ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಯಲ್ಲಿ ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದು, ಅವರ ಚಿನ್ಹೆ ಬಿಜೆಪಿಯದ್ದೇ ಎಂದು ಬಹಳಷ್ಟು ಮಂದಿ ತಿಳಿದಿದ್ದಾರೆ. ಆದರೆ, ಅದು ನನ್ನದಲ್ಲ. ನನ್ನ ಚಿನ್ಹೆ ಏಪ್ರಿಲ್ 22ರಂದು ತಿಳಿದುಬರಲಿದೆ ಎಂದು ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ. ಅವರ ಚಿನ್ಹೆ ಬಿಜೆಪಿ ಚಿನ್ಹೆ ಎಂದು ಜನರು ಭಾವಿಸಿದ್ದಾರೆ. ಈ ಬಾರಿ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ನಾಳೆಯಿಂದಲೇ ಕಾರ್ಯಕರ್ತರು ಕ್ಷೇತ್ರದ 280 ಬೂತ್’ಗಳ ಮನೆ ಮನೆಗೆ ಹೋಗಿ ಯಾಕೆ ಈಶ್ವರಪ್ಪ ಸ್ಪರ್ಧೆ ಮಾಡುತ್ತಿದ್ದಾರೆ ಎಂಬ ಕರಪತ್ರ ನೀಡಿ ಜನರಿಗೆ ಮನದಟ್ಟು ಮಾಡಿಕೊಡುವ ಕೆಲಸ ಮಾಡಲಿದ್ದಾರೆ ಎಂದರು.
ಏಪ್ರಿಲ್ 22ರಂದು ಚುನಾವಣೆಯ ಚಿನ್ಹೆ ಬರಲಿದೆ. ಆಗ ಈಶ್ವರಪ್ಪ ಅವರದು ಚಿನ್ಹೆ ಇದು, ಬಿಜೆಪಿ ಚಿನ್ಹೆ ಅಲ್ಲ ಎಂದು ಮತದಾರರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.
ನನ್ನ ಜೊತೆ ಹಿಂದು ಹುಲಿಗಳಿದ್ದಾರೆ
ಹಾವು, ಚೇಳುಗಳ ಟೀಕೆಗೆಲ್ಲ ತಲೆಕಡೆಸಿಕೊಳ್ಳಬೇಡಿ ಎಂದು ಬಿ.ವೈ. ರಾಘವೇಂದ್ರ #B Y Raghavendra ಅವರು ಹೇಳಿದ್ದಾರೆ. ಆದರೆ, ನಮ್ಮ ಬಳಿ ಯಾವ ಹಾವು, ಚೇಳುಗಳಿಲ್ಲ. ಮೆರವಣಿಗೆಯಲ್ಲಿ ಇದ್ದವರೆಲ್ಲಾ ಹಿಂದೂ ಹುಲಿಗಳು. ಇವರು ಯಾವುದೇ ಕಾರಣ ಬಗ್ಗಲ್ಲ, ಜಗ್ಗಲ್ಲ ಎಂದು ಹರಿಹಾಯ್ದರು.
ನಮ್ಮದೇ ನಿಜವಾದ ಹಿಂದುತ್ವ
ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಹಿಂದುತ್ವ, ಈಶ್ವರಪ್ಪ ಹಿಂದುತ್ವ ಒಂದೇ. ನಮ್ಮದು ಮೋದಿ #Modi ಹಿಂದುತ್ವ. ಆದರೆ, ರಾಜ್ಯದಲ್ಲಿ ಮಾತ್ರ ಅಪ್ಪ-ಮಕ್ಕಳ ಬಿಜೆಪಿಯಾಗಿದೆ. ಎಲ್ಲಿ ಮುಂದೆ ನಮಗೆ ಸಿಎಂ ಸ್ಥಾನಕ್ಕೆ ತೊಂದರೆಯಾಗುತ್ತದೆಯೋ ಎನ್ನುವ ಕಾರಣಕ್ಕೆ ಬಿಜೆಪಿಯಲ್ಲಿರುವ ಹಿಂದುತ್ವ ನಾಯಕರನ್ನು ಅಪ್ಪ-ಮಕ್ಕಳು ಹಿಂದೆ ಸರಿಸುತ್ತಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಬಿಟ್ಟರೆ ಬೇರೆ ಯಾರು ಇರಲಿಲ್ವಾ, ಸಿ.ಟಿ. ರವಿ, ಬಸವನ ಗೌಡ ಪಾಟೀಲ್ ಯತ್ನಾಳ್’ಗೆ ಅರ್ಹತೆ ಇರಲಿಲ್ವಾ? ಹಿಂದುತ್ವ ಉಳುವಿಗಾಗಿ ಅಪ್ಪ ಮಕ್ಕಳ ವಿರುದ್ಧ ಹೋರಾಟ ಮಾಡಲು ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿ ಅನೇಕ ನಾಯಕರು ನನ್ನ ಬೆಂಬಲಕ್ಕೆ ನಿಂತಿದ್ದಾರೆ ಎಂದರು.
Also read: ಕಾಶಿಪುರದಲ್ಲಿ ಬಿ.ವೈ. ರಾಘವೇಂದ್ರ, ಶಾಸಕ ಚನ್ನಬಸಪ್ಪ ಭರ್ಜರಿ ಪ್ರಚಾರ
ಈಶ್ವರಪ್ಪ ಗೆದ್ದ ನಂತರ ಅಭಿವೃದ್ಧಿ ಮಾಡುತ್ತಾರೆ ಎಂದು ಕ್ಷೇತ್ರದ ಜನರಿಗೆ ಗೊತ್ತಿದೆ. ರಾಘವೇಂದ್ರ ಮೋದಿ ಕೊಟ್ಟದ್ದನ್ನು ತಂದಿದ್ದಾರೆ. ನಾನು ಸಹ ಗೆದ್ದ ನಂತರ ಮೋದಿ ಯೋಜನೆಗಳನ್ನು ತಂದು ಅಭಿವೃದ್ಧಿ ಮಾಡುತ್ತೇನೆ. ಇದಕ್ಕಿಂತ ಮುಖ್ಯವಾಗಿ ನಾನು ಸಿದ್ಧಾಂತ ಪರ ಹೋರಾಟ ಮಾಡುತ್ತಿದ್ದೇನೆ. ಇದು ದೇಶಾದ್ಯಂತ ಚರ್ಚೆಯಾಗುತ್ತಿದೆ. ನಾಮಪತ್ರ ದಿನ ಜನ ಸೇರಿದ್ದು ನೋಡಿ ಈಶ್ವರಪ್ಪ ಗೆದ್ದಾಗಿದೆ ಎಂದು ರಾಜ್ಯ ನಾಯಕರೇ ಮಾತನಾಡುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಅವುಗಳ ಬಗ್ಗೆ ಗೆದ್ದ ಬಳಿಕ ಹೋರಾಟ ಮಾಡುತ್ತೇನೆ. ವಿಐಎಸ್’ಎಲ್ ಆರಂಭ ಮಾಡದಿದ್ದರೆ ಒಂದು ಓಟು ಕೊಡಬೇಡಿ ಎಂದು ಏನೂ ಮಾಡಿದ್ದಾರೆ ಎಂಬುದು ಗೊತ್ತಿದೆ. ಹೀಗಾಗಿ ನಾನೇ ಎಲ್ಲವನ್ನು ಸರಿ ಮಾಡುತ್ತೇನೆ ಎನ್ನುತ್ತಿಲ್ಲ. ಹೋರಾಟಗಾರರನ್ನು ಕರೆಸಿಕೊಂಡು ಕರೆಸಿ ಶರಾವತಿ ಸಂತ್ರಸ್ತ, ವಿಐಎಸ್’ಎಲ್ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ, ಅವರನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಧಿಕಾರಿ ಮಂತ್ರಿಗಳನ್ನು ಭೇಟಿ ಮಾಡಿಸಿ ಸಮಸ್ಯೆ ಬಗೆ ಹರಿಸುವಲ್ಲಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್ ಸುವರ್ಣ ಶಂಕರ್, ಲತಾ ಗಣೇಶ್, ಲಕ್ಷ್ಮೀ ಶಂಕರ್ ನಾಯಕ್, ವಿಶ್ವಾಸ್, ಆರತಿ ಆ.ಮ. ಪ್ರಕಾಶ್, ಮಹಲಿಂಗಯ್ಯ ಶಾಸ್ತ್ರೀ, ಬಿಜೆಪಿ ಭದ್ರಾವತಿ ಘಟಕದ ಅಧ್ಯಕ್ಷ ಪ್ರಭಾಕರ್, ಆಂಜನೇಯ ಸೇರಿದಂತೆ ಹಲವು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post