No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
  • Advertise With Us
  • Grievances
  • About Us
  • Contact Us
Sunday, August 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೌಲ್ಯವಿಲ್ಲದಿದ್ದರೆ ಸಮಾಜಕ್ಕೆ ಹೃದಯವೇ ಇಲ್ಲದಂತೆ: ನಿ.ನ್ಯಾಯಮೂರ್ತಿ ನಾಗಮೋಹನ್ ದಾಸ್

ಸಿ.ಬಿ.ಆರ್ ಕಾನೂನು ಕಾಲೇಜಿನಲ್ಲಿ ಶಾಂತಿಯ ಸಂದೇಶ : ಸೌಹಾರ್ದ ಸಪ್ತಾಹ

kalpa News by kalpa News
September 30, 2025
in ಶಿವಮೊಗ್ಗ
0
ಮೌಲ್ಯವಿಲ್ಲದಿದ್ದರೆ ಸಮಾಜಕ್ಕೆ ಹೃದಯವೇ ಇಲ್ಲದಂತೆ: ನಿ.ನ್ಯಾಯಮೂರ್ತಿ ನಾಗಮೋಹನ್ ದಾಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯುವ ಸಮೂಹ ಭ್ರಾತೃತ್ವದಿಂದ ಸಮಾಜವನ್ನು ಮುನ್ನಡೆಸಬೇಕೆ ವಿನಃ ಐಕ್ಯತೆಯನ್ನು ಮುರಿದು ಮುನ್ನಡೆಸುವುದಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಿವಿಮಾತು ಹೇಳಿದರು.

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಚಂದನ ಸಭಾಂಗಣದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಶಾಂತಿಯ ಸಂದೇಶ : ಸೌಹಾರ್ದ ಸಪ್ತಾಹ ಮತ್ತು ಶಾಂತಿಯ ನಡಿಗೆ ಸೌಹಾರ್ದತೆ ಕಡೆಗೆ ಜಾಥಾ ಸಮಾರೋಪ ಸಮಾರಂಭ ಉದ್ದೇಶಿಸಿ ಮಾತನಾಡಿದರು.
ಹಿಂಸೆ ಜಗತ್ತನ್ನು ಆವರಿಸಿದೆ. ಜೊತೆಗೆ ಭಯೋತ್ಪಾದನೆ, ಕೋಮುವಾದ, ಅನಾಚಾರಗಳಿಂದ ವ್ಯಾಪಕ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ. ಹಿಂಸೆಯಿಂದ ಹಿಂಸೆ ಹುಟ್ಟುತ್ತಿದೆ. ಸಮಾಜಕ್ಕೆ ಮೌಲ್ಯವು ಹೃದಯವಿದ್ದ ಹಾಗೆ. ಮೌಲ್ಯವಿಲ್ಲದಿದ್ದರೆ ಸಮಾಜಕ್ಕೆ ಹೃದಯವೇ ಇಲ್ಲದಂತಾಗುತ್ತದೆ. ‌ಮೌಲ್ಯಾಧಾರಿತ ಜೀವನ ನೆಮ್ಮದಿಯ ಜೀವನ ನೀಡುತ್ತದೆ ಎಂದರು.

ದೇಶದ ಜನರನ್ನು ಹಸಿವು, ಬಡತನದಿಂದ ‌ವಿಮೋಚನೆ ಮಾಡಬೇಕು ಎಂಬುದು ಗಾಂಧೀಜಿಯವರ ಆಸೆಯಾಗಿತ್ತು. ಅದರೆ ಇಂದಿಗೂ ನಮ್ಮ ನಡುವೆ ಅನಕ್ಷರಸ್ಥರು, ಹಸಿವು, ಬಡತನದಿಂದ ಬಳಲುತ್ತಿದ್ದಾರೆ ಎಂಬುದು ಬೇಸರದ ಸಂಗತಿ. ಶೇ.80% ಸಂಪತ್ತು 20% ಶ್ರೀಮಂತರ ಕೈಯಲ್ಲಿದೆ. ಅಸಮಾನತೆಯ ಭಾರತ ಕಟ್ಟುತ್ತಿದ್ದೇವೆ ಎಂದರು.
ಗಾಂಧೀಜಿಯವರ ಕನಸನ್ನು ಪೂರ್ಣಗೊಳಿಸುವ ಕಾರ್ಯ ಯುವ ಸಮೂಹ ಮಾಡಬೇಕಿದೆ.‌ ಹಸಿವು, ಬಡತನ ಮುಕ್ತ ಸಮಾಜ ನಿರ್ಮಾಣಕ್ಕೆ ಕಂಕಣಬದ್ದರಾಗಿ. ಗಾಂಧೀಜಿಯವರು ರೈತರು, ಮಹಿಳೆಯರು, ಎಲ್ಲಾ ಭಾಷೆ, ಜಾತಿಯ ಜನರನ್ನು, ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಸಂಘಟಿಸುತ್ತಿದ್ದರು. ಅದರೇ ಇಂದು ಐಕ್ಯತೆಯನ್ನು ಹೊಡೆದು ಬಿಸಾಕಿದ್ದೇವೆ. ವಿಷವನ್ನು ಬಿತ್ತುವ ಕಾರ್ಯ ನಮ್ಮ ನಡುವೆ ಆಗುತ್ತಿದೆ.‌ ಆಷಾಢಭೂತಿಗಳ ಸಂಖ್ಯೆ ಸಮಾಜದಲ್ಲಿ ಜಾಸ್ತಿಯಾಗುತ್ತಿದೆ. ಅಂತಹ ಅಶಾಷಡಭೂತಿತನ ಯುವ ಸಮೂಹಕ್ಕೆ ಪ್ರೇರಣೆಯಾಗದಿರಲಿ. ಯಾರೆ ಒಪ್ಪಿಕೊಳ್ಳಲಿ ಬಿಡಲಿ, ಗಾಂಧೀಜಿ ಎಂದೆಂದಿಗೂ ಪ್ರಸ್ತುತ. ಮೌಲ್ಯಾಧಾರಿತ ಜೀವನ ಮತ್ತು ಸಮಾಜ ಕಟ್ಟಲು ಗಾಂಧೀಜಿ ಎಂದೆಂದಿಗೂ ಪ್ರೇರಣೀಯ ಎಂದು ಹೇಳಿದರು.

ನಾವೀನ್ಯಯುತ ಯೋಜನೆಗೆ ಜಾತಿ ಗಣತಿ ಅತ್ಯವಶ್ಯಕ

ಸಮೀಕ್ಷೆಯಲ್ಲಿರುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡುವುದು ಕಡ್ಡಾಯವಲ್ಲ. ಈ ಸಮೀಕ್ಷೆಯಲ್ಲಿ ಸೇರಿಲ್ಲ ಎನ್ನುವ ಕಾರಣಕ್ಕೆ ಸರ್ಕಾರದಿಂದ ಯಾವುದೇ ಸೌಲಭ್ಯಗಳಿಂದ ವಂಚಿತರಾಗುವುದಿಲ್ಲ. ಗಣತಿಯಲ್ಲಿ ಸೇರಿದ್ದಿರಿ ಎಂಬ ಮಾತ್ರಕ್ಕೆ ಹೆಚ್ಚು ಸೌಲಭ್ಯ ನೀಡುತ್ತಾರೆ ಎಂಬ ಭ್ರಮೆಯು ಬೇಕಿಲ್ಲ ಎಂದರು.
ಚಾಣಾಕ್ಯ ಕಾಲದಲ್ಲಿಯೂ ಗಣತಿ ಕಾರ್ಯ ನಡೆದಿದೆ. ಪ್ರತಿಯೊಂದು ರಾಜ ಮಹಾರಾಜರ ಕಾಲದಲ್ಲಿ ತಮ್ಮದೇ ರೀತಿಯಲ್ಲಿ ಗಣತಿ ಕಾರ್ಯ ನಡೆಸಿದ್ದಾರೆ. ಅದಕ್ಕೆ ಪೂರಕವಾಗಿ ಕಾರ್ಯಯೋಜನೆಗಳು ರೂಪಗೊಳ್ಳುತ್ತಿದ್ದವು. ಹಾಗಾಗಿ ಜಾತಿ ಗಣತಿ ಎಂಬುದು ಅವಶ್ಯಕವಾಗಿದೆ ಎಂದರು.

ಒಳಮೀಸಲಾತಿ ಕುರಿತು ಆಯೋಗ ಕಾರ್ಯನಿರ್ವಹಿಸುವಾಗ, ಶೇ.80 ಪರಿಶಿಷ್ಟ ಜಾತಿಯ ಮಕ್ಕಳು ಸುಶಿಕ್ಷಿತರಾಗಿದ್ದಾರೆ ಎಂದು ತಿಳಿಯಿತು. ಇದರಲ್ಲಿ ಶೇ.7 ಮಾತ್ರ ಪದವಿ ಹಂತ ಪೂರೈಸಿದ್ದರು ಎಂಬುದು ಗಮನಾರ್ಹ. ಅಂದರೆ ಶೇ.73ರಷ್ಟು ಮಕ್ಕಳು ಶಾಲಾ ಹಂತಕ್ಕೆ ತಮ್ಮ ಶಿಕ್ಷಣ ಮೊಟಕುಗೊಳಿಸಿದ್ದಾರೆ. ಇದಕ್ಕೆ, ಶಾಲಾ ಹಂತದಲ್ಲಿ ಸರ್ಕಾರ ನೀಡುವ ಉಚಿತ ಆಹಾರ ಮತ್ತು ಬಟ್ಟೆ ಕಾರಣವಿರಬಹುದು. ಇಂತಹ ಸತ್ಯ ಸಮಾಜ ಅರಿಯಬೇಕಾದರೆ ಜಾತಿ ಗಣತಿ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಎಲ್ಲಾ ಜನರು ಒಂದಲ್ಲ ಒಂದು ರೀತಿಯಲ್ಲಿ ಮೀಸಲಾತಿ ಅನುಭವಿಸುತ್ತಿದ್ದಾರೆ. ಅದರೇ 62 ಲಕ್ಷ ಹುದ್ದೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಉಳಿದಿವೆ. ಅನುದಾನಿತ ಸಂಸ್ಥೆಗಳಲ್ಲಿ ಒಂದೇ ಒಂದು ನೇಮಕಾತಿಗೆ ಅವಕಾಶ ಸಿಗುತ್ತಿಲ್ಲ. ಇದರಿಂದ ಮೀಸಲಾತಿಗಳು ರಚನೆಗೊಂಡರು ಸರಿಯಾದ ಬಳಕೆ ಮಾಡಿಕೊಳ್ಳುವ ಅವಕಾಶವೇ ಸಿಗುತ್ತಿಲ್ಲ. ಜೊತೆಯಲ್ಲಿ ಆಟೋಮೇಷನ್ ಕಾಲದಲ್ಲಿ ಮಾನವ ಸಂಪನ್ಮೂಲ ಬಳಕೆಯನ್ನು ಕಡಿತಗೊಳಿಸಲಾಗುತ್ತಿದೆ. ಆಧುನಿಕ ತಂತ್ರಜ್ಞಾನ ಎಲ್ಲಾ ಮೀಸಲಾತಿಯನ್ನು ತನ್ನಡೆಗೆ ಸೆಳೆದುಕೊಳ್ಳುತ್ತಿದೆ ಎಂದು ಹೇಳಿದರು.
ಬಸವ ಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಮಾತನಾಡಿ, ಗಾಂಧೀಜಿ ಎಂದಾಗ ಒಂದು ರೀತಿಯ ಅಸಮಾಧಾನ, ಅಸಹಿಷ್ಣತೆಯನ್ನು ಯುವ ಸಮೂಹದಲ್ಲಿ ಕಾಣುತ್ತಿದ್ದೇವೆ.‌ ಅದರೇ ಗಾಂಧೀಜಿಯ ಉದಾತ್ತ ಸ್ವಭಾವವನ್ನು ಅರ್ಥ ಮಾಡಿಕೊಳ್ಳದೆ ಇಂತಹ ಅಸಹಿಷ್ಣತೆ ಸರಿಯಲ್ಲ. ಗಾಂಧೀಜಿಯವರು ಪ್ರಶ್ನೆಗಳನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿ ಎದುರಿಸಿದವರು.

ಗಾಂಧೀಜಿಯನ್ನು ಪ್ರಶ್ನೆ ಮಾಡುವಾಗ ಅಸಹಿಷ್ಣತೆ ಇರಬಾರದು. ಇದರಿಂದ ನಮ್ಮ ವ್ಯಕ್ತಿತ್ವದಲ್ಲಿ ದೋಷಗಳು ರೂಪಗೊಳ್ಳುತ್ತದೆಯೆ ವಿನಃ, ಗಾಂಧೀಜಿಗೆ ಯಾವುದೆ ಲಾಭ ನಷ್ಟವಿಲ್ಲ. ಗಾಂಧೀಜಿಯವರನ್ನು ಸರಿಯಾದ ರೀತಿಯಲ್ಲಿ ಅರ್ಥೈಸುವ ಕೆಲಸ ಯುವ ಸಮೂಹದಿಂದ ಆಗಬೇಕಿದೆ ಎಂದರು.
ಯುದ್ದ ದೂರದಿಂದ ನೋಡುವವರಿಗೆ ಉನ್ಮಾನದ ಸಂಗತಿ. ಅದರೆ ಅದರಿಂದ ನೋವುಂಟಾದ ಜನ ಸಾಮಾನ್ಯರ ಪರಿಸ್ಥಿತಿಯನ್ನು ಅರ್ಥೈಸಿಕೊಂಡಾಗ, ಯುದ್ಧದ ಭೀಕರತೆ ಗೊತ್ತಾಗುತ್ತದೆ. ಗಾಂಧೀಜಿಯ ತತ್ವ ಅಂತಹ ಭೀಕರತೆಯನ್ನು ಅಳಿಸಿ ಹಾಕಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ.ಎ.ಅನಲ ಅಧ್ಯಕ್ಷತೆ ವಹಿಸಿದ್ದರು. ಎಸ್.ವೈ.ಎಸ್ ರಾಜ್ಯ ಸಮಿತಿ ಕಾರ್ಯದರ್ಶಿ ಮೌಲಾನಾ ಶಾಹುಲ್ ಹಮೀದ್, ಎಸ್.ಎಂ.ಎಸ್.ಎಸ್ ನಿರ್ದೇಶಕ ಫಾದರ್ ಪಿಯೂಸ್ ಡಿಸೋಜ, ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ನ್ಯಾಯವಾದಿ ಕೆ.ಪಿ.ಶ್ರೀಪಾಲ್, ಐಕ್ಯೂಎಸಿ ಸಂಯೋಜಕ ಡಾ.ಎಸ್.ಕಾಂತರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರುಣೆ – ಆಯುಧಾ ಎರಡೂ ದೇವಿಯಲ್ಲಿದೆ: ರಾಮಚಂದ್ರಾಪುರ ಶ್ರೀ

Next Post

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

kalpa News

kalpa News

Next Post
ಮಹೇಶ್ ತಿಮರೋಡಿ ವಿರುದ್ಧ ಕ್ರಮಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆ | ಸಂಜೆಯೊಳಗೆ ಬಂಧನ?

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Leave a Reply Cancel reply

Your email address will not be published. Required fields are marked *

No Result
View All Result
World Padel League august 16 Scores Big Brand Support
English Articles

World Padel League Secures Strong Brand Backing Ahead of Its Biggest Season Yet

by kalpa News
August 8, 2026
0

Kalpa Media House  |  Mumbai  | With less than a week to go for its much-anticipated Season 4, the World...

Read moreDetails
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL