No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಸ್ತೆ ಗುಂಡಿಗಳಿಗೆ ನಾವೀನ್ಯತೆಯ ಕಾಯಕಲ್ಪ | ಜೆಎನ್‌ಎನ್‌ಸಿಇ ಸಿವಿಲ್‌ ವಿಭಾಗದಿಂದ ನೂತನ ಆವಿಷ್ಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2024
in ಶಿವಮೊಗ್ಗ
0
ರಸ್ತೆ ಗುಂಡಿಗಳಿಗೆ ನಾವೀನ್ಯತೆಯ ಕಾಯಕಲ್ಪ | ಜೆಎನ್‌ಎನ್‌ಸಿಇ ಸಿವಿಲ್‌ ವಿಭಾಗದಿಂದ ನೂತನ ಆವಿಷ್ಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಸ್ತೆಯಲ್ಲಿ ಹೋಗುವಾಗ ಎದುರಾಗುವ ಗುಂಡಿಗಳು ಅದೆಷ್ಟು ಸಂದರ್ಭದಲ್ಲಿ ವಾಹನ ಸವಾರರಿಗೆ ಅಪಘಾತವಾಗುವಂತೆ ಮಾಡುತ್ತದೆ. ಅದರಲ್ಲೂ ಮಳೆಗಾಲದಲ್ಲಿ ಗುಂಡಿಗಳದ್ದೆ ಕಾರುಬಾರು. ಇಂತಹ ಸವಾಲುಗಳನ್ನು ಅರಿತ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡ, ನಾವೀನ್ಯತೆಯ ಉತ್ಪನ್ನ ಒಂದನ್ನು ಆವಿಷ್ಕರಿಸಿದ್ದಾರೆ. ಅದುವೆ ‘ಜೆ.ಎನ್.ಎನ್.ಸಿ.ಇ ಕೋಲ್ಡ್ ಪಾಟ್ ಹೋಲ್ ಮಿಕ್ಸ್‘.

ಸಾಮಾನ್ಯವಾಗಿ ಡಾಂಬರ್‌ನನ್ನು ರಸ್ತೆ ಮತ್ತು ಹೆದ್ದಾರಿಗಳನ್ನು ನಿರ್ಮಿಸಲು ವ್ಯಾಪಕವಾಗಿ ಬಳಸಲಾಗುತ್ತದೆ. ಏಕೆಂದರೆ ಡಾಂಬರಿಗೆ ಗಮನಾರ್ಹ ಸಂಚಾರ ಹೊರೆ ತಡೆದುಕೊಳ್ಳುವ ಸಾಮರ್ಥ್ಯವಿರುತ್ತದೆ. ಅದಾಗಿಯೂ ತಾಪಮಾನದ ಅತಿಯಾದ ವ್ಯತ್ಯಾಸಗಳು ಹಾಗೂ ರಸ್ತೆಯ ಅಸಮರ್ಪಕ ವಿನ್ಯಾಸಗಳಿಂದಾಗಿ ವಾಹನಗಳ ದಟ್ಟಣೆ ಮತ್ತು ಭಾರವನ್ನು ತಡೆದುಕೊಳ್ಳುವಲ್ಲಿ ಈ ಡಾಂಬರಿನ ರಸ್ತೆಗಳು ಅಸಮರ್ಥವಾಗುತ್ತವೆ.
ಡಾಂಬರಿನ ರಸ್ತೆಗಳಲ್ಲಿ ಸಾಮಾನ್ಯವಾಗಿ ಗುಂಡಿಗಳು ಬಿರುಕು ಅಥವಾ ಆಳದ ತೀವ್ರತೆಯಿಂದ ಕೂಡಿರುತ್ತದೆ. ಅಸಮರ್ಪಕ ರಸ್ತೆಯ ರಚನೆಯಿಂದಾಗಿ ಡಾಂಬರಿನ ಮೇಲೆ ಆಗುವ ಹಿಗ್ಗು-ಕುಗ್ಗುವಿಕೆಯಿಂದಲು ಬಿರುಕು ಸಂಭವಿಸುತ್ತದೆ. ರಸ್ತೆಯ ರಚನೆಯು ಸಂಚಾರದ ದಟ್ಟನೆ ಮತ್ತು ಭಾರಕ್ಕೆ ಅನುಗುಣವಾಗಿ ಬಲವಾಗಿ ಮತ್ತು ಕಠಿಣವಾಗಿ ಇಲ್ಲದ್ದಿದ್ದರೇ ರಸ್ತೆಯ ಮಾರ್ಗವು ಚಕ್ರಗಳ ಹೊರೆಗಳ ಅಡಿಯಲ್ಲಿ ಭಾಗುತ್ತದೆ. ಇದರಿಂದ ರಸ್ತೆಯಲ್ಲಿ ಬಿರುಕು ಮತ್ತು ಗುಂಡಿಗಳು ಅತಿ ಹೆಚ್ಚಾಗಿ ಮೂಡಲು ಕಾರಣವಾಗುತ್ತದೆ. ಜೊತೆಯಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆ ಮೇಲೆ ನೀರು ಹರಿಯುವುದು ಕೂಡ ಡಾಂಬರು ಬಿರುಕು ಮೂಡಲು ಮತ್ತು ಜಲ್ಲಿ ಮಿಶ್ರಣವು ಶಿಥಿಲಗೊಳ್ಳಲು ಕಾರಣವಾಗುತ್ತದೆ.

ಗುಂಡಿಗಳ ದುರಸ್ತಿಗೆ ಪರಿಹಾರವೆಂದು ಹೇಳಿಕೊಳ್ಳುವ ಅನೇಕ ಬಿಟಮಿನ್ ಕೋಲ್ಡ್ ಡಾಂಬರ್ ಪ್ಯಾಚಿಂಗ್ ವಸ್ತುಗಳು ಮಾರುಕಟ್ಟೆಯಲ್ಲಿ ವರ್ಷಗಳಿಂದ ಇವೆ. ಅದರೇ ಈ ಉತ್ಪನ್ನಗಳು ಮಳೆ ಬೀಳುವ ಪ್ರದೇಶಗಳಿಗೆ ಹೆಚ್ಚು ಪೂರಕವಾಗಿಲ್ಲ. ಜೊತೆಯಲ್ಲಿ ಕೋಲ್ಡ್ ಡಾಂಬರ್ ಪ್ಯಾಚಿಂಗ್ ಸಾಮಾಗ್ರಿಗಳ ಸಂಗ್ರಹಣೆ, ದಾಸ್ತಾನು, ರಸ್ತೆಯಲ್ಲಿನ ತೇವಾಂಶದ ಸಂಭವ ಮಿಶ್ರಣದ ಸಂದರ್ಭದಲ್ಲಿ ಅಸಮಂಜಸ ಬೆರಿಕೆ ಇತ್ಯಾದಿಗಳಿಂದ ಅನೇಕ ಸಮಸ್ಯೆಗಳಿವೆ. ಬೆಲೆಯಲ್ಲಿಯು ದುಬಾರಿಯಾಗಿದೆ. ರಸ್ತೆಯಲ್ಲಿನ ಗುಂಡಿ ಮುಚ್ಚುವುದಕ್ಕೆ ಪ್ರಸ್ತುತ ಹಾಟ್‌ ಮಿಕ್ಸ್‌ (ಜಲ್ಲಿ ಡಾಂಬಾರು) ಬಳಸಲಾಗುತ್ತದೆ. ಆದರೆ, ಮಳೆಗಾಲದಲ್ಲಿ ಈ ಹಾಟ್‌ ಮಿಕ್ಸ್‌ ಗಳನ್ನು ಬಳಸಿ ಗುಂಡಿ ಮುಚ್ಚಲು ಸಾಧ್ಯವಿಲ್ಲ. ಹೆಚ್ಚು ಕಾಲ ಬಾಳಿಕೆಯು ಬರುವುದಿಲ್ಲ.
ಈ ಎಲ್ಲಾ ಅಂಶಗಳನ್ನು ಮನಗಂಡ ಜೆ.ಎನ್.ಎನ್‌.ಸಿ.ಇ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರ ತಂಡ ಡಾಂಬರ್ ಇಲ್ಲದ ಕೋಲ್ಡ್ ಪ್ಯಾಚ್ ಮಿಶ್ರಣವನ್ನು ಆವಿಷ್ಕರಿಸಿ ಜನರಿಗೆ ಅರ್ಪಿಸಿದ್ದಾರೆ. ಇದು ಸಿದ್ದಪಡಿಸಿದ ಮಿಶ್ರಣವಾಗಿದ್ದು,  ಮಳೆಗಾಲ ಸೇರಿದಂತೆ ಯಾವುದೇ ಕಾಲದಲ್ಲಿಯು, ದಟ್ಟ ವಾಹನ ಸಂಚಾರದ ನಡುವೆಯೂ ಈ ಮಿಶ್ರಣವನ್ನು ಗುಂಡಿ ಮುಚ್ಚಲು ಉಪಯೋಗಿಸಬಹುದು.

ಕೋಲ್ಡ್‌ ಮಿಕ್ಸ್‌ ಹೇಗೆ ವಿಭಿನ್ನ:

  1. ಹಾಟ್‌ ಮಿಕ್ಸ್‌ ಗಳನ್ನು ಮಳೆಗಾಲ ಹೊರತಾದ ಕಾಲಾವಧಿಯಲ್ಲಿ ಬಳಸಬಹುದು, ಆದರೆ, ಕೋಲ್ಡ್‌ ಮಿಕ್ಸ್‌ ಯಾವುದೇ ಕಾಲದಲ್ಲಿ ಬೇಕಾದರೂ ಬಳಸಬಹುದು.
  2. ಬೇರೆಯ ಕಂಪನಿಗಳಲ್ಲಿ ಲಭ್ಯವಿರುವ ಕೋಲ್ಡ್‌ ಮಿಕ್ಸ್‌ ಮಾದರಿಯ ಪರಿಕರಗಳು 50 ಕೆಜಿಗೆ 1700 ರೂ. ಇದೆ. ಆದರೆ, ಈ ನೂತನ ಆವಿಷ್ಕಾರಕ್ಕೆ ಕೇವಲ 800 ರೂ ಆಗಲಿದೆ.
  3. ಅಧಿಕ ಮಳೆಯಾಗುವ ಪ್ರದೇಶಗಳಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಬಾಳಿಕೆ ಬರುವ ಈ ನೂತನ ಉತ್ಪನ್ನ ಬಳಸಿ ಗುಂಡಿ ಮುಚ್ಚಬಹುದು.
  4. ಹಾಟ್‌ ಮಿಕ್ಸ್‌ ಬಳಸಿ ಗುಂಡಿ ಮುಚ್ಚಲು ಬೇಕಾಗುವಂತೆ ಹೆಚ್ಚು ಮಾನವ ಸಂಪನ್ಮೂಲ, ಇತರೆ ಯಂತ್ರೋಪಕರಣಗಳು ಬೇಕಾಗಿಲ್ಲ.

ಪೇಟೆಂಟ್‌ ಪ್ರಕಟ: ಸುಮಾರು ನಾಲ್ಕು ವರ್ಷಗಳ ನಿರಂತರ ಸಂಶೋಧನೆ ಪ್ರಯತ್ನದ ನಂತರ ಉತ್ಪನ್ನದ ಪೇಟೆಂಟ್‌ ಪ್ರಕ್ರಿಯೆಯಲ್ಲಿ ಈಗಾಗಲೇ ಪೇಟೆಂಟ್‌ ಪ್ರಕಟಗೊಂಡಿದ್ದು, ಮುಂದಿನ ವರ್ಷದೊಳಗೆ ಪೇಟೆಂಟ್‌ ದೊರೆಯುವ ನಿರೀಕ್ಷೆಯಿದೆ.

ಹೆದ್ದಾರಿ ಪ್ರಾಧಿಕಾರದೊಂದಿಗೆ ಒಡಂಬಡಿಕೆ: 2021 ರಲ್ಲಿ ಭಾರತ ಸರ್ಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು. ಇದರಿಂದ ಉತ್ಪನ್ನ ಸೇರಿದಂತೆ ಸಿವಿಲ್‌ ವಿಭಾಗದ ಅನೇಕ ಸಂಶೋಧನಾ ಚಟುವಟಿಕೆಗಳಿಗೆ ಪೂರಕ ಶಕ್ತಿ ದೊರೆತಂತಾಗಿತ್ತು.

Also read: ಸಾಗರ | ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಪತ್ತೆ

ಕೇಂದ್ರ ಸರ್ಕಾರಕ್ಕೆ ಉತ್ಪನ್ನ ಪರಿಚಯಿಸುವೆ: ಸಂಸದ ಬಿ.ವೈ. ರಾಘವೇಂದ್ರ

ಸುದ್ದಿಗೋಷಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ವಿದ್ಯಾರ್ಥಿಗಳ ನಾವೀನ್ಯ ಚಿಂತನೆಗಳನ್ನು ಯೋಜನೆಯಾಗಿ ರೂಪಿಸುವಲ್ಲಿ ವಿದ್ಯಾಸಂಸ್ಥೆ ನೀಡುತ್ತಿರುವ ಆತ್ಮವಿಶ್ವಾಸ ತುಂಬುವ ಕೆಲಸ ಶ್ಲಾಘನೀಯವಾಗಿದ್ದು ಮುಂದಿನ ದಿನಗಳಲ್ಲಿ ಹೆದ್ದಾರಿ ಪ್ರಾಧಿಕಾರದ ಸಭೆಯಲ್ಲಿ ಹಾಗೂ ಕೇಂದ್ರ ಸಚಿವರಾದ ನಿತಿನ್‌ ಗಡ್ಕರಿ ಅವರಿಗೆ ಈ ಉತ್ಪನ್ನದ ಕುರಿತಾಗಿ ಚರ್ಚಿಸಿ ರಾಷ್ಟ್ರಮಟ್ಟದಲ್ಲಿ ಉತ್ಪನ್ನವನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಲಾಗುವುದು ಎಂದು ತಿಳಿಸಿದರು. ದೇಶದಲ್ಲಿ ಪ್ರತಿ ವರ್ಷ ಮೂರು ಸಾವಿರಕ್ಕು ಹೆಚ್ಚು ಅಪಘಾತ ಪ್ರಕರಣಗಳು ರಸ್ತೆ ಗುಂಡಿಗಳಿಂದ ಆಗುತ್ತಿದೆ. ಮಳೆಗಾಲದಲ್ಲಿ ಬೀಳುವ ರಸ್ತೆ ಗುಂಡಿಗಳನ್ನು ತಕ್ಷವೇ ಮುಚ್ಚಬಹುದಾದ ಯೋಜನೆ ಅಭಿನಂದನಾರ್ಹ ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.‌ಎನ್.ನಾಗರಾಜ ಮಾತನಾಡಿ, ಕಟ್‌ಬ್ಯಾಗ್‌ ಎಮಲ್ಷನ್‌ ಬಳಸಿ ನಿರ್ಮಾಣ ಮಾಡಿರುವ ಈ ಉತ್ಪನ್ನವನ್ನು ಬಳಸಲು ವಿಶೇಷ ಪರಿಣಿತಿಯ ಅವಶ್ಯಕತೆಯಿಲ್ಲ. ರೋಡ್‌ ಕಟ್ಟಿಂಗ್‌ ಗಳಿಗೆ, ರಸ್ತೆ ಗುಂಡಿಗಳಿಗೆ ಈ ಉತ್ಪನ್ನ ಉಪಯುಕ್ತವಾಗಿದ್ದು, ಸುಮಾರು ಎರಡರಿಂದ ಐದು ವರ್ಷಗಳ ಕಾಲ ಬಾಳಿಕೆ ಬರುತ್ತದೆ. ರಸ್ತೆಯಲ್ಲಿ ಅನುಷ್ಟಾನಗೊಂಡ ಕೆಲವೇ ಸೆಕೆಂಡುಗಳಿಗೆ ವಾಹನಗಳು ಮುಕ್ತವಾಗಿ ಸಂಚಿರಸಬಹುದಾಗಿದೆ. ಈಗಾಗಲೇ ಬೆಂಗಳೂರು ಹಾಗೂ ಶಿವಮೊಗ್ಗದ ರಸ್ತೆಗಳಲ್ಲಿ ಸಂಶೋಧನೆಗಾಗಿ ಪ್ರಾಯೋಗಿಕ ಅನುಷ್ಟಾನ ಮಾಡಲಾಗಿದ್ದು, ಅದರಲ್ಲಿ ಯಶಸ್ಸು ಕಂಡಿದ್ದೇವೆ ಎಂದು ವಿವರಿಸಿದರು.

ಉಷಾ ನರ್ಸಿಂಗ್‌ ಹೋಂ ಫ್ಲೈ ಓವರ್‌ ನಂತರ ಸಿಗುವ ಸವಳಂಗ ಮುಖ್ಯ ರಸ್ತೆಯಲ್ಲಿ ಸಂಸದರಾದ ಬಿ.ವೈ.ರಾಘವೇಂದ್ರ ಹಾಗೂ ಹೆಚ್ಚುವರಿ ಜಿಲ್ಲಾ ಪೋಲೀಸ್‌ ವರಿಷ್ಟಾಧಿಕಾರಿ ಅನಿಲ್‌ ಕುಮಾರ್‌ ಭೂಮರೆಡ್ಡಿ ಅವರು ರಸ್ತೆಯ ಗುಂಡಿಗಳಿಗೆ ಉತ್ಪನ್ನಗಳನ್ನು ಹಾಕಿ ಪರಿಶೀಲಿಸಿದರು.

ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್‌, ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.‌ನಾರಾಯಣರಾವ್‌, ಉಪಾಧ್ಯಕ್ಷರಾದ ಸಿ.ಆರ್‌.ನಾಗರಾಜ, ಕಾರ್ಯದರ್ಶಿ ಎಸ್.‌ಎನ್.‌ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ,‌ ಹೆಚ್.ಸಿ.ಶಿವಕುಮಾರ್‌, ಮಧುರಾವ್‌, ಸೀತಾಲಕ್ಷ್ಮೀ, ಅನಂತದತ್ತಾ, ಸುಧೀರ್‌, ಜೆ.ಎನ್‌.ಎನ್.‌ಸಿ.ಇ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌, ಡೀನ್‌ಗಳಾದ ಡಾ.ಪಿ.ಮಂಜುನಾಥ, ಡಾ.ಎಸ್.ವಿ.ಸತ್ಯನಾರಾಯಣ, ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥರಾದ ಡಾ.ಕಾರ್ತಿಕ್‌, ಸಹಾಯಕ ಪ್ರಾಧ್ಯಾಪಕ ಅರುಣ್‌, ಡಾ.ಎಸ್.ಟಿ.ಅರವಿಂದ್‌, ಹೆಚ್.ಎಂ.ಮಲ್ಲಪ್ಪ, ಕಿಶೋರ್‌ ಶೀರನಾಳಿ, ರವೀಂದ್ರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಪತ್ತೆ

Next Post

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL