ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣೆಗಾಗಿ ಮಾತ್ರ ಮಾತನಾಡುವ ವ್ಯಕ್ತಿ ನಾನಲ್ಲ, ಬದಲಾಗಿ ಜನರ ನಡುವೆಯೇ ಇದ್ದು ಅಭಿವೃದ್ಧಿ ಮಾಡುವವನು ನಾನು ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಚುನಾವಣೆಗಾಗಿ ಮಾತ್ರ ಮಾತನಾಡುವ ಪಕ್ಷ ನಮ್ಮದಲ್ಲ ಹಾಗೂ ಅಂತಹ ವ್ಯಕ್ತಿಯೂ ನಾವಲ್ಲ. ಜನರ ಮದ್ಯೆ ಇದ್ದು ಅಭಿವೃದ್ಧಿ, ಆ ಮೂಲಕ ದೇಶದ ರಕ್ಷಣೆ, ಜನಪರ ಯೋಜನೆಗಳ ಚಿಂತನೆ ನಡೆಸುವ ಪಕ್ಷ ಬಿಜೆಪಿ. ಇದರ ಕಾರ್ಯಕರ್ತರಾಗಿರುವ ನಾವು ಪ್ರಧಾನಿ ನರೇಂದ್ರ ಮೋದಿ ಯವರನ್ನು ಬೆಂಬಲಿಸಬೇಕಿದೆ ಎಂದು ಕರೆ ನೀಡಿದರು.
ದೇಶದ ಅಭಿವೃದ್ಧಿಗಾಗಿ ದುಡಿಯುತ್ತಿರುವ ಮೋದಿಯವರು ಮತ್ತೆ ಪ್ರಧಾನಿಯಾಗಲು ನಾವು ಕೆಲಸ ಮಾಡುತ್ತಿದ್ದೇವೆ. ಮೋದಿ ಎಂದರೆ ಅಭಿವೃದ್ಧಿ. ಹಿಂದೆ ಎಲ್’ಪಿಜಿ ಸಿಲಿಂಡರ್ ದೊರೆಯದ ಸ್ಥಿತಿಯಲ್ಲಿತ್ತು. ಆದರೆ, ಈಗ ಬೇಕಾದಂತೆ ದೊರೆಯುತ್ತಿದೆ. ಬಡ ಕುಟುಂಬಗಳಿಗೆ ಉಚಿತ ಸಿಲಿಂಡರ್ ಪೂರೈಸುತ್ತಿದ್ದೇವೆ. ಆದರೆ, 60 ವರ್ಷದಲ್ಲಿ ಕಾಂಗ್ರೆಸ್ ಈ ಬಗ್ಗೆ ಮಾಡಿದ್ದೇನೆ ಎಂದು ಪ್ರಶ್ನಿಸಿದರು.
Also read: ಈ ಕಾರಣಕ್ಕಾಗಿ ಗೀತಾ ಶಿವರಾಜಕುಮಾರ್ ಅವರನ್ನು ಗೆಲ್ಲಿಸಿ | ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?
ಪ್ರತಿ ಗ್ರಾಮಗಳಲ್ಲೂ ಉತ್ತಮ ರಸ್ತೆ, ಶೌಚಾಲಯ ಅಭಿವೃದ್ಧಿ, ಮಹಿಳಾ ಸಬಲೀಕರಣಗಳಿಗೆ ಅನೇಕ ಯೋಜನೆಗಳು ಮೋದಿ ಅವರು ಜಾರಿಗೆ ತಂದಿದ್ದಾರೆ. ನೀವೇನು ಮಾಡಿದ್ದೀರಿ ಎಂದರು.
ಲೋಕಸಭಾ ಚುನಾವಣೆ ದೇಶವನ್ನು ಅಭಿವೃದ್ಧಿಗೊಳಿಸುವ ಚುನಾವಣೆ. ಗ್ಯಾರೆಂಟಿಗಾಗಿ ನಡೆಯವ ಚುನಾವಣೆ ಅಲ್ಲ. ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ಮಹಿಳಾ ಸಬಲೀಕರಣಕ್ಕಾಗಿ, ಸ್ವಾವಲಂಭಿಯಾಗಿ ಬದುಕಬೇಕೆನ್ನುವ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಹಿಳಾ ಮೀಸಲಾತಿ, ಸ್ಟಾರ್ಟಪ್ ಯೋಜನೆ, ತ್ರಿವಳಿ ತಲಾಖ್, ಜನಧನ್ ಯೋಜನೆ, ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ, ವಿಶ್ವಕರ್ಮ ಯೋಜನೆ ಹೀಗೆ ಹತ್ತು ಹಲವು ಕಾರ್ಯಕ್ರಮ ನೀಡಿದ್ದಾರೆ. ಇಂತಹ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದರು.
ಜಿಲ್ಲಾಧ್ಯಕ್ಷೆ ಗಾಯತ್ರಿ ಮಲ್ಲಪ್ಪ, ಶಾಸಕ ಚನ್ನಬಸಪ್ಪ, ನಗರಾಧ್ಯಕ್ಷಮೋಹನ್ ರೆಡ್ಡಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿಶ್ರೀ ನಿವಾಸ್, ಪ್ರಧಾನ ಕಾರ್ಯದರ್ಶಿಗಳಾದ ಯಶೋಧ ವೈಷ್ಣವ್, ಸುರೇಖಾ ಮುರಳೀಧರ್, ಜ್ಯೋತಿ ಪ್ರಕಾಶ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post