ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಸೆಪ್ಟಂಬರ್ 2ರಂದು ಶಿವಮೊಗ್ಗಕ್ಕೆ ಆಗಮಿಸಿ, ಸರ್ಕಾರದ ವಿವಿಧ ಇಲಾಖೆಗಳ ಕಟ್ಟಡಗಳ ಲೋಕಾರ್ಪಣೆ, ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಯ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳಿಗಾಗಿ ಏರ್ಪಡಿಸಲಾಗಿದ್ದ ಪೂರ್ವಸಿದ್ದತಾ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಪ್ರಸಕ್ತ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಮಂಜೂರಾಗಿ ಪೂರ್ಣಗೊಳ್ಳುತ್ತಿರುವ, ಲೋಕಾರ್ಪಣೆಗೆ ಸಿದ್ಧಗೊಂಡಿರುವ ಕಟ್ಟಡಗಳು, ನೂತನವಾಗಿ ಮಂಜೂರಾಗಿ ಶಂಕುಸ್ಥಾಪನೆಗೆ ಸಿದ್ಧವಾಗಿರುವ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಅವರು, ಲೋಕಾರ್ಪಣೆಗೆ ಸಿದ್ಧವಾಗಿರುವ ಕಟ್ಟಡಗಳು, ಸಮುದಾಯಭವನಗಳು, ಶಾಲೆ-ಅಂಗನವಾಡಿ ಕಟ್ಟಡಗಳು, ರಸ್ತೆಗಳು, ಕೆರೆಗಳ ವಿವರವಾದ ಮಾಹಿತಿಯನ್ನು ಆಗಸ್ಟ್ 25ರೊಳಗಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸೆಪ್ಟಂಬರ್ 2ರಂದು ಬೆಳಿಗ್ಗೆ 11ಗಂಟೆಗೆ ನಗರದ ಫ್ರೀಡಂಪಾರ್ಕ್ ಆವರಣದಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳೊಂದಿಗೆ ಸಂಬಂಧಿಸಿದ ಇಲಾಖೆಗಳ ಸಚಿವರು, ಉನ್ನತ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಪ್ರತಿ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಚಟುವಟಿಕೆಗಳಿಗೆ ತಲಾ 52ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿ, ಅವಶ್ಯಕವಾಗಿರುವ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅನುಮತಿ ನೀಡಿದ್ದಾರೆ ಎಂದ ಅವರು, ಈಗಾಗಲೇ ಕೆಲವು ಕಾರ್ಯಕ್ರಮಗಳನ್ನು ಆರಂಭಗೊಳಿಸಲಾಗಿವೆ. ಇನ್ನೂ ಕೆಲವು ಉದ್ಘಾಟನೆಗೆ ಸಿದ್ಧವಾಗಿವೆ ಎಂದರು.

Also read: ಕೊಟ್ಟೂರು ತಾಲೂಕಿನ ಶ್ರೀ ಮೂಗ ಬಸವೇಶ್ವರ ಜಾತ್ರೆಗೆ ನಿಷೇಧ
ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರು, ಗಣ್ಯರು, ಹಿರಿಯರನ್ನು ಆಹ್ವಾನಿಸಲಾಗುವುದು ಎಂದ ಅವರು ಎಲ್ಲಾ ಇಲಾಖೆಯ ಅಧಿಕಾರಿಗಳು ಆಗಸ್ಟ್ 25ರೊಳಗಾಗಿ ಮಾಹಿತಿಯನ್ನು ಒದಗಿಸಲು ಸೂಚಿಸಿರುವುದಾಗಿ ಅವರು ನುಡಿದರು.











Discussion about this post