No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
  • Advertise With Us
  • Grievances
  • About Us
  • Contact Us
Monday, August 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಿಂದು ಸಮಾಜ ಜಾಗೃತಿ ಆದರೆ ಈ ಸರ್ಕಾರ ಉಳಿಯಲ್ಲ: ಮಾಜಿ ಸಚಿವ ಈಶ್ವರಪ್ಪ ಕಿಡಿ

ಹಿಂದು ಯುವತಿ ಹತ್ಯೆ ಖಂಡಿಸಿ ಏ.22ರಂದು ರಾಷ್ಟ್ರಭಕ್ತರ ಬಳಗದಿಂದ ಪ್ರತಿಭಟನೆ

kalpa News by kalpa News
April 20, 2024
in ಶಿವಮೊಗ್ಗ
0
ಹಿಂದು ಸಮಾಜ ಜಾಗೃತಿ ಆದರೆ ಈ ಸರ್ಕಾರ ಉಳಿಯಲ್ಲ: ಮಾಜಿ ಸಚಿವ ಈಶ್ವರಪ್ಪ ಕಿಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾವೇನೇ ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್‌ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು ಅಟ್ಟಹಾಸ ಮೆರೆಯುತ್ತಿದ್ದಾರೆ. ಆದರೆ, ಹಿಂದು ಸಮಾಜ ಜಾಗೃತಿ ಆದರೆ ಈ ಸರ್ಕಾರ ಉಳಿಯಲ್ಲ ಎಂದು ಲೋಕಸಭಾ ಚುನವಣೆ ಸ್ವತಂತ್ರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ #K S Eshwarappa ಕಿಡಿಕಾರಿದರು.

ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಗಳ ರಕ್ಷಣೆ ಇಲ್ಲದಂತಾಗಿದೆ. ಹುಬ್ಬಳ್ಳಿಯಲ್ಲಿ ಹಿಂದು ಯುವತಿ ಮೇಲೆ ಮುಸ್ಲಿಂ ಗೂಂಡಾ ಚಾಕುನಿಂದ ಇರಿದು ಕೊಲೆ ಮಾಡಿದ್ದಾನೆ. ಈ ವಿಚಾರದಲ್ಲಿ ಕಾಂಗ್ರೆಸ್‌ ಸರ್ಕಾರ ನಿರ್ಲಕ್ಷ್ಯದ ಉತ್ತರ ನೀಡುತ್ತಿದೆ. ಕಾಲೇಜು ಆವರಣಕ್ಕೆ ಹೋಗಿ ಹಿಂದು ಯುವತಿಯನ್ನು ಕೊಲೆ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆ ಆಗಬೇಕು. ಸರ್ಕಾರ ಕೊಲೆಗಾರನಿಗೆ ಒಂದು ನೇಣಿಗೆ ಹಾಕಬೇಕು, ಇಲ್ಲ ಗುಂಡಿಟ್ಟು ಕೊಲ್ಲಬೇಕು. ಆಗ ಮಾಡಿದರೆ ಮಾತ್ರ ಹಿಂದುಗಳಿಗೆ ಸ್ವಲ್ಪ ಸಮಾಧಾನ ಆಗುತ್ತದೆ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಈ ರೀತಿಯ ದುರ್ಘಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಿಂದು ವಿರೋಧಿ ಎಂಬಂತೆ ವರ್ತಿಸುತ್ತಿದೆ. ಇಂತಹ ಸಂದರ್ಭದಲ್ಲಿ ಹಿಂದುಗಳ ಪರವಾಗಿ ನಿಂತು ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಈಗ ಸರ್ಕಾರ ನಿಮ್ಮ ರಕ್ಷಣೆಗೆ ಇದ್ದೇವೆ ಎಂದು ಧೈರ್ಯ ಕೊಡದಿದ್ದರೆ ಕಷ್ಟ ಆಗುತ್ತದೆ. ಹಿಂದು ಸಮಾಜದವರು ಹರಿಸುವ ಒಂದು ಹನಿ ರಕ್ತವೂ ನಿಮ್ಮ ಅಧಿಕಾರವನ್ನೇ ಕಿತ್ತುಕೊಳ್ಳಬಹುದು ಎಂದು ಖಡಕ್‌ ಎಚ್ಚರಿಕೆ ನೀಡಿದರು.

ನಾವು ರಾಜಕೀಯ ಮಾಡಲ್ಲ:
ಹುಬ್ಬಳ್ಳಿಯಲ ನೇಹ ಕೊಲೆಯಿಂದ ಯಾರಿಗೆ ಹಿನ್ನಡೆಯಾಗುತ್ತದೆ. ಯಾರಿಗೆ ಮುನ್ನಡೆಯಾಗುತ್ತದೆ ಎಂಬ ರಾಜಕಾರಣವನ್ನು ನಾನು ಮಾಡಲ್ಲ. ನಮ್ಮ ಹೆಣ್ಣು ಮಗಳ ಜೀವ ಹೋಗಿದೆ. ಇದರಲ್ಲಿ ರಾಜಕೀಯ ಮಾಡಲ್ಲ‌. ಕಾಂಗ್ರೆಸ್ ನವರು ಇದರ ಬಗ್ಗೆ ರಾಜಕೀಯ ಮಾಡುತ್ತಿದೆ‌. ಗೃಹ ಸಚಿವ ಜಿ.ಪರಮೇಶ್ವರ್‌ ಅವರು ತನಿಖೆಗೂ ಮುನ್ನವೇ ಲವ್‌ ಜಿಹಾದ್‌ ಅಲ್ಲ ಎಂದು ಹೇಳಿಕೆ ಕೊಟ್ಟಿದ್ದಾರೆ.
ಎಂ.ಬಿ.ಪಾಟೀಲ್ ಹುಬ್ಬಳ್ಳಿ ಪ್ರಕರಣವನ್ನ ಧರ್ಮದ ಲೇಪನ ಮಾಡಬೇಡಿ ಎಂದು ಹೇಳಿದ್ದಾರೆ. ಅವರ ಮಗಳಿಗೆ ಈ ರೀತಿ ಚಾಕು ಹಾಕಿದ್ದರೆ ಅವರು ಸುಮ್ಮನೆ ಇರ್ತಿದ್ದರಾ? ಇಬ್ಬರೂ ಬೇಜವಬ್ದಾರಿ ಸಚಿವರು ಎಂದು ಹರಿಹಾಯ್ದರು.

Also read: ಭಾರಿ ಮಳೆಗೆ ಮನೆ ಛಾವಣಿ ಕುಸಿತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಇನ್ನು ಕಾಂಗ್ರೆಸ್‌ ನಾಯಕ ಸುರ್ಜೆವಾಲ ಅವರು ಕೊಲೆಗಾರನ್ನು ತಕ್ಷಣವೇ ಬಂಧಿಸಿದ್ದೇವೆ ಎಂದಿದ್ದಾರೆ. ಇದು ಸಮಜಾಯಿಸಿ ಕೊಡುವ ರೀತಿಯೇ? ಅಕಸ್ಮಾತ್‌ ಇವರ ಮಗಳಿಗೆ ಈ ರೀತಿ ಆಗಿ ಕೇಂದ್ರ ಗೃಹ ಅಮಿತ್‌ ಶಾ ಅವರು 5 ನಿಮಿಷದಲ್ಲಿ ಕೊಲೆಗಾರರನ್ನು ಬಂಧಿಸಿದ್ದೇವೆ ಎಂದರೆ ಏನ್‌ ಅರ್ಥ. ನಾವು ಕೊಲೆಯಾಗದಂತೆ ನೋಡಿಕೊಳ್ಳಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

ಏ.22ಕ್ಕೆ ರಾಷ್ಟ್ರಭಕ್ತರ ಬಳಗದಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಹಿಂದು ಯುವತಿ ಕೊಲೆ ಸೇರಿದಂತೆ ಬೆಂಗಳೂರು, ಚನ್ನಗಿರಿ ಪ್ರಕರಣವನ್ನೂ ಖಂಡಿಸಿ ರಾಷ್ಟ್ರಭಕ್ತರ ಬಳಗದಿಂದ ಏ.22ರಂದು ಬೆಳಗ್ಗೆ 10ಕ್ಕೆ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಕೆ.ಎಸ್‌. ಈಶ್ವರಪ್ಪ ತಿಳಿಸಿದರು.

ಅಂದು ದೈವಜ್ಞ ಕಲ್ಯಾಣ ಮಂದಿರದಿಂದ ಆರಂಭವಾಗುವ ಪ್ರತಿಭಟನೆ ಮೆರವಣಿಗೆ ದುರ್ಗಿಗುಡಿ, ಸೀನಪ್ಪ ಶೆಟ್ಟಿ (ಗೋಪಿ ವೃತ್ತ) ವೃತ್ತ, ಬಾಲರಾಜ್‌ ಅರಸ್‌ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಲಿದೆ ಎಂದರು.
ನಮ್ಮ ಪ್ರತಿಭಟನೆಗೆ ಅನುಮತಿ ಕೊಡಬೇಕು ಎಂದು ಜಿಲ್ಲಾಧಿಕಾರಿಗೆ ಕೋರಿದ್ದೇವೆ. ಅನುಮತಿ ಕೊಡುತ್ತೇವೆ ಎಂದಿದ್ದಾರೆ. ಒಂದು ವೇಳೆ ಅವರು ಅನುಮತಿ ಕೊಡದಿದ್ದರೂ ನಾವು ಹಿಂದುಗಳಿಗಾಗಿ ಪ್ರತಿಭಟನೆ ಮಾಡೇ ಮಾಡುತ್ತಿದ್ದೇವೆ. ಅವರು ಬೇಕಾದರೆ ನಮ್ಮನ್ನು ಬಂಧಿಸಲಿ, ಹಿಂದುಗಳಿಗೆ ಅನ್ಯಾಯ ಆದಾಗ ನೋಡಿಕೊಂಡು ಸುಮ್ಮನೆ ಕೂರುವ ಮನುಷ್ಯ ನಾನಲ್ಲ. ನಾವು ಪ್ರತಿಭಟನೆ ಮಾಡೇ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೊಲೆಯಾಗದಂತೆ ನೋಡಿಕೊಳ್ಳಿ ಎಂದ ಈಶ್ವರಪ್ಪ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಕ್ರಮ ಎಂದಿರುವ ಸುರ್ಜೇವಾಲ್ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಬೇಡ. ಡಿಸಿಎಂ ಮತ್ತು ಸಿಎಂ ಮೇಲೆ ಕ್ರಮ ಏನು ಎಂದು ಸ್ಪಷ್ಟಪಡಿಸಿ ಎಂದು ಪ್ರಶ್ನಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240419-WA0018.mp4
https://kalpa.news/wp-content/uploads/2024/02/VID-20240229-WA0024.mp4

    

Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರಿ ಮಳೆಗೆ ಮನೆ ಛಾವಣಿ ಕುಸಿತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

Next Post

ಇವಿಎಂ ಎಷ್ಟು ಸರಿ..?

kalpa News

kalpa News

Next Post

ಇವಿಎಂ ಎಷ್ಟು ಸರಿ..?

Leave a Reply Cancel reply

Your email address will not be published. Required fields are marked *

No Result
View All Result
Shikaripura National Sports Day In Kumadvathi Central School copy
English Articles

KRCS Shikaripura Celebrates National Sports Day with Fervour

by kalpa News
August 30, 2026
0

Kalpa Media House  |  Shikaripura  |  Kumadvathi Residential Central School (KRCS), Shikaripura, celebrated National Sports Day 2026 with great enthusiasm and...

Read moreDetails
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL