ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತೀಯ ವೈದ್ಯಕೀಯ ಸಂಘದ #Indian Medical Association ಶಿವಮೊಗ್ಗ ಶಾಖೆಯ ವತಿಯಿಂದ ಶನಿವಾರ ನಗರದ ಐಎಂಎ ಸಭಾಂಗಣದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಐಎಂಎ ಶಾಖೆಯ ಅಮೃತ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು.

Also read: ಬೆಂಗಳೂರು | ಇಂದು ಸಂಜೆ ವಿಜಯದಾಸರ ವಿರಚಿತ ಕೃತಿ ಗೀತ ಗಾಯನ
ಈ ವೇಳೆ ಹೆಸರಾಂತ ವಾಗ್ಮಿಗಳು ಹಾಗೂ ಉಪನ್ಯಾಸಕರಾದ ಜಿ.ಎಸ್. ನಟೇಶ್ ಅವರು ಡಿವಿಜಿಯವರ ಮಂಕುತಿಮ್ಮನ ಕಗ್ಗದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯ ಅಧ್ಯಕ್ಷರಾದ ಡಾ. ಶ್ರೀಧರ್, ಖಂಜಾಂಚಿಗಳಾದ ಡಾ. ರಾಜರಾಮ್, ಪ್ರಮುಖರಾದ ಡಾ.ಕೆ.ಆರ್. ಶ್ರೀಧರ್, ಡಾ.ಆರ್.ಬಿ. ಪುರುಷೋತ್ತಮ, ಡಾ. ಚಿಕ್ಕಸ್ವಾಮಿ, ಡಾ. ಶ್ರೀನಿವಾಸ್, ಡಾ. ವೆಂಕಟೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post