No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Monday, May 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನದಿಂದ ಮನುಷ್ಯ ಸಂಬಂಧ ಸಡಿಲ | ಹಿರಿಯ ಪತ್ರಕರ್ತ ಜೋಗಿ ಬೇಸರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 18, 2025
in ಶಿವಮೊಗ್ಗ
0
ತಂತ್ರಜ್ಞಾನದಿಂದ ಮನುಷ್ಯ ಸಂಬಂಧ ಸಡಿಲ | ಹಿರಿಯ ಪತ್ರಕರ್ತ ಜೋಗಿ ಬೇಸರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸಿ) #Artificial Intelligence ಎಂಬುವುದು ಮನುಷ್ಯನ ದೈನ್ಯಂದಿನ ಭಾಗವಾಗಿ ವೇಗವಾಗಿ ಬೆಳೆಯುತ್ತಿದ್ದು, ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು ಎಂದು ಲೇಖಕ, ಸಾಹಿತಿ, ಹಿರಿಯ ಪತ್ರಕರ್ತ ಜೋಗಿ (ಗಿರೀಶ್ ರಾವ್ ಹತ್ವರಾ) #Journalist Jogi ಹೇಳಿದರು.

ಅವರು ಇಂದು ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಕೃತಕ ಬುದ್ಧಿಮತ್ತೆ ಎಂಬುವುದು ಇಂದು ಆಧುನಿಕ ಜೀವನ ಶೈಲಿಯ ಬಹುತೇಕ ಎಲ್ಲಾ ಹಂತಗಳಲ್ಲಿಯೂ ಸದ್ದಿಲ್ಲದೆ ಜಾಗ ಮಾಡಿಕೊಳ್ಳುತ್ತಿದೆ. ಆರೋಗ್ಯ, ಶಿಕ್ಷಣ, ವ್ಯಾಪಾರ, ಮನರಂಜನೆ ಹೀಗೆ ಎಲ್ಲಾ ವಿಷಯಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಸ್ಥಾನವನ್ನು ವಿಸ್ತರಿಸಿಕೊಳ್ಳುತ್ತಿದೆ. ಇದು ಭಯ ಮತ್ತು ಆತಂಕವನ್ನು ಸೃಷ್ಟಿಸುವುದರ ಜೊತೆಗೆ ಜ್ಞಾನವನ್ನು ಕೂಡ ವಿಸ್ತರಿಸುತ್ತಿದೆ. ಆಗಾಗಿ ಇದನ್ನು ಒಳಿತಿಗಷ್ಟೇ ಬಳಸಿಕೊಳ್ಳಬೇಕಾಗಿದೆ.
ಈಗಿನ ತಂತ್ರಜ್ಞಾನ ಸಾಮಾಜಿಕ ಜಾಲತಾಣಗಳ #Social Media ಮೂಲಕ ಸಾಗುತ್ತಿದ್ದು, ಕೌಟುಂಬಿಕ ಮತ್ತು ಮನುಷ್ಯ ಸಂಬಂಧಗಳನ್ನೇ ಸಡಿಲಗೊಳಿಸುತ್ತಿವೆ. ಅದರಲ್ಲೂ ಎಐ ಮನೆಯ ಮಗನಂತೆ ಕೆಲಸ ಮಾಡುತ್ತಿದೆ. ನಮ್ಮ ಪ್ರತಿನಿತ್ಯದ ಸರಳ ಕ್ಷಣಗಳು ಕೂಡ ಇದಕ್ಕೆ ಆಹುತಿಯಾಗುತ್ತಿವೆ. ನಮ್ಮ ಜ್ಞಾನ ಮತ್ತು ವಿವೇಕಗಳು ನಾವು ಹೆಚ್ಚುತ್ತಿವೆ ಎಂದು ಭಾವಿಸುತ್ತೇವೆ. ಆದರೆ, ಇದು ನಿಜಕ್ಕೂ ಕಡಿಮೆಯಾಗುತ್ತಿದೆ. ಆಗಾಗಿ ಈ ಬಗ್ಗೆ ನಾವು ಒಂದು ದೊಡ್ಡ ಸವಾಲನ್ನೇ ಎದುರಿಸುತ್ತಿದ್ದೇವೆ. ನಿರಾಕರಣೆ ಮಾಡಲಾಗದೆ ಮತ್ತು ಅನುಕರಣೆ ಮಾಡಲಾಗದೆ ಆತಂಕ ಸ್ಥಿತಿಯಲ್ಲಿ ನಾವಿದ್ದೇವೆ.

ಈ ಕೃತಿಕ ಬುದ್ಧಿಮತ್ತೆ ಇನ್ನೂ ಕೆಲವೇ ದಿನಗಳಲ್ಲಿ ಕನ್ನಡಕ್ಕೂ ಬರುವುದರಲ್ಲಿ ಆಶ್ಚರ್ಯವಿಲ್ಲ. ನಾವು ಏನೇ ಕೆಲಸ ಮಾಡಬೇಕಾದರೂ ಈ ಯಂತ್ರವನ್ನು ಕೇಳಿಯೇ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಯಾವುದೇ ವಿಷಯವನ್ನು ತಿಳಿದುಕೊಳ್ಳಲು ಅನಿವಾರ್ಯವಾಗಿ ಇದರ ಮೊರೆಯನ್ನು ನಾವು ಹೋಗಬೇಕಾಗುತ್ತದೆ. ಪತ್ರಿಕೋದ್ಯಮಕ್ಕೂ ಇದು ಅನಿವಾರ್ಯವಾಗಿ ಬಿಡುತ್ತಿದೆ ಎಂದರು.

ಈಗಾಗಲೇ ಬರೆಯುವವರು ತಮ್ಮ ಮೊನಚನ್ನು ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಯುವ ಜನಾಂಗಕ್ಕೆ ಪ್ರಭಾವಿಗಳು ಇಲ್ಲವಾಗುತ್ತಿದೆ. ನಾವು ತುಂಬ ಗೊಂದಲದಲ್ಲಿದ್ದೇವೆ. ಬರೆಯುವುದನ್ನು ಮರೆತು ಮಾತನಾಡ ತೊಡಗಿದ್ದೇವೆ. ಮೌಖಿಕವೇ ವಿಜೃಂಭಿಸುತ್ತಿದೆ. ಇದು ಪತ್ರಿಕೋದ್ಯಮಕ್ಕೂ ತನ್ನ ಕಬಂದ ಬಾಹುವನ್ನು ಚಾಚಿಕೊಂಡಿದೆ ಎಂದರು.

Also read: ಶಿವಮೊಗ್ಗ | 2022ರ ಕೊಲೆ ಪ್ರಕರಣ | ಆರೋಪಿ ಜಿಕ್ರುಲ್ಲಾಗೆ ಜೀವಾವಧಿ ಶಿಕ್ಷೆ | ಏನಿದು ಕೇಸ್?

ಪತ್ರಿಕೆಗಳಿಗಿಂತ ಮುಂಚೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿಷಯಗಳು ಶರವೇಗದಲ್ಲಿ ಪ್ರಕಟವಾಗುತ್ತಿವೆ. ಯೂ ಟ್ಯೂಬ್‍ನಂತಹ ಚಾನಲ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳು ಪತ್ರಿಕೋದ್ಯಮಕ್ಕೆ ಒಂದು ಸವಾಲಾಗಿಯೇ ಪರಿಗಣಿಸಿದೆ. ಇದು ಶಕ್ತಿಯೂ ಹೌದು, ಭಯವೂ ಹೌದು. ಪತ್ರಕರ್ತರ ವಿವೇಚನೆಯನ್ನೇ ಪ್ರಶ್ನಿಸುವ ಅಥವಾ ಮರೆತುಬಿಡುವ ಪ್ರಶ್ನೆಯಾಗಿ ಇಂದು ಬೆಳೆಯುತ್ತಿದೆ. ಮನುಷ್ಯರ ಕ್ರಿಯಾಶೀಲತೆಯನ್ನು ಅಡವಿಟ್ಟಂತಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪತ್ರಿಕೆಗಳನ್ನು ಓದುವುದೇ ಕಡಿಮೆಯಾಗುತ್ತಿದೆ. ನಾವು ಬಳಕೆಯ ಆನಂದವನ್ನು ಕಳೆದುಕೊಳ್ಳ ತೊಡಗಿದ್ದೇವೆ. ಓದುವ ಹಸಿವು ಕೂಡ ಇಲ್ಲವಾಗಿದೆ. ಸಾಹಿತ್ಯವು ಕೂಡ ದೂರತಳ್ಪಟ್ಟಿದೆ. ಕ್ರೈಮ್, ರಾಜಕಾರಣ ವಿಜೃಂಭಿಸುತ್ತಿದೆ. ಸಿನಿಮಾ ಕ್ಷೇತ್ರವು ಕೂಡ ಹಾಗೆಯೇ ಆಗಿದೆ. ಒಂದು ಕೌಟುಂಬಿಕ ಸಿನಿಮಾಗಳು ಇಂದು ಬರುತ್ತಿಲ್ಲ. ಓಟಿಪಿಯ ರೋಗ ಸಿನಿಮಾ ಕ್ಷೇತ್ರವನ್ನು ಬಾಧಿಸುತ್ತಿದೆ. ಸಿನಿಮಾ ರಂಗದಲ್ಲೂ ಕೂಡ ಯಾವುದೇ ಕಲಾವಿದ, ತಂತ್ರಜ್ಞಾನ, ವೃತ್ತಿಪರನಾಗದೇ ಹವ್ಯಾಸಿಯಾಗಿದ್ದಾನೆ. ಅದರಲ್ಲೂ ಕನ್ನಡ ಸಿನಿಮಾಗಳು ಓಟಿಪಿಯನ್ನು ಕೂಡ ಮುಟ್ಟಲು ಸಾಧ್ಯವಾಗುತ್ತಿಲ್ಲ ಎಂದರು.
ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಇರುವ ನಾವುಗಳು ನಮ್ಮ ಕ್ರಿಯಾಶೀಲತೆಯನ್ನು ಜೀವಂತವಾಗಿ ಇಟ್ಟುಕೊಳ್ಳಬೇಕಾಗಿದೆ. ಆಗಾಗಿ ಸಾಮಾಜಿಕ ಜಾಲತಾಣಗಳು ಈ ಕೃತಕ ಬುದ್ಧಿಮತ್ತೆ, ಆಧುನಿಕತೆ ಇವುಗಳ ಜೊತೆಯಾಗಿಯೇ ಇರಬೇಕಾದ ಅನಿವಾರ್ಯತೆ ಇರುವುದರಿಂದ ನಮ್ಮ ಭಾವುಕತೆಗಳನ್ನು ಇಟ್ಟುಕೊಂಡೇ ಮುಂದುವರೆಯಬೇಕು ಎಂದರು.

ಹಿರಿಯ ಪತ್ರಕರ್ತ ಗೋಪಾಲ್ ಯಡಗೆರೆ ಮಾತನಾಡಿ, ಜೋಗಿಯವರು ಬರೆಯುವವರೆಗೆ ಸ್ಫೂರ್ತಿಯಾಗಿದ್ದಾರೆ.ಅವರನ್ನು ನಾವು ಅಕ್ಷರ ಸರಸ್ವತಿ ಎಂದು ಕರೆಯುತ್ತಿದ್ದೇವೆ. ಇತ್ತೀಚೆಗಷ್ಟೇ ಅವರ 100ನೇ ಕೃತಿ ಇಳಂಗೋವನ್ ಕೃತಿ ಲೋಕಾರ್ಪಣೆಗೊಂಡಿದೆ. ಮಲೆನಾಡಿನ ಸಮಸ್ಯೆಗಳು ಸೇರಿದಂತೆ ಹಲವು ವಿಷಯಗಳತ್ತ ಪ್ರಭಾವ ಬೀರಿರುವ ಅವರದು ಬಹು ದೊಡ್ಡ ವ್ಯಕ್ತಿತ್ವವಾಗಿದೆ ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ನಾಗರಾಜ್ ನೇರಿಗೆ, ಗಿರೀಶ್ ಉಮ್ರಾಯಿ, ಶಿಜು ಪಾಶಾ, ಹುಲಿಮನೆ ತಿಮ್ಮಪ್ಪ ಸೇರಿದಂತೆ ಹಲವು ಪತ್ರಕರ್ತರು ಸಂವಾದದಲ್ಲಿ ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Artificial IntelligenceJournalist JogiKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsSocial mediaಕೃತಕ ಬುದ್ಧಿಮತ್ತೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಾಮಾಜಿಕ ಜಾಲತಾಣಹಿರಿಯ ಪತ್ರಕರ್ತ ಜೋಗಿ
Share196Tweet123Send
Previous Post

ಶಿವಮೊಗ್ಗ | 2022ರ ಕೊಲೆ ಪ್ರಕರಣ | ಆರೋಪಿ ಜಿಕ್ರುಲ್ಲಾಗೆ ಜೀವಾವಧಿ ಶಿಕ್ಷೆ | ಏನಿದು ಕೇಸ್?

Next Post

From Thyroid Cyst to Bronchogenic Cyst: A Surprising Twist and A Radiological and Surgical Triumph!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎಂತಹ ಕಠಿಣ ಖಾಯಿಲೆಗೂ ಚಿಕಿತ್ಸೆ ಖಾತರಿಪಡಿಸಿ ಮೆಡಿಕವರ್ ಆಸ್ಪತ್ರೆ | ನಡೆಸಿದ ಸರ್ಜರಿಯಾದ್ರೂ ಏನು?

From Thyroid Cyst to Bronchogenic Cyst: A Surprising Twist and A Radiological and Surgical Triumph!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

May 18, 2026
ಗಮನಿಸಿ! ಮೇ 20ರಂದು ಶಿವಮೊಗ್ಗದಲ್ಲಿ ಯಾವುದೇ ಮೆಡಿಕಲ್ ಶಾಪ್ ಓಪನ್ ಇರಲ್ಲ | ಕಾರಣವೇನು?

ಗಮನಿಸಿ! ಮೇ 20ರಂದು ಶಿವಮೊಗ್ಗದಲ್ಲಿ ಯಾವುದೇ ಮೆಡಿಕಲ್ ಶಾಪ್ ಓಪನ್ ಇರಲ್ಲ | ಕಾರಣವೇನು?

May 18, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
ಮಳೆಗಾಳಿಗೆ ಉರುಳಿದ ಮರ, ಗಂಟೆಗಟ್ಟಲೇ ರೈಲು ಸಂಚಾರ ವ್ಯತ್ಯಯ

ಮಳೆಗಾಳಿಗೆ ಉರುಳಿದ ಮರ, ಗಂಟೆಗಟ್ಟಲೇ ರೈಲು ಸಂಚಾರ ವ್ಯತ್ಯಯ

May 18, 2026
ಕೊಡಗು | ಎಲಿಫೆಂಟ್ ಬಾತಿಂಗ್ ವೇಳೆ ಬಿದ್ದ ಆನೆ ಅಡಿಗೆ ಸಿಲುಕಿ ಮಹಿಳೆ ಸಾವು | ಘಟನೆ ನಡೆದಿದ್ದು ಹೇಗೆ?

ಕೊಡಗು | ಎಲಿಫೆಂಟ್ ಬಾತಿಂಗ್ ವೇಳೆ ಬಿದ್ದ ಆನೆ ಅಡಿಗೆ ಸಿಲುಕಿ ಮಹಿಳೆ ಸಾವು | ಘಟನೆ ನಡೆದಿದ್ದು ಹೇಗೆ?

May 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL