ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುರುಬ ಸಮಾಜವನ್ನು ಎಸ್ಟಿ ವರ್ಗಕ್ಕೆ ಸೇರಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರು ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕೆಂದು ಹೇಳುತ್ತಿದ್ದಾರೆ ವಿನಹ ಯಾರದೋ ಹೆದರಿಕೆಗೆ ಅದನ್ನು ಅವರು ಸ್ಪಷ್ಟಪಡಿಸುತ್ತಿಲ್ಲ. ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಉಗ್ರಪ್ಪ ಮತ್ತು ಮುಖ್ಯಮಂತ್ರಿಗಳ ನಡುವೆ ಒಂದು ರೀತಿಯ ವಾಕ್ ಸಮರವೇ ಆಗಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಉಗ್ರಪ್ಪ ಅವರಿಗೆ ಸ್ಪಷ್ಟವಾಗಿ ಹೇಳುವುದನ್ನು ಬಿಟ್ಟು ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸುವ ವಿಚಾರದ ಬಗ್ಗೆ ನಾನು ಹೋರಾಟ ಮಾಡಿದ್ದಲ್ಲ, ಅದು ಕೆ.ಎಸ್. ಈಶ್ವರಪ್ಪ ಅವರು ಮಾಡಿದ್ದರು ಎಂದಿದ್ದಾರೆ ಎಂದರು.

ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕೆಂಬುದು ಈಗಲೂ ನನ್ನ ಅಭಿಪ್ರಾಯವಾಗಿದೆ. ಆದರೆ ಇದರಿಂದ ಬೇರೆ ಯಾವುದೇ ಸಮಾಜದವರಿಗೆ ತೊಂದರೆಯಾಗಬಾರದು. ಬೇಕಾದರೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು. ಮುಖ್ಯವಾಗಿ ವಾಲ್ಮೀಕಿ ಸಮಾಜದವರಿಗೆ ತೊಂದರೆಯಾಗಬಾರದು. ಎಲ್ಲಾ ಹಿಂದುಳಿದ ಜಾತಿಗಳಿಗೂ ನೋವಾಗದಂತೆ ಮೀಸಲಾತಿಯನ್ನು ಕಲ್ಪಿಸಬೇಕಾದುದು ರಾಜ್ಯ ಸರ್ಕಾರದ ಹೊಣೆ ಎಂದರು.

ದೇಣಿಗೆ ನೀಡುವವರು, 98861773111, 9448131575, 9964586181ನ್ನು ಸಂಪರ್ಕಿಸಬಹುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಈ .ವಿಶ್ವಾಸ್, ಮಹಾಲಿಂಗಯ್ಯ ಶಾಸ್ತ್ರಿ, ಉಮೇಶ್ ಆರಾಧ್ಯಾ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      
 
	    	





 Loading ...
 Loading ... 
							



 
                
Discussion about this post