ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲಿ ಸುಗಮ ವಾಹನ ಸಂಚಾರಕ್ಕೆ ಪಾರ್ಕಿಂಗ್ VehicleParking ಸ್ಥಳಗಳನ್ನು ಸೂಚಿಸಿರುವ ಜಿಲ್ಲಾಡಳಿತ, ಈ ಸ್ಥಳಗಳಲ್ಲಿ ಮಾತ್ರ ವಾಹನ ನಿಲುಗಡೆ ಮಾಡುವಂತೆ ಸೂಚಿಸಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ DCSelvamani ಅವರು ಆದೇಶ ಹೊರಡಿಸಿದ್ದು, ನಗರ ಪೂರ್ವ ಸಂಚಾರ ಪೆಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಸಂಚಾರ ವೃತ್ತದ ಪೊಲೀಸ್ ಠಾಣೆಗಳ ಕೆಳಕಂಡ ಪ್ರಮುಖ ರಸ್ತೆಗಳಲ್ಲಿ ದೇವಸ್ಥಾನ, ಆಸ್ಪತ್ರೆ, ಬ್ಯಾಂಕ್, ಹೋಟೆಲ್ ಮತ್ತು ಲಾಡ್ಜ್’ಗಳು ಇರುವುದರಿಂದ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ, ಸಾರ್ವಜನಿಕ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ದಿನ ಬಿಟ್ಟು ದಿನ ಪಾರ್ಕಿಂಗ್ ವಾಹನ ನಿಲುಗಡೆ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಸೂಚನೆ ನೀಡಿದ್ದಾರೆ.
ಮೋಟಾರು ವಾಹನ ಕಾಯ್ದೆ 1988 ಕಲಂ 177 ರನ್ವಯ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಈ ಕೆಳಕಂಡಂತೆ ದಿನ ಬಿಟ್ಟು ದಿನ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.
Also read: ಸ್ಪೂರ್ತಿದಾಯಕ ನಾಯಕತ್ವದಲ್ಲಿ ನಿರಾಸೆಯ ಕ್ಷಣಗಳೇ ಇಲ್ಲ: ಸಂಸದ ರಾಘವೇಂದ್ರ ಸಂತಸ
ಎಲ್ಲೆಲ್ಲಿ ದಿನ ಬಿಟ್ಟು ದಿನ ನಿಲುಗಡೆ?
ರತ್ನಮ್ಮ ಮಾಧವ ರಾವ್ ರಸ್ತೆಯ ಸುರಭಿ ಹೋಟೆಲ್ ಕ್ರಾಸ್’ನಿಂದ ಆದಿತ್ಯ ಡಯಾಗ್ನೋಸ್ಟಿಕ್ ಕ್ರಾಸ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ಪಾರ್ಕ್ ಬಡಾವಣೆಯ ಮುಖ್ಯ ರಸ್ತೆಯ ಕೆನರಾ ಬ್ಯಾಂಕ್ ಕ್ರಾಸ್ (ಹಳೆಯ ಸಿಂಡಿಕೇಟ್ ಬ್ಯಾಂಕ್) ನಿಂದ ಬಾಲ್ ರಾಜ್ ಅರಸ್ ರಸ್ತೆಯ ಜಾಯಲುಕಾಸ್ (ಮಧುರಾ ಪ್ಯಾರಡೈಸ್ ) ಕ್ರಾಸ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ವಾಸವಿ ವೃತ್ತದಿಂದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನಬಿಟ್ಟು ದಿನ ವಾಹನ ನಿಲುಗಡೆ. ತಿಲಕ್ ನಗರ ಮುಖ್ಯ ರಸ್ತೆಯ ಭರತ್ ನ್ಯೂರೋಕ್ಲೀನಿಕ್’ನಿಂದ ಪಾರ್ಕ್ ಬಡವಣೆಯ ಮುಖ್ಯ ರಸ್ತೆ (ರಾಘವೇಂದ್ರ ಸ್ವಾಮಿ ಮಠದ ಹಿಂಭಾಗ ರಸ್ತೆ) ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್’ನಿAದ ಶಿವಶಂಕರ ಗ್ಯಾರೇಜ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ದಿ. ಪಂಡಿತ್ ದೀನ್ ದಯಾಳ್ ರಸ್ತೆಯ ಆಕಾಶ್ ಇನ್ ಹೋಟೇಲ್ ನಿಂದ ಪಂಚಮುಖಿ ಅಂಜನೇಯ ಸ್ವಾಮಿ ದೇವಸ್ಥಾನದವರೆಗೆ ರಸ್ತೆಯ ಎರಡೂ ಬದಿಯಲ್ಲಿ ದಿನ ಬಿಟ್ಟು ದಿನ ವಾಹನ ನಿಲುಗಡೆ.
ವಾಹನ ನಿಲುಗಡೆ ನಿಷೇಧ ಮತ್ತು ವಾಹನ ನಿಲುಗಡೆ
- ತಿಲಕ್ ನಗರ ಮುಖ್ಯ ರಸ್ತೆಯಿಂದ ಭರತ್ ನ್ಯೂರೋ ಕ್ಲಿನಿಕ್ ರಸ್ತೆಯವರೆಗೆ ಬಲಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ರಸ್ತೆಯ ಎಡಭಾಗದಲ್ಲಿ ವಾಹನ ನಿಲುಗಡೆ.
- ತಿಲಕ್ ನಗರ ರಾಘವೇಂದ್ರಸ್ವಾಮಿ ಮಠದ ರಸ್ತೆಯಿಂದ ಜಿಲ್ಲಾ ಭೋವಿ ಸಮುದಾಯ ಭವನದವರೆಗೆ ಎಡಭಾಗದಲ್ಲಿ ವಾಹನ ನಿಲುಗಡೆ ನಿಷೇಧಿಸಿ, ಬಲಭಾಗದಲ್ಲಿ ವಾಹನ ನಿಲುಗಡೆ.
- ಕುವೆಂಪು ರಸ್ತೆಯ ನಂಜಪ್ಪ ಆಸ್ಪತ್ರೆ ಕ್ರಾಸ್’ನಿಂದ ಕೆನರಾ ಬ್ಯಾಂಕ್ ಕ್ರಾಸ್’ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆ ನಿಷೇಧ.
- ಹೆಲಿಪ್ಯಾಡ್ ಸರ್ಕಲ್’ನಿಂದ ಕುವೆಂಪು ರಸ್ತೆ ನಂದಿ ಪೆಟ್ರೋಲ್ ಬಂಕ್’ವರೆಗೆ ವಾಹನ ನಿಲುಗಡೆ ನಿಷೇಧ.
- ದಿ. ಪಂಡಿತ್ ದೀನ್ ದಯಾಳ್ ರಸ್ತೆಯಲ್ಲಿ ಜ್ಯೋತಿ ಗಾರ್ಡನ್’ನಿಂದ ಆಕಾಶ್ ಇನ್ ಹೋಟೆಲ್ ವರೆಗೆ ವಾಹನ ನಿಲುಗಡೆ ನಿಷೇಧ.
- ದಿ. ಪಂಡಿತ್ ದೀನ್ ದಯಾಳ್ ರಸ್ತೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಬಾಲಾಜಿ ಟೂರ್ಸ್ ಅಂಡ್ ಟ್ರಾವೆಲ್ಸ್’ವರೆಗೆ ವಾಹನ ನಿಲುಗಡೆ ನಿಷೇಧ.
- ಕುವೆಂಪು ರಸ್ತೆಯ ಶಿವಶಂಕರ ಗ್ಯಾರೇಜ್’ನಿಂದ ಬಿಜೆಪಿ ಪಾರ್ಟಿ ಆಫೀಸ್ ಕ್ರಾಸ್’ವರೆಗೆ ಬಲಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಆದೇಶಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post