No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 19, 2021
in ಶಿವಮೊಗ್ಗ
0
ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

Image Courtesy: Internet

Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮ ಆಗಸ್ಟ್ 14 ರ ಎರಡನೇ ಶನಿವಾರ ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್.ಎಸ್.ಎ ಮನವಿ ಮಾಡಿದರು.

ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಇಂದು ‘ಲೋಕ ಅದಾಲತ್’ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ಆಗಸ್ಟ್ 14 ರ ಎರಡನೇ ಶನಿವಾರದಂದು ಜಿಲ್ಲೆಯಲ್ಲಿ ಬೃಹತ್ ಲೋಕ್ ಅದಾಲತ್ ನಡೆಯಲಿದೆ ಎಂದರು.

ಈ ಲೋಕ್ ಅದಾಲತ್‍ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್‍ಬೌನ್ಸ್ ಪ್ರಕರಣಗಳು ಸೇರಿದಂತೆ ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಈ ಬಾರಿ ಮೋಟಾರು ಪರಿಹಾರ ಮತ್ತು ಚೆಕ್ ಬೌನ್ಸ್ ಪ್ರಕರಣಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥಪಡಿಸಲು ಉದ್ದೇಶಿಸಲಾಗಿದೆ.

ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ವಿನೀತ ಶರ್ಮ ವಿರುದ್ಧ ರಾಕೇಶ್ ಶರ್ಮ, ಮತ್ತು ಇತರರು ಪ್ರಕರಣದಲ್ಲಿ ದಿನಾಂಕ 11.08.2020 ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮಪಾಲಿದ್ದು, ವಿಭಜನಾ ಪ್ರಕರಣಗಳನ್ನು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಈ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು ಎಂದರು.

ವಾಜ್ಯ ಪೂರ್ವ ಮತ್ತು ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥ:
ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು. ವಿದ್ಯುಚ್ಛಕ್ತಿ, ಜಲಮಂಡಳಿ ಹಾಗೂ  ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ಅವಾರ್ಡ್ ಪಾಸು ಮಾಡಲಾಗುವುದು. ಅಂತಹ ಅವಾರ್ಡ್ ನ್ಯಾಯಾಲಯದಲ್ಲಿ ಮಾಡಬಹುದಾದ ಡಿಕ್ರಿ ಇದ್ದಂತೆ ಆಗುತ್ತಿದ್ದು, ಅಂತಹ ಅವಾರ್ಡ್‍ಗಳನ್ನು ಸಂಬಂಧಪಟ್ಟ ಸಿವಿಲ್ ನ್ಯಾಯಾಲಯಗಳಲ್ಲಿ ಅಮಲ್‍ಬಜಾವಣೆ ಮಾಡಲು ಕಾನೂನಿನಲ್ಲಿ ಅವಕಾಶ ಇದೆ. ಇದರಿಂದ ಕಕ್ಷಿದಾರರಿಗೆ ನ್ಯಾಯಾಲಯದ ಖರ್ಚು ಹಾಗೂ ಅವರ ಅಮೂಲ್ಯ ಸಮಯ ಉಳಿತಾಯವಾಗುತ್ತದೆ. ಅಲ್ಲದೇ ಶೀಘ್ರವಾಗಿ ನ್ಯಾಯದಾನವಾಗುತ್ತದೆ. ಆದ್ದರಿಂದ ಜನತೆ ಇಂತಹ ಪ್ರಕ್ರಿಯೆಯ ಉಪಯೋಗವನ್ನು ಪಡೆಯಬೇಕೆಂದು ಕೋರುತ್ತೇನೆ. ಕೋವಿಡ್ ಹಿನ್ನೆಲೆಯಲ್ಲಿ ಪಕ್ಷಗಾರರು ವಿಡಿಯೋ ಕಾನ್ಫರೆನ್ಸ್, ವಿಡಿಯೋ ಕಾಲ್ ಮೂಲಕ ಹಾಗೂ ನ್ಯಾಯಾಲಯಕ್ಕೆ ಕೂಡ ಹಾಜರಾಗಿ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಬಹುದು ಎಂದರು.

2223 ಪ್ರಕರಣ ಇತ್ಯರ್ಥದ ಗುರಿ :
ದಿನಾಂಕ 01.07.2021 ರವರೆಗೆ ನಮ್ಮ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿನ ಬಾಕಿ ಇರುವ ಪ್ರಕರಣಗಳ ಒಟ್ಟು ಸಂಖ್ಯೆ 50,295 ಇವೆ. ಅವುಗಳ ಪೈಕಿ ಜುಲೈ 16 ರವರೆಗೆ 9,939 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳಾಗಿದ್ದು ಇವುಗಳ ಪೈಕಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳ ವತಿಯಿಂದ ಒಟ್ಟು 2,223 ಪ್ರಕರಣಗಳನ್ನು ಆಗಸ್ಟ್ 14 ರಂದು ನಡೆಯಲಿರುವ ಬೃಹತ್ ಲೋಕ್ ಅದಾಲತ್‍ಗಾಗಿ ಗುರುತಿಸಲಾಗಿರುತ್ತದೆ ಹಾಗೂ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಕರಣಗಳನ್ನು ರಾಜೀಸಂಧಾನಕ್ಕಾಗಿ ಗುರುತಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.

ಕೋವಿಡ್ ಸಾಂಕ್ರಾಮಿಕ ಅವಧಿಯಲ್ಲೂ ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಗೌರವಾನ್ವಿತ ಪ್ರಾಧಿಕಾರ, ಬೆಂಗಳೂರು, ಇವರ ನಿರ್ದೇಶನದ ಮೇರೆಗೆ ದಿನಾಂಕ 27.03.2021 ರಂದು ಬೃಹತ್ ಲೋಕ್ ಅದಾಲತ್ತನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಧೀಶರುಗಳು, ನ್ಯಾಯವಾದಿಗಳು, ವಿಮೆ ಕಂಪನಿಯ ಅಧಿಕಾರಿಗಳು, ಪ್ಯಾನಲ್ ವಕೀಲರುಗಳು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಸಹಕಾರದಿಂದ ಒಟ್ಟು 17,673 ಪ್ರಕರಣಗಳನ್ನು ಗುರುತಿಸಿ ಅವುಗಳ ಪೈಕಿ 13,214 ಪ್ರಕರಣ ವಿಲೇವಾಗೊಂಡಿರುತ್ತವೆ.

ಕಾನೂನು ನೆರವಿಗೆ ಸೇವಾ ಕೇಂದ್ರ :  
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕಾಲಕಾಲಕ್ಕೆ ಕಾನೂನು ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಿ ಎಲ್ಲಾ ವರ್ಗದ ಜನರಿಗೆ ಸಂಬಂಧಪಟ್ಟಂತಹ ಕಾನೂನುಗಳ ಅರಿವು ಮೂಡಿಸುವುದು ಮತ್ತು ಅವಶ್ಯಕ ವ್ಯಕ್ತಿಗಳಿಗೆ ನೆರವು ನೀಡುವ ಪ್ರಕ್ರಿಯ ನಿರಂತರವಾಗಿ ಜಾರಿಯಲ್ಲಿದೆ. ಈ ರೀತಿ ಕಾನೂನು ಅರಿವು ಮತ್ತು ನೆರವು ನೀಡುವ ನಿಟ್ಟಿನಲ್ಲಿ ನಮ್ಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಫ್ರಂಟ್ ಆಫೀಸ್ ಕ್ಲಿನಿಕ್, ಕಾನೂನು ಸೇವೆಗಳ ಕ್ಲಿನಿಕ್, ತಾಲ್ಲೂಕು ಆಫೀಸ್ ಕ್ಲಿನಿಕ್, ಸಿಡಿಪಿಓ ಕ್ಲಿನಿಕ್, ಜೆಜೆಬಿ ಕ್ಲಿನಿಕ್, ಜೈಲು ಕ್ಲಿನಿಕ್ ಆರ್‍ಟಿಓ ಕ್ಲಿನಿಕ್ ಎಂಬುದಾಗಿ ಕಾನೂನು ಸೇವಾ ಕೇಂದ್ರಗಳನ್ನು ರಚಿಸಲಾಗಿ ಆಯಾ ಕ್ಲಿನಿಕ್‍ಗಳಲ್ಲಿ ಒಬ್ಬೊಬ್ಬ ಪ್ಯಾನಲ್ ನ್ಯಾಯವಾದಿಗಳನ್ನು ನಿಯೋಜಿಸಲಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ 2011 ರ ಪ್ರಕಾರ ಮೊತ್ತೊಬ್ಬರ ಅಪರಾಧಿಕ ಕೃತ್ಯದಿಂದ ಮರಣ ಉಂಟಾಗಿ, ಇಲ್ಲವೇ ಅತ್ಯಾಚಾರಕ್ಕೊಳಗಾಗಿ, ಇಲ್ಲವೇ ಆ್ಯಸಿಡ್ ದಾಳಿಗೆ ತುತ್ತಾದವರಿಗೆ ಅಥವಾ ಇನ್ನಿತರ ಯಾವುದೇ ರೀತಿಯಿಂದ ಗಾಯಗೊಂಡ ನೊಂದ ವ್ಯಕ್ತಿಗಳಿಗೆ ಪರಿಹಾರ ಕೊಡುವಂತಹ ವಿಚಾರಣಾ ಪ್ರಕ್ರಿಯೆ ನಡೆಯುತ್ತದೆ. 2014 ರಿಂದ ಇಲ್ಲಿಯವರೆಗೆ 299 ಪ್ರಕರಣಗಳು ದಾಖಲಾಗಿದ್ದು 297 ಪ್ರಕರಣಗಳಲ್ಲಿ ವಿಚಾರಣೆ ನಡೆಸಿ ಇತ್ಯರ್ಥಗೊಳಿಸಿದ್ದೇವೆ. ಇಲ್ಲಿಯವರೆಗೂ ಒಟ್ಟು 175 ಪ್ರಕರಣಗಳಲ್ಲಿ ಒಟ್ಟು 4,31,77,500ರೂ.ಗಳನ್ನು ಬಿಡುಗಡೆ ಮಾಡಿ ನೊಂದ ವ್ಯಕ್ತಿಗಳಿಗೆ ಪರಿಹಾರ ನೀಡಿದ್ದೇವೆ. ಇಂತಹ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯ ನೊಂದ ವ್ಯಕ್ತಿಗಳು ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಪಡೆಯಬಹುದು ಎಂದು ಮಾಹಿತಿ ನೀಡಿದ ಅವರು ರಾಜೀಯಾಗಬಲ್ಲ ಎಲ್ಲ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸಾರ್ವಜನಿಕರು ಆ.14 ರಂದು ಲೋಕ್ ಅದಾಲತ್‍ನಲ್ಲಿ ಪಾಲ್ಗೊಂಡು ಶೀಘ್ರ ಮತ್ತು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ ಕೆ.ಎನ್ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLok AdalatMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಲೋಕ್ ಅದಾಲತ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share211Tweet123Send
Previous Post

ದೇಶದಲ್ಲಿ ಪ್ರಸ್ತುತ ಕೊರೋನಾ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ? ಇಲ್ಲಿದೆ ಮಾಹಿತಿ…

Next Post

ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸಿತ್ಯಂತರ: ಪತ್ರಿಕಾ ದಿನಾಚರಣೆಯ ಒಂದು ಮೆಲುಕು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸಿತ್ಯಂತರ: ಪತ್ರಿಕಾ ದಿನಾಚರಣೆಯ ಒಂದು ಮೆಲುಕು…

ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸಿತ್ಯಂತರ: ಪತ್ರಿಕಾ ದಿನಾಚರಣೆಯ ಒಂದು ಮೆಲುಕು...

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL