No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣ | ದುರ್ಬಲ ವರ್ಗಗಗಳಿಗೆ ಅನ್ಯಾಯ | ಬಿವೈಆರ್

kalpa News by kalpa News
September 13, 2025
in ಶಿವಮೊಗ್ಗ
0
ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣದ ವಿಚಾರದಲ್ಲಿ ದುರ್ಬಲ ವರ್ಗಗಗಳಿಗೆ ಅನ್ಯಾಯವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಆರೋಪಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘ, ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ನಿನ್ನೆಯಿಂದ ಆರಂಭವಾದ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸ್ವಾಂತಂತ್ರ್ಯ ಬಂದ ಮೇಲೆ ಹಾವನೂರು ವರದಿ, ಸದಾಶಿವ ವರದಿ, ಮಾಧುಸ್ವಾಮಿ ಸಮಿತಿಯ ಶಿಫಾರಸು, ಕಾಂತರಾಜ್ ವರದಿ, ನಾಗಮೋಹನ್ ದಾಸ್ ವರದಿ ಎಲ್ಲವನ್ನೂ ಸರ್ಕಾರಗಳು ಇನ್ನೂ ಅನುಷ್ಠಾನಕ್ಕೆ ತಂದಿಲ್ಲ. 150 ಕೋಟಿ ರೂ. ತೆರಿಗೆ ಹಣವನ್ನು ಖರ್ಚು ಮಾಡಿ ಕಾಂತರಾಜ್ ವರದಿ ನೀಡಿದರೂ ಅದನ್ನು ಕೂಡ ಜಾರಿಗೊಳಿಸಿಲ್ಲ. ಈಗ ನಾಗಮೋಹನ್ ದಾಸ್ ವರದಿಯನ್ನು ಕೂಡ ಯಥಾವತ್ ಜಾರಿಗೊಳಿಸದೇ ಒಳಮೀಸಲಾತಿಯನ್ನು 4 ಭಾಗಗಳಾಗಿ ವಿಂಗಡಿಸಿ ನೀಡಿದ ವರದಿಯನ್ನು ೩ಕ್ಕೆ ಸೀಮಿತಗೊಳಿಸಿ ಬಂಜಾರರಿಗೆ ಬಿಜೆಪಿ ಸರ್ಕಾರ ನೀಡಿದ ಶೇ. 4.5ರಷ್ಟು ಮೀಸಲಾತಿಯನ್ನು 5.5ರಷ್ಟು ಹೆಚ್ಚಿಸಿ ಅವರೊಂದಿಗೆ ಈಗ 63 ಜಾತಿಗಳನ್ನು ಸೇರಿಸಿ ಅಲೆಮಾರಿ ಜಾತಿಗೆ ಮೀಸಲಿಟ್ಟ ಶೇ. 1ರಷ್ಟು ರದ್ದು ಮಾಡಿ ಅದನ್ನೂ ಇವರೊಂದಿಗೆ ಸೇರಿಸಿ ಎಲ್ಲ ಹಿಂದುಳಿದ ಮತ್ತು ದಲಿತರಿಗೆ ಈ ಸರ್ಕಾರ ಅನ್ಯಾಯ ಮಾಡಿದೆ ಎಂದು ದೂರಿದರು.

ವ್ಯಾಪಕ ಪ್ರತಿಭಟನೆ ಬಳಿಕ ಈಗ ಮತ್ತೆ 450 ಕೋಟಿ ರೂ. ವೆಚ್ಚದಲ್ಲಿ ಆರ್ಥಿಕ ಮತ್ತು ಸಾಮಾಜಿಕ ಜಾತಿಗಣತಿಗೆ ಹೊರಟಿದ್ದಾರೆ. ಕೇಂದ್ರ ಸರ್ಕಾರ ಕೂಡ ಮುಂದಿನ ತಿಂಗಳಿಂದ ಜನಗಣತಿಗೆ ಆದೇಶ ನೀಡಿದೆ. ವಿಪರ್ಯಾಸ ಎಂದರೆ ಎಲ್ಲೋ ಒಂದು ಕಡೆ ಕಾಣದ ಕೈಗಳು ಲಂಬಾಣಿ ಜನಾಂಗವನ್ನು ಒಡೆಯುವ ಷಡ್ಯಂತ್ರ ಮಾಡುತ್ತಿವೆ. ಲಂಬಾಣಿ ಕ್ರಿಶ್ಚಿಯನ್, ಭೋವಿ ಕ್ರಿಶ್ಚಿಯನ್ ಎಂದು ಹಲವಾರು ಉಪಪಂಗಡಗಳಿಗೆ ಕ್ರಿಶ್ಚಿಯನ್ ಜಾತಿಯನ್ನು ಲಗತ್ತಿಸಿ ಹಿಂದುಗಳನ್ನು ಒಡೆಯುವ ಕುತಂತ್ರ ಮಾಡುತ್ತಿದೆ. ಇದರಿಂದ ಒಟ್ಟಾರೆಯಾಗಿ ಆ ಜಾತಿಯ ಜನಸಂಖ್ಯೆ ಕಡಿಮೆ ನಮೂದು ಆಗುವುದರಿಂದ ಅವರಿಗೆ ಸಿಗಬೇಕಾದ ಶೇಕಡವಾರು ಮೀಸಲಾತಿಯಲ್ಲಿ ಕಡಿಮೆಯಾಗಿ ವಂಚಿತರಾಗುತ್ತಾರೆ ಎಂದರು.
ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದಾಗ ಲಂಬಾಣಿ ತಾಂಡಾ ಅಭಿವೃದ್ಧಿ ನಿಗಮ ಸ್ಥಾಪಿಸಿ ನೂರಾರು ಕೋಟಿ ರೂ. ಅನುದಾನ ನೀಡಿ ಸರ್ಕಾರದ ಹಲವು ಪ್ರಮುಖ ಹುದ್ದೆಗಳನ್ನು ಕೂಡ ಈ ಸಮಾಜಕ್ಕೆ ನೀಡಿದ್ದರು. ಸೇವಾಲಾಲ್ ಜನ್ಮಸ್ಥಳ ಅಭಿವೃದ್ಧಿಪಡಿಸಿದ್ದರು. ಈಗ ಆ ಜಾಗಕ್ಕೆ ರೈಲು ಕೂಡ ನಿಲುಗಡೆಯಾಗಿ ದೊಡ್ಡ ಪ್ರವಾಸಿತಾಣವಾಗಲಿದೆ. ಮಹಾರಾಷ್ಟ್ರದ ಸೇವಾಲಾಲ್ ಗೆ ಸಂಬಂಧಿಸಿದ ಬಾಯಗಢ ಅಭಿವೃದ್ಧಿಗೆ ೪೫೦ ಕೋಟಿ ರೂ.ಗಳನ್ನು ಮೋದಿ ಸರ್ಕಾರ ನೀಡಿದೆ. ಸದಾಕಾಲ ಬಿ.ಎಸ್.ವೈ. ಕುಟುಂಬ ನಿಮ್ಮ ಜೊತೆಗಿದೆ. ನಿಮಗಾದ ಅನ್ಯಾಯದ ವಿರುದ್ಧ ಧ್ವನಿ ಎತ್ತುತ್ತೇವೆ ಎಂದರು.

ರಾಜ್ಯದ ನ್ಯಾಯಯುತ ಪಾಲನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ, ಸಂಸದರು ಬಾಯಿ ಬಿಡುತ್ತಿಲ್ಲ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಾಘವೇಂದ್ರ, ಕೇಂದ್ರದಿಂದ ನೀಡಿದ ಹಲವು ಅನುದಾನಗಳು ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನ ನೀಡದೇ ಇರುವುದರಿಂದ ವಾಪಸ್ ಹೋಗಿದೆ. ಸರಿಯಾದ ತಾಂತ್ರಿಕ ಯೋಜನೆ ರೂಪುರೇಷೆಗಳನ್ನು ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಕೇಂದ್ರಕ್ಕೆ ಒದಗಿಸದೇ ಇರುವುದರಿಂದ ಹಣ ಬಿಡುಗಡೆಯಲ್ಲಿ ವ್ಯತ್ಯಯವಾಗಿದೆ. ಇದಕ್ಕೆ ಪೂರಕ ದಾಖಲೆಗಳನ್ನು ನಾನು ಬಿಡುಗಡೆ ಮಾಡಲು ಸಿದ್ಧ. ಮತ್ತು ಈ ಬಗ್ಗೆ ಇದೇ ಡಿಸಿಎಂ ಜೊತೆಗೆ ದೆಹಲಿ ಕರ್ನಾಟಕ ಭವನದಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ರಾಜ್ಯ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ನಿರಂತರವಾಗಿ ವಿಮಾನಗಳು ರದ್ದಾಗುತ್ತಿರುವುದರಕ್ಕೆ ವಿಷಾದ ವ್ಯಕ್ತಪಡಿಸಿದ ಅವರು, ಇದಕ್ಕೂ ಕೂಡ ವಿಮಾನ ನಿಲ್ದಾಣದ ಮಾಲೀಕತ್ವ ರಾಜ್ಯ ಸರ್ಕಾರದ ವಶದಲ್ಲಿರುವುದೇ ಕಾರಣವಾಗಿ ನೈಟ್ ಲ್ಯಾಂಡಿಂಗ್ ಸಲಕರಣೆಗಳು ಬಂದು ಎರಡು ತಿಂಗಳಾಗಿದ್ದರೂ ಕೇವಲ 2 ಕೋಟಿ ರೂ. ಖರ್ಚು ಮಾಡಲು ರಾಜ್ಯ ಸರ್ಕಾರ ಮುಂದಾಗದೇ ಇರುವುದು ಇದಕ್ಕೆ ಕಾರಣ. ನಾವು ಶಿವಮೊಗ್ಗ ವಿಮಾನ ನಿಲ್ದಾಣವನ್ನು ರಾಜ್ಯದ ಸುಪರ್ದಿಗೆ ತೆಗೆದುಕೊಂಡಿದ್ದೇ ತಪ್ಪು ಹೆಜ್ಜೆ ಇಟ್ಟ ಹಾಗೆ ಆಗಿದೆ ಎಂದರು.

ಮದ್ದೂರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ತುಷ್ಠೀಕರಣ ನೀತಿ ಮತ್ತೊಮ್ಮೆ ಜಗಜ್ಜಾಹೀರಾಗಿದೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ಬಂಜಾರ ಸಮುದಾಯದ ಗುರುಗಳಾದ ಸೈನಾ ಭಗತ್ ಮಹಾರಾಜ್, ಕೆಜೆ. ನಾಗೇಶ್ ನಾಯ್ಕ್, ಬಸವರಾಜ್ ನಾಯ್ಕ್, ನಾನ್ಯಾನಾಯ್ಕ್, ಜಗದೀಶ್ ನಾಯ್ಕ್, ನಾಗರಾಜ್ ನಾಯ್ಕ್, ಗಂಗಾನಾಯ್ಕ್, ರಮೇಶ್ ನಾಯ್ಕ್, ಶಿವಾನಾಯ್ಕ್, ಗಿರೀಶ್ ನಾಯ್ಕ್, ಆನಂದ್ ನಾಯ್ಕ್, ಭದ್ರಾವತಿ ಹಾಗೂ ಶಿವಮೊಗ್ಗ ತಾಲೂಕಿನ ೧೦ಕ್ಕೂ ಅಧಿಕ ತಾಂಡಾಗಳ ಪ್ರಮುಖರು ಇಂದಿನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೌರ ಕಾರ್ಮಿಕರ ದಿನಾಚರಣೆ | ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚನ್ನಬಸಪ್ಪ ಚಾಲನೆ

Next Post

ವಿಷಯ ಕಲಿಯುವಾಗ ಅದರ ವಾಸ್ತವ ಬಳಕೆ ಅರಿಯಿರಿ | ಚೈತ್ರಾ ರಾವ್ ಸಲಹೆ

kalpa News

kalpa News

Next Post
ವಿಷಯ ಕಲಿಯುವಾಗ ಅದರ ವಾಸ್ತವ ಬಳಕೆ ಅರಿಯಿರಿ | ಚೈತ್ರಾ ರಾವ್ ಸಲಹೆ

ವಿಷಯ ಕಲಿಯುವಾಗ ಅದರ ವಾಸ್ತವ ಬಳಕೆ ಅರಿಯಿರಿ | ಚೈತ್ರಾ ರಾವ್ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL