್ನೂ ಮಾಡಲಿಲ್ಲ. ಬೆಲೆ ಏರಿಸಿದ್ದನ್ನು ಬಿಟ್ಟರೆ ಮತ್ತೇನೂ ಇಲ್ಲ. ಉದ್ಯೋಗಗಳು, ಸೃಷ್ಟಿಯಾಗಲಿಲ್ಲ. ಕಪ್ಪು ಹಣ ತರಲಿಲ್ಲ, ಮಣಿಪುರದ ಘಟನೆ ಬಗ್ಗೆ ಅನುಕಂಪ ತೋರಿಸಲಿಲ್ಲ. ಮಹಿಳಾ ಕುಸ್ತಿಪಟುಗಳಿಗೆ ಅನ್ಯಾಯವಾದಾಗ ಮಾತನಾಡಲಿಲ್ಲ. ಪಾಕಿಸ್ತಾನದ ಬಗ್ಗೆ ಮಾತನಾಡುವ ಮೋದಿ ಅವರು ಚೀನಾದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ನಾವು ಭ್ರಷ್ಟರು ಎಂದವರನ್ನು ಯಾಕೆ ಬಿಜೆಪಿಗೆ ಸೇರಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದರು.
ಪುಲ್ವಾಮಾ ದಾಳಿಯ ಬಗ್ಗೆ ಮಾತನಾಡಿದರು. ಜನರಲ್ಲಿ ಯುದ್ಧದ ಭಯ ಹುಟ್ಟಿಸಿದ್ದರು. ಪುಲ್ವಾಮಾ ದಾಳಿ ಹೇಗಾಯ್ತು ಸತ್ಯ ನಂತರ ಹೊರಬಿದ್ದಿತು. ಐಟಿ, ಇಡಿಗಳ ದುರುಪಯೋಗ ಗೊತ್ತೇ ಇದೆ. ಧರ್ಮದ ಬಗ್ಗೆ ಮಾತನಾಡುವುದನ್ನು ಅವರು ಬಿಟ್ಟಿಲ್ಲ. ಈಗ ಎಲ್ಲವನ್ನೂ ಮುಸ್ಲಿಂ ಎಂಬ ಪದವನ್ನು ಹಿಡಿದುಕೊಂಡು ಕುಳಿತುಕೊಂಡಿದ್ದಾರೆ. ಇದು ಬಹಳ ದಿನ ನಡೆಯುವುದಿಲ್ಲ ಎಂದರು.
ಗುರುವಾರ ನಗರಕ್ಕೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಎಂಎಲ್ಸಿ ಇನಾಯತ್ ಅಲಿ, ಪ್ರಮುಖರಾದ ಯು. ಶಿವಾನಂದ, ವಿಜಯ್ಕುಮಾರ್(ದನಿ), ಹಬೀಬ್ ಉಲ್ಲಾ, ದೇವಿಕುಮಾರ್, ಮೂರ್ತಿ, ಲಕ್ಷ್ಮಿ ವೆಂಕಟೇಶ್ ಇನ್ನಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post