Wednesday, June 11, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಯುವ ಸಮೂಹ ಚಿತ್ತ ಹರಿಸಿ: ಎಎಸ್‌ಪಿ ಅನಿಲ್ ಕುಮಾರ್ ಭೂಮರೆಡ್ಡಿ ಕಿವಿಮಾತು

ಎಸ್.ಆರ್.ಎನ್.ಎಂ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಾಗಾರ

December 14, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯುವ ಸಮೂಹ ವಿಷಯಾಂತರದ ಆಕರ್ಷಣೆಗಳಿಗೆ ಒಳಗಾಗದೆಯೇ ವಿದ್ಯಾರ್ಜನೆ‌ ಒಂದೇ ಮೂಲಭೂತ ಕರ್ತವ್ಯವಾಗಬೇಕು ಎಂದು ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ASP Anilkumar Bhoomareddy ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನಲ್ಲಿ ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಕೋಟೆ ಪೋಲೀಸ್ ಠಾಣೆ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆ ಹಾಗೂ ಕಾನೂನು ಅರಿವು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಯುವ ಸಮೂಹದಲ್ಲಿನ ಸಕಾರಾತ್ಮಕ ಯೋಚನೆಗಳು ಕಲುಷಿತಗೊಂಡಾಗ ದೇಶ ಅಧೋಗತಿಗೆ ತಲುಪುತ್ತದೆ. ಕೋಮುಗಲಭೆಗಳಿಗೆ ಯುವ ಸಮೂಹದ ಶಕ್ತಿಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಇಂತಹ ಅಂಧತ್ವಕ್ಕೆ ಒಳಗಾಗದೇ ಸಮಾಜಮುಖಿ ಸಕಾರಾತ್ಮಕ ಆಲೊಚನೆಗಳತ್ತ ಚಿತ್ತ ಹರಿಸಿ ಎಂದು ಕಿವಿಮಾತು ಹೇಳಿದರು.

ಸಮಾಜದಲ್ಲಿ ಅಪರಾಧವೆಂಬುದು ಸಹಜ. ಒಳಿತು ಕೆಡುಕುಗಳ ಭಿನ್ನತೆಯಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂಬುದು ನಮ್ಮ ಜವಬ್ದಾರಿಯಾಗಿದೆ.‌ ಬಿಸಿ ರಕ್ತದ ವಯಸ್ಸಿನಲ್ಲಿ ನಮ್ಮ ಶಕ್ತಿ ಸಾಮರ್ಥ್ಯಗಳನ್ನು ಸಕಾರಾತ್ಮಕವಾಗಿ ಬಳಸಿ. ವಿಷಯಾಂತರದ ಆಕರ್ಷಣೆಗಳೇ ಕಾನೂನು ಸಂಘರ್ಷಗಳ ಪ್ರಾರಂಭಿಕ ಹಂತ ಎಂದು ಹೇಳಿದರು.

ಮೂಲಭೂತ ಹಕ್ಕುಗಳನ್ನು ಬಳಸಿಕೊಳ್ಳುವಾಗ ಮೂಲಭೂತ ಕರ್ತವ್ಯಗಳು ನಮ್ಮ ಮುಂದಿದೆ ಎನ್ನುವುದನ್ನು ಸದಾ ನೆನಪಿನಲ್ಲಿಡಿ. ವ್ಯಕ್ತಿತ್ವ ವಿಕಸನಕ್ಕೆ ಸಾಧ್ಯವಾಗುವ ಪ್ರತಿಯೊಂದು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ. ಸೈಬರ್ ಕ್ರೈಮ್ ಪ್ರತಿದಿನದ ದೈನಂದಿನ ಪ್ರಕರಣಗಳಾಗಿದ್ದು, ತಂತ್ರಜ್ಞಾನವನ್ನು ಸಮಾಜದ ಅಭ್ಯುದಯಕ್ಕೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಮರ್ಪಕವಾಗಿ ಬಳಸಿಕೊಳ್ಳಿ. ಮೊಬೈಲ್ ನಲ್ಲಿಯೆ ಬದುಕಿನ ಅಮೂಲ್ಯವಾದ ಕ್ಷಣಗಳನ್ನು ಕಳೆಯದಿರಿ.

Also read: ಡಿ.16ರಂದು ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ವಿಶಿಷ್ಟ ಕಾರ್ಯಕ್ರಮ

ನಮಗೆ ಬರುವ ಒಟಿಪಿಗಳು ಅತ್ಯಂತ ಗೌಪ್ಯವಾದ ವಿಚಾರವಾಗಿದೆ. ಸೈಬರ್ ಅಪರಾಧಗಳನ್ನು ತಡೆಯಲು ಬಳಕೆದಾರರಾದ ನಮ್ಮಿಂದಲೇ ಸಾಧ್ಯವಿದೆ. ಯಾವುದೇ ಆಕರ್ಷಕ ಕರೆಗಳಿಗೆ ಮಾರುಹೋಗದೆ ವಿಮರ್ಶಿಸಲು ಪ್ರಾರಂಭಿಸಿ. ಇದರಿಂದ ಅನೇಕ ಅಪರಾಧಗಳನ್ನು ತಡೆಯಬಹುದು. ಆಧುನಿಕತೆಯಿಂದ ಎಲ್ಲವೂ ಸಾಧ್ಯ ಎನ್ನುವ ಭ್ರಮೆ ಬೇಡ.

ಪ್ರತಿಯೊಂದು ಪೋಲೀಸ್ ಠಾಣೆಯ ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ನಿರ್ವಹಣೆ ಕುರಿತ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಯಾವುದೇ ಪೋಲೀಸ್ ಠಾಣೆಯಲ್ಲಿ ಸೈಬರ್ ಅಪರಾಧಗಳ ಕುರಿತಾಗಿ ದೂರು ದಾಖಲಿಸಬಹುದಾಗಿದೆ. ವಾಹನಗಳನ್ನು ಚಲಾಯಿಸುವಾಗ ಜವಾಬ್ದಾರಿಯಿಂದ ವರ್ತಿಸಿ. ರಸ್ತೆ ಪ್ರತಿಯೊಬ್ಬ ಜನ ಸಾಮಾನ್ಯರ ಆಸ್ತಿ‌. ರಸ್ತೆಯ ಸ್ವಚ್ಚತೆ, ಬಳಕೆ, ಕಾನೂನಿನಾತ್ಮಕ ಉಲ್ಲಂಘನೆಗಳ ಅರಿವು ಅತ್ಯಗತ್ಯ. ಡಿಜಿಲಾಕರ್ ಮೂಲಕ ವಾಹನ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಿಕೊಳ್ಳಿ.
ಇಂದಿನ ಯುವ ಸಮೂಹದಲ್ಲಿ ಸೌಜನ್ಯತೆಯ ಕೊರತೆಯಿದೆ. ಯಾರು ನಮ್ಮನ್ನು ಪ್ರಶ್ನಿಸಬಾರದು ಎಂಬ ನಿರಂಕುಶಮತಿತ್ವ ಬೇಡ. ಇಂತಹ ಹಠಮಾರಿ ಧೋರಣೆಗಳು ನಮ್ಮ ವ್ಯಕ್ತಿತ್ವಗಳ ಉನ್ನತಿಯ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರಲಿದೆ. ಕಾನೂನಿನ ಅಗತ್ಯವಾದ ಅರಿವು ಪಡೆದು ಜವಾಬ್ದಾರಿಯುತ ಪ್ರಜೆಗಳಾಗಿ ವರ್ತಿಸಿ ಎಂದು ಕಿವಿಮಾತು ಹೇಳಿದರು.
Kalahamsa Infotech private limited
ಕಾರ್ಯಕ್ರಮದಲ್ಲಿ ಕೋಟೆ ಪೋಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕುಮಾರ್ ಹಾಗೂ ಸಿಬ್ಬಂದಿ ರವಿಕುಮಾರ್ ಕರ್ನಾಟಕ ಸ್ಟೇಟ್ ಪೋಲೀಸ್ ಆ್ಯಪ್ ಹಾಗೂ ವಿವಿಧ ಪ್ರಕರಣಗಳ ಕುರಿತು ಮಾಹಿತಿ ನೀಡಿದರು. ಎನ್ಇಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಉಪನ್ಯಾಸಕರಾದ ಲಕ್ಷ್ಮಣ.ಕೆ ಸೇರಿದಂತೆ ಕೋಟೆ ಪೋಲೀಸ್ ಠಾಣೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
 

Tags: ASP Anilkumar BhoomareddyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ
Previous Post

ಡಿ.16ರಂದು ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ ವಿಶಿಷ್ಟ ಕಾರ್ಯಕ್ರಮ

Next Post

ಡಿ.15ರಂದು ಇ-ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ವಿಚಾರ ಗೋಷ್ಠಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಿ.15ರಂದು ಇ-ತ್ಯಾಜ್ಯ ವಿಲೇವಾರಿ ಮತ್ತು ಸಂಸ್ಕರಣೆ ವಿಚಾರ ಗೋಷ್ಠಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಾಲ್ನಡಿಗೆ ಗಸ್ತು

June 11, 2025

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

June 11, 2025

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025

ವಾಸವಿ ಮಹಿಳಾ ಸಂಘ ಸುವರ್ಣ ಮಹೋತ್ಸವ | ಜೂ.11-12ರಂದು ‘ಸಿಂಧೂರ ಭಜನಾರ್ಚನೆ’

June 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಕಾಲ್ನಡಿಗೆ ಗಸ್ತು

June 11, 2025

ಆಸ್ಟ್ರೇಲಿಯಾದ ಚಾರ್ಲ್ಸ್ ಡಾರ್ವಿನ್ ವಿವಿ ಸಮ್ಮೇಳನ ಸಂಯೋಜಕರಾಗಿ ಡಾ. ಮೀರಾಮಣಿ ಆಯ್ಕೆ

June 11, 2025

ತಮ್ಮನ್ನು ತಾವು ರಾಷ್ಟ್ರಕ್ಕೆ ಸಮರ್ಪಿಸಿಕೊಳ್ಳುವ ವ್ಯಕ್ತಿತ್ವ ಈಶ್ವರಪ್ಪನವರದ್ದು: ರಾಮಣ್ಣ ಬಣ್ಣನೆ

June 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!