No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Friday, February 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾನು ಅಖಾಡಕ್ಕೆ ರೆಡಿ, ನನ್ನ ಗೆಲುವು ಶತಸಿದ್ಧ: ಮಾಜಿ ಡಿಸಿಎಂ ಈಶ್ವರಪ್ಪ ಗುಡುಗು

ಬಿಜೆಪಿ ನಾಯಕರುಗಳ ವಿರುದ್ಧ ಕೆಎಸ್‌ಈ ತೀಕ್ಷ್ಣ ವಾಗ್ಧಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2024
in ಶಿವಮೊಗ್ಗ
0
ಚುನಾವಣಾ ರಾಜಕೀಯ ನಿವೃತ್ತಿ ಅಷ್ಟೇ ಪಡೆದಿದ್ದೇನೆ, ಜೀವನ ಪರ್ಯಂತ ಪಕ್ಷ ಸಂಘಟನೆ ಮಾಡ್ತೀನಿ: ಈಶ್ವರಪ್ಪ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿ.ಎಸ್. ಯಡಿಯೂರಪ್ಪನವರು #B S Yadiyurappa ನೀಚರು. ಆರಗ ಜ್ಞಾನೇಂದ್ರ #Araga Gnanendra ಒಬ್ಬ ಹುಚ್ಚ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ಬಿಜೆಪಿ ನಾಯಕರುಗಳ ವಿರುದ್ಧ ಹರಿಹಾಯ್ದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯಡಿಯೂರಪ್ಪನವರು ಎಷ್ಟು ನೀಚರಿದ್ದಾರೆ ಎಂದರೆ, ಅದು ಯಾರಿಗೂ ಗೊತ್ತಾಗುವುದಿಲ್ಲ. ಅವರ ಬಗ್ಗೆ ಹೇಳುತ್ತಾ ಹೋದರೆ ಈ ಪತ್ರಿಕಾಗೋಷ್ಠಿ ಸಾಕಾಗುವುದಿಲ್ಲ. ನಾನು ಹೇಳಿದರೆ ಅವರ ಅಸಲಿ ಚಿತ್ರಗಳು ಹೊರ ಬರುತ್ತವೆ. ಅವರಿಗೆ ಶೋಭ ಅವರ ಮೇಲೆ ಯಾಕಿಷ್ಟು ಮೋಹವೂ ಗೊತ್ತಿಲ್ಲ. ಮಹಿಳೆಯರೆಂದರೆ ಕೇವಲ ಶೋಭ ಮತ್ತು ಭಾರತಿ ಶೆಟ್ಟಿಯವರು ಮಾತ್ರವೇ ಎಂದು ಪ್ರಶ್ನೆ ಮಾಡಿದರು.
ಯಡಿಯೂರಪ್ಪನವರು ಯಾವ ಮುಖ ಇಟ್ಟುಕೊಂಡು ಪ್ರಚಾರಕ್ಕೂ ಬರುತ್ತಾರೋ ಗೊತ್ತಿಲ್ಲ. ನೆನ್ನೆ ಅವರು ಪತ್ರಕರ್ತರೊಡನೆ ಮಾತು ಆಡಲಿಲ್ಲ. ಮಹಿಳೆಯರ ಶಾಪ ಅವರಿಗೆ ತಟ್ಟುತ್ತದೆ. ಅವರ ಮಕ್ಕಳು ದಾರಿ ತಪ್ಪಿದ್ದಾರೆ. ತಮಗೆ ಬೇಕಾದ ಹೆಣ್ಣು ಮಕ್ಕಳಿಗೆ ಮಾತ್ರ ಅಧಿಕಾರ ನೀಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Also read: ಲೋಕಸಭಾ ಚುನಾವಣೆ 2024: ಹಲವು ಗಣ್ಯರಿಂದ ಮತದಾನ

22ರಿಂದ ಚುನಾವಣೆಯ ಕುಸ್ತಿ ಅಖಡಾ ರೆಡಿಯಾಗುತ್ತದೆ. ನಮ್ಮ ಫೈಲ್ವಾನರು ಕೂಡ ಕುಸ್ತಿ ಆಡಲು ರೆಡಿಯಾಗಿದ್ದಾರೆ. ಅದರಲ್ಲಿ ಧರ್ಮ ಗೆಲ್ಲುತ್ತೋ, ಅಧರ್ಮ ಗೆಲ್ಲುತ್ತೋ, ಹಣ ಗೆಲ್ಲತ್ತೋ, ಸಿದ್ಧಾಂತ ಗೆಲ್ಲತ್ತೋ, ವೈಚಾರಿಕ ನಿಲುವುಗಳು ಗೆಲ್ಲತ್ತದೆಯೋ, ಕುಟುಂಬ ರಾಜಕಾರಣ ಗೆಲ್ಲುತ್ತದೆಯೋ ನೋಡಿ ಬಿಡೋಣ, ನಾನು ಅಖಾಡಕ್ಕೆ ರೆಡಿಯಾಗಿ ಶೆಡ್ಡ್ ಹೊಡೆದು ನಿಂತಿದ್ದೇನೆ. ಚಿಹ್ನೆ ಬಂದ ಮೇಲೆ ಮತ್ತಷ್ಟು ಪ್ರಚಾರ ಹೆಚ್ಚಾಗಲಿದೆ ಇಡೀ ಹಿಂದೂ ಭಕ್ತರೇ ನನ್ನೊಂದಿಗಿದ್ದಾರೆ. ನನ್ನ ಗೆಲುವು ಶತಸಿದ್ಧ ಎಂದರು.

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳ ಹತ್ಯೆಯಾಗಿದೆ. ಹಿಂದೂಗಳ ಮೇಲೆ ಹತ್ಯೆ ಇನ್ನು ನಿಂತಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ಗೃಹಮಂತ್ರಿ ಮತ್ತು ಮುಖ್ಯಮಂತ್ರಿಗಳು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಮುಸ್ಲಾಂನ ಗುಂಡಾಗಳು ಮತ್ತೆ ಬಾಲ ಬಿಚ್ಚ ತೊಡಗಿದ್ದಾರೆ. ಈ ಸರ್ಕಾರಕ್ಕೆ ನಾಚಿಕೆಯಾಗಬೇಕು.
ಕೆ.ಎಸ್.ಈಶ್ವರಪ್ಪ, ಮಾಜಿ ಡಿಸಿಎಂ  

ನೆನ್ನೆ ಬಿ.ವೈ.ರಾಘವೇಂದ್ರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮೂರುವರೆ ಮುಖ್ಯಮಂತ್ರಿಗಳು ಹಾಜರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಗೃಹಮಂತ್ರಿಯಾಗಿದ್ದ ಅರಗಜ್ಞಾನೇಂದ್ರ. ಈ ಅರಗಜ್ಞಾನೇಂದ್ರ ಅರ್ಧ ಮುಖ್ಯಮಂತ್ರಿ ಹಾಗಾಗಿ ಮೂರುವರೆ ಮುಖ್ಯಮಂತ್ರಿಗಳು ಬಂದಿದ್ದರು ಅದನ್ನೇ ದೊಡ್ಡ ಶೋ ಎಂದು ಬಿಂಬಿಸಿದ್ದಾರೆ. ನನ್ನಜೊತೆಗೆ 35 ಸಾವಿರ ಜನ ಶಕ್ತಿ ಹಿಂದು ಶಕ್ತಿಯ ಬೆಂಬಲವಿತ್ತು ಎಂದು ತಿಳಿಸಿದರು.

ಇನ್ನೂ ಆರಗಜ್ಞಾನೇಂದ್ರರ ವಿರುದ್ಧವು ಹರಿಹಾಯ್ದ ಅವರು, ಅವರಿಗೆ ಜ್ಞಾನವೇ ಇಲ್ಲ. ಹುಚ್ಚು ಹುಚ್ಚಾಗಿ ಮಾತನಾಡುತ್ತಾರೆ. ತೀರ್ಥಹಳ್ಳಿಯಲ್ಲಿ ಭಜರಂಗ ದಳದ ಕಾರ್ಯಕರ್ತರು ಸೇರಿದಂತೆ ಅವರಿಗೆ ಬೆಂಬಲ ನೀಡಿದ ಬಿಜೆಪಿಗರು ಈಗ ನನಗೆ ಬೆಂಬಲ ನೀಡುವುದನ್ನು ನೋಡಿ ಅವರಿಗೆ ಸಹಿಸಲಾಗುತ್ತಿಲ್ಲ. ನನಗೆ ಬೆಂಬಲ ನೀಡಿದವರ ಮನೆಗಳಿಗೆ ಹೋಗಿ ನೀವು ಈಶ್ವರಪ್ಪನವರ ಜೊತೆ ಹೋಗಕೂಡದು ಎಂದು ಹೇಳುತ್ತಾರೆ. ನನ್ನ ಸೋಲನ್ನು ಕಣ್ಣಿನಿಂದ ನೋಡಲು ಆಗುವುದಿಲ್ಲ ಎಂದು ಅವರು ಹೇಳುತ್ತಾರೆ. ನೋಡುವುದು ಬೇಡ ನಾನು ಗೆದ್ದೆ ಗೆಲ್ಲುತ್ತೇನೆ, ಅವರು ಕೂಪಮಂಡೂಕ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆ. ತೀರ್ಥಹಳ್ಳಿಯಲ್ಲಿ ನನಗೆ ಬೆಂಬಲ ಕೊಡುವವರೇ ಹೆಚ್ಚಿದ್ದಾರೆ ಎಂದರು.

ಅರಗಜ್ಞಾನೇಂದ್ರ ಗೃಹಮಂತ್ರಿಯಾಗಿದ್ದಾಗ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿದ್ದ ಕೇಸ್‍ಗಳನ್ನು ಹಾಗೂ ಗೋ ರಕ್ಷಕರ ಮೇಲಿದ್ದ ಕೇಸ್‍ಗಳನ್ನು ಏಕೆ ವಾಪಾಸ್ಸು ಪಡೆಯಲಿಲ್ಲ. ಇವರು ಹಿಂದೂ ಪರವೇ ಎಂದು ಪ್ರಶ್ನೆ ಮಾಡಿದರು. ತೀರ್ಥಹಳ್ಳಿಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆರಗಜ್ಞಾನೇಂದ್ರ ನಿಂತರೆ ಅವರನ್ನು ಗೆಲ್ಲಿಸಲು ನಾನೇ ಪ್ರಚಾರ ಮಾಡಬೇಕಾಗುತ್ತದೆ. ಮಾಡುತ್ತೇನೆ ಕೂಡ ನಾನು ಇನ್ನೂ ಬಿಜೆಪಿಯನ್ನು ಬಿಟ್ಟಿಲ್ಲ ನಾನು ಗೆದ್ದು ಮತ್ತೆ ಬಿಜೆಪಿಯನ್ನೇ ಸೇರುತ್ತೇನೆ ಎಂದು ಪುನರುಚ್ಛರಿಸಿದರು.
ಕಾಂಗ್ರೆಸ್ಸ್, ಜೆಡಿಎಸ್ ಪಕ್ಷದ ಅನೇಕರು ಈಗಾಗಲೇ ನನಗೆ ಬೆಂಬಲ ನೀಡಿದ್ದಾರೆ. ಬಿಜೆಪಿಯ ಶೇ. 60ರಷ್ಟು ಕಾರ್ಯಕರ್ತರು ನನೊಂದಿಗಿದ್ದಾರೆ. ಶಿಕಾರಿಪುರದಲ್ಲಿಯೇ ನನಗೆ ಅತಿ ಹೆಚ್ಚು ಬೆಂಬಲ ಸಿಗಲಿದೆ. ಅಲ್ಲಿ ಹಲವು ಸಭೆಗಳನ್ನು ನಾನು ಮಾಡುತ್ತೇನೆ. ತೀರ್ಥಹಳ್ಳಿ, ಭದ್ರಾವತಿ ಸೇರಿದಂತೆ ಎಲ್ಲಾ ಕಡೆ ನನಗೆ ಭಾರಿ ಬೆಂಬಲವಿದೆ. ಅರಗಜ್ಞಾನೇಂದ್ರ ಅವರ ಭ್ರಮೆ ಕೊನೆಯಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಈ.ವಿಶ್ವಾಸ್, ಸುವರ್ಣ ಶಂಕರ್, ಹೇಮಾ, ಶಿವಾಜಿ, ಮಹೇಶ್ ಮೂರ್ತಿ, ಬಾಲು, ದೇವರಾಜ್, ಮಹಾಲಿಂಗಶಾಸ್ತ್ರಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

 

Tags: Araga GnanendraB S YadiyurappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಆರಗ ಜ್ಞಾನೇಂದ್ರಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

ಲೋಕಸಭಾ ಚುನಾವಣೆ 2024: ಹಲವು ಗಣ್ಯರಿಂದ ಮತದಾನ

Next Post

ಚೊಂಬು ಚಿತ್ರದ ಜಾಹಿರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಸುರ್ಜೇವಾಲಾ ಟೀಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೊಂಬು ಚಿತ್ರದ ಜಾಹಿರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಸುರ್ಜೇವಾಲಾ ಟೀಕೆ

ಚೊಂಬು ಚಿತ್ರದ ಜಾಹಿರಾತು ಪ್ರದರ್ಶಿಸಿ ಬಿಜೆಪಿ ವಿರುದ್ಧ ಸುರ್ಜೇವಾಲಾ ಟೀಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

February 27, 2026
ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

February 27, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL