ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪಾಕ ಶಾಲೆಯೇ ಪಾಠ ಶಾಲೆ ಆಗಬೇಕು, ಆಗ ಮಾತ್ರ ತ್ಯಾಜ್ಯ ಕಡಿಮೆಯಾಗುತ್ತದೆ, ಅಲ್ಲದೇ ಪರಿಸರ ಸ್ವಚ್ಛವಾಗಿರಲು ಸಾಧ್ಯ ಎಂದು ಬೆಂಗಳೂರಿನ ಅದಮ್ಯ ಚೇತನ Adamya Chethana ಫೌಂಡೇಷನ್ನಿನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ Tejaswini Ananthakumar ಹೇಳಿದರು.
ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಬೆಳಗ್ಗೆ ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ನಡೆದ ಶ್ರಮದಿಂದ ಸಾರ್ಥಕತೆಯಡೆಗೆ ವಿಚಾರಗೋಷ್ಠಿಯಲ್ಲಿ ಪರಿಸರ ಪ್ರಜ್ಞೆಯೇ ಸಮಾಜ ಸೇವೆ ಕುರಿತು ಅವರು ಮಾತನಾಡಿದರು. ಪರಿಸರ ಪ್ರಜ್ಞೆ ಎಂಬುದು ಅಡುಗೆ ಮನೆಯಿಂದಲೇ ಆರಂಭವಾಗುವ ಜೊತೆಗೆ ಜಾಗೃತವಾಗಿದ್ದರೆ ಅದುವೇ ನಿಜವಾದ ಸಮಾಜ ಸೇವೆ ಎಂದರು.

Also read: ಅಮೃತಮಯಿ ಅಭಿನಂದನಾ ಕಾರ್ಯಕ್ರಮ | ಬಸವ ನಾಮಾಂಕಿತದ ಪ್ಲೇಟ್ ಬ್ಯಾಂಕ್ ಲೋಕಾರ್ಪಣೆ
ಪ್ಲಾಸ್ಟಿಕ್ ಬಳಸುವವರೆಗೂ ತ್ಯಾಜ್ಯ ನಿಲ್ಲದು, ಇಂತಹ ತಪ್ಪನ್ನು ಮಾಡಬಾರದು, ಎಲ್ಪಿಜಿ ಇಂಧನದ ಬಳಕೆ ಹೇಗೆ ಕಡಿಮೆ ಮಾಡಬೇಕು ಎಂಬ ಬಗ್ಗೆ ಯೋಚಿಸಬೇಕು,ಇಂಧನವೆಂದರೆ ಸಿಲಿಂಡರ್ ಮಾತ್ರ ಅಲ್ಲ, ಮರು ಉತ್ಪಾದನೆ ಇಂಧನಗಳ ಬಗ್ಗೆ, ಸೌರ ಶಕ್ತಿ ಬಳಕೆಯ ಬಗ್ಗೆ ಯುವ ಪೀಳಿಗೆಗೆ ಹೇಳುವ ಮೂಲಕ ಪರಿಸರ ಪ್ರಜ್ಞೆ ಮೂಡಿಸಬೇಕು. ಕಸದದಿಂದ ಇಂಧನ ತಯಾರಿಸುವ ಕುರಿತು ಹಾಗೂ ನೀರು, ಬಳಕೆ, ವಿದ್ಯುತ್ ಬಳಕೆ ಬಗ್ಗೆ, ಹಸಿರು ಹೊದಿಕೆ ಬೆಳೆಸುವುದು, ವಾಯು ಮಾಲಿನ್ಯದ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಹೊಣೆಗಾರಿಕೆಯಾಗಬೇಕು ಎಂದರು.
ಇದಕ್ಕೂ ಎಸ್. ರುದ್ರೇಗೌಡರ ಅಭಿನಂದನಾ ಸಮಿತಿಯ ಅಧ್ಯಕ್ಷರಾದ ಡಿ.ಜಿ. ಬೆನಕಪ್ಪ ಅವರು ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರನ್ನು ವೇದಿಕೆಗೆ ಬರಮಾಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post