No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಅಭಿವೃದ್ಧಿಯಲ್ಲಿ ನನ್ನ ಪಾಲೂ ಇದೆ: ಎಚ್.ಡಿ. ಕುಮಾರಸ್ವಾಮಿ

kalpa News by kalpa News
May 4, 2023
in ಶಿವಮೊಗ್ಗ
0
ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಬಿಜೆಪಿಯವರಿಗೆ ಅಧಿಕಾರ ಸಿಕ್ಕಿದ್ದೂ, ಶಿವಮೊಗ್ಗದಲ್ಲಿ ಅಭಿವೃದ್ಧಿಗೆ ನಾಂದಿ ಹಾಕಿದ್ದು ಜೆಡಿಎಸ್-ಬಿಜೆಪಿ ಮೈತ್ರಿ ಸರ್ಕಾರದಲ್ಲಿ. ಹೀಗಾಗಿ ಶಿವಮೊಗ್ಗದ ಅಭಿವೃದ್ಧಿಯಲ್ಲಿ ನನ್ನ ಪಾಲೂ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ HDKumaraswamy ಹೇಳಿದರು.

ಪಕ್ಷದ ಅಭ್ಯರ್ಥಿಗಳ ಪರ ಬುಧವಾರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಅಮಾಯಕರ ಜೊತೆ ರಕ್ತದ ಓಕುಳಿ ಆಡುತ್ತಾ ಬಂದಿದ್ದಾರೆ.‌ ಯಾವುದೇ ಹಬ್ಬ ಬಂದರು ರಕ್ತದೋಕುಳಿ ಆಗಬೇಕು. ಅದರ ಮೇಲೆ ಅಧಿಕಾರ ಕಟ್ಟೋರು ಬಿಜೆಪಿಗರು. ಬಡವರು ಅಮಾಯಕರ ಜೀವದ ಜೊತೆ ಚೆಲ್ಲಾಟವಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯ ಎರಡು ಕಾರ್ಖಾನೆಗಳು ಮುಚ್ಚಿ ಹೋಯಿತು. ನಮಗೆ ಬೆಂಬಲ ಕೊಟ್ಟರೆ ಕಾರ್ಖಾನೆ ಮುನ್ನಡೆಸಲು ಪ್ರಯತ್ನಿಸುತ್ತೇವೆ. ಜೆಡಿಎಸ್ ಗೆ ಅಧಿಕಾರ ಕೊಟ್ಟರೆ ಮುಳುಗಿಸಿದ ಎಪಿಎಂ, ವಿಐಎಸ್ಎಲ್ ಕಾರ್ಖಾನೆಯನ್ನು ಪುನರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.
ಕಾಂಗ್ರೆಸ್ ಶಾಸಕರ ಕ್ಷೇತ್ರದಲ್ಲಿ ಅಭಿವೃದ್ಧಿ ಆಗಿದ್ದರೆ ನನ್ನ ಅವಧಿಯಲ್ಲಿ. ನನ್ನ ಅವಧಿಯಲ್ಲಿ ನಾನು ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40% ಕಮೀಷನ್ ಹೊಡೆದಿದ್ದರೆ 10 ಸಾವಿರ ಕೋಟಿ ಹಣ ಹೊಡೆಯಬಹುದಿತ್ತು. ನನ್ನ ಅವಧಿಯಲ್ಲಿ ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ರೈತರ ಸಾಲ ಮನ್ನಾ ಮಾಡಿದ್ದೇನೆ. ಸಾರಾಯಿ ನಿಷೇಧ ಮಾಡಿದ್ದೇನೆ. ಈಗ ಏನು ನಡೆಯುತ್ತಿದೆ ? ಕ್ರಿಕೆಟ್ ಬೆಟ್ಟಿಂಗ್ ದಂಧೆ, ಆನ್ ಲೈನ್ ರಮ್ಮಿ ದಂಧೆ ನಡೆಯುತ್ತಿದೆ. ಈ ದಂಧೆಗಳಿಂದ ಕುಟುಂಬಗಳು‌ ಬೀದಿ ಪಾಲಾಗುತ್ತಿವೆ. ಇದರ ವಿರುದ್ದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಬಂದರೆ ರೈತರ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡುತ್ತೇನೆ. ಎನ್ ಪಿಎಸ್ ಜಾರಿಗೆ ಬರಲು ಇದೇ ಎರಡು ರಾಷ್ಟ್ರೀಯ ‌ಪಕ್ಷಗಳು ಕಾರಣ.ನನ್ನ ಸರ್ಕಾರ ಇನ್ನೊಂದು 6 ತಿಂಗಳು ಇದ್ದರೆ ಎನ್ ಪಿಎಸ್ ತೆಗೆದು ಒಪಿಎಸ್ ಮಾಡ್ತಿದ್ದೆ. ನನ್ನ ಬಿಟ್ಟು ಇವರು ಯಾರು ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ದೇವರ ಆಶೀರ್ವಾದ ಜೆಡಿಎಸ್ ಪರವಾಗಿದೆ. ಮಾಧ್ಯಮಗಳ ಸರ್ವೇ ರಿಪೋರ್ಟ್ ನಂಬಬೇಡಿ. ಈ ಬಾರಿ ಜೆಡಿಎಸ್ 30-35 ಬರದೇ ಇದ್ದರೆ ಆವಾಗ ಪ್ರಶ್ನೆ ಮಾಡಿ. ಮತ ಎಲ್ಲಿಗೋ ಕೊಟ್ಟು ನನ್ನ ಬಳಿ ಒಪಿಎಸ್ ಮಾಡಿ ಅಂತಾ ಬರಬೇಡಿ ಎಂದರು
ಔರಾದ್ಕರ್ ವರದಿ ಜಾರಿಗೆ ತರಬೇಕು ಅಂತಿದ್ದೆ. ಅಷ್ಟರಲ್ಲಿ ನಮ್ಮ ಸರ್ಕಾರ ಹೋಯ್ತು. ಇವತ್ತು ಸೊರಬದಲ್ಲಿ ಹೆಚ್ವು ಜನ ಸೇರಿದ್ದರು. ಆ ಜ‌ನ ನೋಡಿದ್ದರೆ ನಾನೇ ಎಲ್ಲೋ ಹಿಂದೆ ಸರಿದೆ ಅನ್ಸುತ್ತೆ. ನಾನು ಇನ್ನು ಸ್ವಲ್ಪ ಸ್ಪೀಡ್ ಮಾಡಿದ್ದರೆ ಸೊರಬ ಗೆಲ್ಲಬಹುದಿತ್ತು. ಭದ್ರಾವತಿ ಹಾಗೂ ಶಿವಮೊಗ್ಗ ಗ್ರಾಮಾಂತರದಲ್ಲಿ ನಾವು ಗೆಲ್ಲುತ್ತೇವೆ. ನಮ್ಮ ಅಭ್ಯರ್ಥಿಗಳ ಪರ ನಿಮ್ಮ ಆಶೀರ್ವಾದ ಇರಲಿ. ಶಿವಮೊಗ್ಗ ಜಿಲ್ಲೆ ಜನ ಬಿಜೆಪಿಯನ್ನು ಸಂಪೂರ್ಣವಾಗಿ‌ ಹೊರಗೆ ಹಾಕಬೇಕು ಎಂದರು.

Also read: ಒಳ ಮೀಸಲಾತಿ ಜಾರಿ ಹಿನ್ನೆಲೆ: ಮಾದಿಗ ಸಮುದಾಯದವರು ಬಿಜೆಪಿಯನ್ನು ಬೆಂಬಲಿಸಿ

ಕಾಂಗ್ರೆಸ್ ನವರು ಕೈಯಲ್ಲಿ ಕೊರೆಯುವವರು. ಬಿಜೆಪಿಯವರು ಜೆಸಿಬಿ, ಹಿಟಾಚಿ ಹಾಕಿಕೊಂಡು ಕೊರೆಯುತ್ತಿದ್ದಾರೆ. ಸಾಕು ಇನ್ನೆಷ್ಟು ಕೊರೆಯಲು ಬಿಡ್ತೀರಾ ಅವರಿಗೆ. ಕಳೆದ 10 ವರ್ಷದಲ್ಲಿ ಬಿಜೆಪಿಯವರ ಜೀವನ ಶೈಲಿ‌ ಹೇಗಿದೆ ಗಮನಿಸಿ. ನಾನು ಅವರ ರೀತಿ ದೋಚಿದ್ದರೆ ರಾಜಕಾರಣ ಮಾಡಬಹುದಿತ್ತು. ನಾನು ಯಾವುದೇ ಶಿಕ್ಷಣ ಸಂಸ್ಥೆ, ಕಟ್ಟಡ ಆಸ್ತಿ ಮಾಡಿಲ್ಲ. ನನ್ನ ಮನೆ ಬಳಿ ರಾಜ್ಯದ ಹಲವೆಡೆಗಳಿಂದ ಸಹಾಯ ಕೇಳಿಕೊಂಡು ಬರ್ತಾರೆ. ಅವರಿಗೆಲ್ಲಾ ನಾನು ಎಲ್ಲಿಂದ ಸಹಾಯ ಮಾಡೋದು. ಜೆಡಿಎಸ್ ಗೆ 5 ವರ್ಷದ ಸ್ಪಷ್ಟ ಬಹುಮತದ ಸರ್ಕಾರ ಕೊಡಿ. ರಾಜ್ಯದ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ಮಾಡುತ್ತೇನೆ ಎಂದು ಆಶ್ವಾಸನೆ ನೀಡಿದರು.
ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ದೇವೇಗೌಡರು. HDDevegowda ಬೇರೆ ಯಾವ ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಇಲ್ಲ. ಮುಸ್ಲಿಂಮರ ಶೈಕ್ಷಣಿಕ, ಆರ್ಥಿಕ ದೃಷ್ಟಿಯಿಂದ ಮೀಸಲಾತಿ ಕೊಟ್ಟಿದ್ದು. ಮುಸ್ಲಿಂರು ಭಾರತೀಯರೆ. ಅವರೇನು ಹೊರಗಿನವರಲ್ಲ. ಮುಸ್ಲಿಂ ರಿಗೆ ನೀಡಲಾಗಿರುವ ಮೀಸಲಾತಿ ತೆಗೆಯಲು ಯಾರಿಂದಲೂ ಸಾಧ್ಯವಿಲ್ಲ. ಮುಸ್ಲಿಂರು ಹೆದರುವ ಅವಶ್ಯಕತೆ ಇಲ್ಲ.‌ ಓಟು ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಮುಸ್ಲಿಂರ ಮೀಸಲಾತಿ ತೆಗೆದು ಲಿಂಗಾಯತರು, ಒಕ್ಕಲಿಗರಿಗೆ ಕೊಟ್ಟಿದ್ದಾರೆ ಎಂದರು.

2004 ರಲ್ಲಿ ಅತಂತ್ರ ಸರ್ಕಾರ, ಸಮ್ಮಿಶ್ರ ಸರ್ಕಾರ ಇತ್ತು. ಬಿಜೆಪಿ ಪಕ್ಷದ ನಡವಳಿಕೆಯಿಂದ ಸಾಕಷ್ಡು ನೊಂದಿದ್ದೇನೆ. ಬಿಜೆಪಿ ಪಕ್ಷ ಬಿಡಲು ಸಿದ್ದನಿದ್ದೇನೆ. ನನಗೆ ಪರಿಷತ್ ಸ್ಥಾನ ನೀಡಿ ಮಂತ್ರಿ ಸ್ಥಾನ ನೀಡಿದ್ರೆ ನಿಮ್ಮ ಪಕ್ಷಕ್ಕೆ ಬರಲು ಸಿದ್ದನಿದ್ದೇನೆ ಎಂದು ಯಡಿಯೂರಪ್ಪ ತಿಳಿಸಿದ್ದರು. ಅವರ ಆಪ್ತ ಸಹಾಯಕನ ಮೂಲಕ ನನಗೆ ಒಂದು ಪತ್ರ ಕಳುಹಿಸಿದ್ದರು. ನಾನು ಯಡಿಯೂರಪ್ಪ ಅವರಿಗಿಂತ ಚಿಕ್ಕವನಾಗಿದ್ದರೂ ಅವರಿಗೆ ಸಲಹೆ ಕೊಟ್ಟಿದ್ದೆ. ನೀವು ಬಿಜೆಪಿಯಲ್ಲಿ ಹಿರಿಯರಿದ್ದೀರಾ. ನೀವು ಒಬ್ಬರು ಪಕ್ಷ ಬಿಡುವುದಕ್ಕಿಂತ ಒಂದು 40-50 ಶಾಸಕರ ಗುಂಪು ಮಾಡಿಕೊಂಡರೆ ನಿಮಗೆ ಶಕ್ತಿ ಸಿಗುತ್ತದೆ ಅಂತಾ ತಿಳಿಸಿದ್ದೆ. ಈ ಬಗ್ಗೆ ಒಂದು ಸಭೆ ಸಹ ಮಾಡಿದ್ದೇವು.
ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ 

ಮುಸ್ಲಿಂರ ಪರವಾಗಿ ಕೆಲಸ ಮಾಡಿದ್ದು ಜೆಡಿಎಸ್. ಬಿಜೆಪಿ ಜೊತೆ ಸರ್ಕಾರ ಮಾಡಿದ್ದೇವು. ಆದರೆ ಮುಸ್ಲಿಂ ಸಮಾಜಕ್ಕೆ ಧಕ್ಕೆಯಾಗಲು ಅವಕಾಶ ಕೊಟ್ಟಿಲ್ಲ. ಮಮತಾ ಬ್ಯಾನರ್ಜಿ ಬಿಜೆಪಿ ಜೊತೆ ಸರ್ಕಾರ ಮಾಡಿರಲಿಲ್ಲವಾ ? ತಮಿಳುನಾಡಿನವರು ಬಿಜೆಪಿ ‌ಜೊತೆ ಸರ್ಕಾರ ರಚನೆ ಮಾಡಿರಲಿಲ್ಲವಾ ? ನಾನು ಕಾಂಗ್ರೆಸ್, ಬಿಜೆಪಿ ಯಾವುದೇ ಪಕ್ಷದ ಬಿ ಟಿಂ ಅಲ್ಲ. ನಮ್ಮದು ರೈತರು, ಬಡವರು, ಶ್ರಮಿಕರ ಪರವಾದ ಪಕ್ಷ ಎಂದರು.

http://kalpa.news/wp-content/uploads/2023/04/Christ-King-PU-College-Video-1.mp4

ಕಾಂಗ್ರೆಸ್ ಜೊತೆ 14 ತಿಂಗಳ ಅಧಿಕಾರ ಮಾಡುವಾಗ ಪಟ್ಟ ಸಂಕಟ ನನಗೇ ಗೊತ್ತು. ನಾನು ಹಣ ಲೂಟಿ ಹೊಡೆಯುವ ಕೆಲಸ ಮಾಡಿಲ್ಲ. ಎರಡೂ ಬಾರಿ ಅಧಿಕಾರದಲ್ಲಿದ್ದಾಗ ಪ್ರಾಮಾಣಿಕನಾಗಿದ್ದೆ. ಪ್ರಧಾನಿ ನರೇಂದ್ರ ಮೋದಿ ತರಹ 25 ವರ್ಷ ಅಧಿಕಾರ ಕೇಳುವುದಿಲ್ಲ.‌ ಈಗ ಅವರು ರಕ್ತದ ಕಾಲ ಕೊಡುತ್ತಿದ್ದಾರೆ. 2047 ರಲ್ಲಿ ಅಮೃತ ಕಾಲ ಕೊಡುತ್ತಾರಂತೆ.‌ 5 ವರ್ಷ ಅಧಿಕಾರ ಕೊಟ್ಟು ನಮ್ಮನ್ನು ಪರೀಕ್ಷೆ ಮಾಡಿ. ಹೀಗಾಗಿ ಸ್ಪಷ್ಟ ಬಹುಮತ ಕೇಳುತ್ತಿದ್ದೇನೆ ಎಂದರು.

ಶಿವಮೊಗ್ಗದಲ್ಲಿ ಆಯನೂರು ಮಂಜುನಾಥ್ ಅವರನ್ನು ಆಯ್ಕೆ ಮಾಡುವುದರಿಂದ ಸರ್ವ ಜನಾಂಗದ ಶಾಂತಿಯ ತೋಟ ಆಗಲಿದೆ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯ ಇಬ್ಬರು ಮಂತ್ರಿ ಆಗಲಿದ್ದಾರೆ. ಶಿವಮೊಗ್ಗದ ಜನತೆಗೆ ಭರವಸೆ ನೀಡಿದರು.
ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ, ಶಿವಮೊಗ್ಗ ತನ್ನ ಹೆಸರು ಕಳೆದುಕೊಂಡಿದೆ. ಸಣ್ಣಪುಟ್ಟ ವಿಷಯಗಳಿಗೂ ಕೋಮುಗಲಭೆ ನಡೆಯುತ್ತಿದೆ. ದಿನದ ಆದಾಯದಲ್ಲಿ ಬದುಕುವವರ ಸ್ಥಿತಿ ನೋಡಿ ಸಂಕಟವಾದರೆ, ಬಿಜೆಪಿ ಮುಖಂಡರ ಮಾತಿನಿಂದ ನಗರದಲ್ಲಿ ಅಶಾಂತಿ ವಾತಾವರಣ ಉಂಟಾಗುತ್ತಿತ್ತು. ಇದೇ ಈಶ್ವರಪ್ಪ ರಾತ್ರಿ ಹೊತ್ತು ಬಿರಿಯಾನಿ ತಿನ್ನೋದು, ಬೆಳಿಗ್ಗೆ ಎದ್ದು ಅದೇ ಈಶ್ವರಪ್ಪ ಹಲಾಲ್, ಜಟ್ಕಾ ಅಂತಿದ್ರು. ಅಜಾನ್ ಬಗ್ಗೆಯೂ ಅವಹೇಳನ ಮಾಡಿದರು. ಪೊಲೀಸ್ ಅಧಿಕಾರಿಗಳ ಸಂಯಮದಿಂದ ಕೆಲಸ ಮಾಡಿದ್ದಕ್ಕೆ ಶಿವಮೊಗ್ಗ ಶಾಂತವಾಗಿದೆ ಎಂದರು.

ಜೆಡಿಎಸ್‌ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಶಾರದಾ ಪೂರಾನಾಯ್ಕ, ಭದ್ರಾವತಿ ಅಭ್ಯರ್ಥಿ ಶಾರದಾ ಅಪ್ಪಾಜಿ, ತೀರ್ಥಹಳ್ಳಿ ಅಭ್ಯರ್ಥಿ ರಾಜಾರಾಂ ಯಡೂರು, ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಇತರರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HDDevegowdaHDKumaraswamyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಎಚ್.ಡಿ. ಕುಮಾರಸ್ವಾಮಿದೇವೇಗೌಡಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಳ ಮೀಸಲಾತಿ ಜಾರಿ ಹಿನ್ನೆಲೆ: ಮಾದಿಗ ಸಮುದಾಯದವರು ಬಿಜೆಪಿಯನ್ನು ಬೆಂಬಲಿಸಿ

Next Post

ಕಾಂಗ್ರೆಸ್ ಪಕ್ಷ ಎಸ್‌ಡಿಪಿಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

kalpa News

kalpa News

Next Post
ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಪಕ್ಷ ಎಸ್‌ಡಿಪಿಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL