ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಕ್ಷೇತ್ರದ ಜನರ ಸೇವೆ ಮಾಡಲು ನನಗೂ ಒಂದು ಅವಕಾಶ ಕೊಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಟಿಕೆಟ್ ನೀಡಬಹುದು ಎಂಬ ಆತ್ಮವಿಶ್ವಾಸವಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಟಿಕೆಟ್ ಆಕಾಂಕ್ಷಿ ಆಯನೂರು ಮಂಜುನಾಥ್ ತಮ್ಮ ಮನದಾಳದ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ಗಲಭೆಗಳು ನಡೆಯುತ್ತಿರುವುದು ನಿಜ. ಶಾಸಕ ಕೆ.ಎಸ್. ಈಶ್ವರಪ್ಪನವರು ಅದನ್ನು ಹತೋಟಿಗೆ ತಂದಿರುವುದೂ ನಿಜ. ಆದರೆ ಬಹಳಷ್ಟು ಬಡವರು ಗಲಭೆಗಳಿಂದ ಹತಾಶರಾಗಿದ್ದಾರೆ. ವ್ಯಾಪಾರಸ್ಥರು ಸಂಕಷ್ಟ ಅನುಭವಿಸಿದ್ದಾರೆ. ಒಂದು ರೀತಿಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿದ್ದವು. ನಗರದಲ್ಲಿ ಶಾಂತಿ ಸ್ಥಾಪಿಸಬೇಕು ಎಂಬುದು ಎಲ್ಲರ ಉದ್ದೇಶವೂ ಆಗಿದೆ. ಈ ಉದ್ದೇಶವನ್ನು ಮತ್ತಷ್ಟು ಉತ್ತಮಪಡಿಸಲು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂಬುದು ನನ್ನ ಒತ್ತಾಸೆಯಾಗಿದೆ ಎಂದರು.
Also read: ವಿಐಎಸ್’ಎಲ್, ಎಂಪಿಎಂ ಉಳಿಸಲು ಪ್ರಯತ್ನ: ನಾಳೆ ಸಿಎಂ ಜೊತೆ ಕಾರ್ಮಿಕರ ಮಹತ್ವದ ಮಾತುಕತೆ
ನಗರದಲ್ಲಿ ನನ್ನ ಕುರಿತಂತೆ ಫ್ಲೆಕ್ಸ್ ಅಳವಡಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಅಭಿಮಾನಿಗಳು ಹೇಳಿದ ರೀತಿ ಇದೆ ಅಷ್ಟೆ. ಇದು ನನ್ನ ಅಭಿಪ್ರಾಯವಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಾನು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗುವುದಕ್ಕೆ ಜನರಿಂದ ಯಾವ ವಿರೋಧವೂ ಇಲ್ಲ. ಈಶ್ವರಪ್ಪ ಮತ್ತು ನಾನು ಒಂದೇ ಕಾರಿನಲ್ಲಿ ಡ್ರೈವಿಂಗ್ ಮಾಡುತ್ತಿದ್ದೇವೆ. ಈಶ್ವರಪ್ಪನವರು ಡ್ರೈವಿಂಗ್ ಮಾಡುತ್ತಿದ್ದು, ಅವರಿಗೆ ದಣಿವಾದಾಗ ನಾನೂ ಸ್ವಲ್ಪ ದೂರ ಡ್ರೈವಿಂಗ್ ಮಾಡಬೇಕೆಂಬ ಬಯಕೆ ಇದೆ. ಅವರು ಅವಕಾಶ ಕೊಟ್ಟರೆ ಡ್ರೈವಿಂಗ್ ಮಾಡುತ್ತೇನೆ ಇಲ್ಲವೇ ಅವರ ಪಕ್ಕದಲ್ಲಿಯೇ ಕುಳಿತುಕೊಳ್ಳುವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post