ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಜಯಗಳಿಸುವ ವಿಶ್ವಾಸವಿದೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಕಾರಣಕರ್ತರಾದ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಅನೇಕ ವಿಶೇಷತೆಗಳಿಂದ ಕೂಡಿತ್ತು. ವಿಕಸಿತ ಭಾರತಕ್ಕೋಸ್ಕರ ಮತದಾನ ಮಾಡಿದ ಮತದಾರರಿಗೆ ಧನ್ಯಾದಗಳನ್ನು ಸಲ್ಲಿಸುತ್ತೇನೆ ಎಂದರು.

ಭಾರತದ ಏಳಿಗೆಗೆ ಶ್ರಮ ವಹಿಸಿದ ಸಂಘಟನೆ ಕಾರ್ಯಕರ್ತರಿಗೆ ಅಭಿನಂದನೆಗಳು. 1952ರಿಂದ 2024ರವರೆಗೆ ಒಟ್ಟು 18 ಬಾರಿ ಲೋಕಸಭೆ ಚುನಾವಣೆಗಳು ನಡೆದಿದ್ದು 1952ರಲ್ಲಿ ಶೇ. 75.14 ರಷ್ಟು ಮತದಾನವಾಗಿದ್ದನ್ನು ಬಿಟ್ಟರೆ 2024ರ ಚುನಾವಣೆಯಲ್ಲಿ ಶೇ. 78.31ರಷ್ಟು ಮತದಾನವಾಗಿರುವುದು ದಾಖಲೆಯಾಗಿದೆ ಎಂದರು.

ಚುನಾವಣಾ ಪ್ರಚಾರಕ್ಕಾಗಿ ಬಿಜೆಪಿ ವಿವಿಧ ಮೋರ್ಚಾಗಳು, ಮಹಾ ಶಕ್ತಿ ಕೇಂದ್ರ, ರಾಷ್ಟ್ರೀಯ ಹಾಗೂ ರಾಜ್ಯ ನಾಯಕರ ಸಭೆಗಳನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಸಭೆಗಳು ನಡೆದಿವೆ. ಪರಿವಾರ ಶಕ್ತಿ ತುಂಬಿದೆ. ಎಲ್ಲಿಯೂ ವ್ಯತ್ಯಾಸವಾಗದಂತೆ ನೋಡಿಕೊಳ್ಳಲಾಗಿದೆ. ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಹಾಗೂ ಮೋದಿಜೀಯವರ ಗ್ಯಾರಂಟಿ, ಹಿಂದುತ್ವ, ದೇಶದ ರಕ್ಷಣೆ ನೋಡಿ ಮತದಾರರು ಪಕ್ಷವನ್ನು ಬೆಂಬಲಿಸಿದ್ದಾರೆ ಎಂದರು.

Also read: ಪೆನ್ ಡ್ರೈವ್ ಹಗರಣ ಕಾಂಗ್ರೆಸ್ ನವರ ಇನ್ನೊಂದು ಮುಖ: ಬಂಡೆಪ್ಪ ಖಾಶೆಂಪುರ್
ಒಟ್ಟಾರೆಯಾಗಿ ನನಗೆ ಬಂದ ಮಾಹಿತಿ ಪ್ರಕಾರ ಕಳೆದ ಬಾರಿಗಿಂತ ಹೆಚ್ಚಿನ ಮತದ ಅಂತರದಿಂದ ಶಿವಮೊಗ್ಗದಲ್ಲಿ ಗೆಲ್ಲತ್ತೇನೆ. ರಾಜ್ಯದಲ್ಲಿ ಕೂಡ 25ಕ್ಕೂ ಹೆಚ್ಚಿನ ಸ್ಥಾನ ಬಿಜೆಪಿ ಮೈತ್ರಿಕೂಟಕ್ಕೆ ಬರಲಿದೆ. ಈ ಚುನಾವಣೆಯಲ್ಲಿ ದೇಶ ವಿದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಸಹಕಾರ ನೀಡಿದ್ದಾರೆ. ಅವರಿಗೂ ಧನ್ಯವಾದ ಸಮರ್ಪಿಸುತ್ತೇನೆ. ಪ್ರಧಾನಿ ಮೋದಿಯವರಿಂದ ಪ್ರಾರಂಭವಾದ ಚುನಾವಣಾ ಪ್ರಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ನಡ್ಡಜೀ, ಅಣ್ಣಾಮಲೈ, ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಬಿ.ಎಲ್.ಸಂತೋಷ್, ಬಿ.ವೈ.ವಿಜಯೇಂದ್ರ, ನಟಿ ತಾರಾ, ಶೃತಿ, ಲೋಕಸಭಾ ಉಸ್ತುವಾರಿಯಾಗಿ ರಘುಪತಿಭಟ್, ರಾಷ್ಟ್ರೀಯ ಕಾರ್ಯದರ್ಶಿ ರಾಧಮೋಹನ್ದಾಸ್ ಅಗರ್ವಾಲ್, ಮೈಸೂರು ಕ್ಷೇತ್ರದ ಶಾಸಕರು ಮತ್ತು ಚಾಮರಾಜ್ ನಗರದ ಅಭ್ಯರ್ಥಿ ಬಾಲರಾಜ್ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಪ್ರಚಾರ ಮಾಡಿದ್ದಾರೆ. ಎಲ್ಲರಿಗೂ ಧನ್ಯವಾದ ಸಮರ್ಪಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post