ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂ. ಕೊಡುವ ನ್ಯಾಯ ಯೋಜನೆ ಅದು. ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಒಂದು ಲಕ್ಷ ರೂಪಾಯಿಯನ್ನು ಪಟಪಟನೇ ಅವರ ಖಾತೆಗಳಿಗೆ ಜಮಾ ಮಾಡುತ್ತೇವೆ ಎಂದು ಎಐಸಿಸಿ ಮುಖಂಡ ರಾಹುಲ್ ಗಾಂಧಿ #Rahul Gandhi ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಂವಿಧಾನ ಉಳಿಸುವುದಕ್ಕಾಗಿಯೇ ಈ ಚುನಾವಣೆಯಲ್ಲಿ ಗೆಲ್ಲಬೇಕಾಗಿದೆ. ಗ್ಯಾರಂಟಿ ಯೋಜನೆಗಳು ಇದಕ್ಕೆ ಸಹಕಾರಿಯಾಗಲಿವೆ ಎಂದರು.

Also read: ಒಬ್ಬ ಮಾಸ್ ರೇಪಿಸ್ಟ್ ಪ್ರಜ್ವಲ್ ಪರ ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ
ಯುವನಿಧಿ ಯೋಜನೆ ಮೂಲಕ ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರದಿಂದ ಪ್ರತಿ ವರ್ಷಕ್ಕೆ ಒಂದು ಲಕ್ಷ ರೂ, ನೀಡಿ ಅವರಿಗೆ ತರಬೇತಿ ಕೊಟ್ಟು ಕೇಂದ್ರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಪ್ರಧಾನಿ ಮೋದಿ #PM Modi ಅವರಿಗೆ ಭಯ ಶುರುವಾಗಿದೆ. ಏಕೆಂದರೆ ಅವರ ಜೊತೆಗಿರುವ 27 ಜನ ಶ್ರೀಮಂತರಿಗೆ ಈ ಹಣ ಹೋಗುವುದಿಲ್ಲ ಎಂದು. ಬಿಜೆಪಿಯವರ ಹಾಗೆ ನಾವು ಸುಳ್ಳು ಹೇಳುವುದಿಲ್ಲ. ಮೋದಿ ಅವರು ಕೆಲವೇ ಕೆಲವು ವ್ಯಕ್ತಿಗಳ ಸಾಲ ಮನ್ನಾ ಮಾಡಿದ್ದಾರೆ. ಆದರೆ ನಾವು ಅಧಿಕಾರಕ್ಕೆ ಬಂದರೆ ದೇಶದ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post