No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Sunday, March 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿ20 ಶೃಂಗಸಭೆ ಮೂಲಕ ಜಗತ್ತಿಗೆ ವರ್ತಮಾನದ ನಾಯಕತ್ವ ಪರಿಚಯ: ಸಿ.ಟಿ ರವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2023
in ಶಿವಮೊಗ್ಗ
0
ಶಾಸಕ ಸಿ.ಟಿ. ರವಿ ಕಾರು ಅಪಘಾತ: ಇಬ್ಬರ ಸಾವು, ನಾಲ್ವರಿಗೆ ಗಾಯ

File image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಭಾರತ ಜಿ- 20 ರಾಷ್ಟ್ರಗಳ ಶೃಂಗಸಭೆಯ G20 Summit ಅಧ್ಯಕ್ಷತೆ ವಹಿಸಿ ತನ್ನ ಪ್ರಾಚೀನತೆ ಪ್ರದರ್ಶನ ಮಾಡಿದೆ. ಅಷ್ಟೇ ಅಲ್ಲ, ವರ್ತಮಾನದ ನಾಯಕತ್ವವನ್ನು ಜಗತ್ತಿಗೆ ಪರಿಚಯಿಸಿದೆ. ಚರಿತ್ರೆ ತಿಳಿಸುವುದಷ್ಟೇ ಅಲ್ಲ. ವಿಶ್ವದ ಭವಿಷ್ಯದ ಭೂಮಿಕೆ ಏನಿರಬೇಕೆಂದು ಪ್ರಸ್ತಾವನೆ ಹಾಕಿಕೊಟ್ಟಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ CTRavi ಹೇಳಿದರು.

ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಜಗತ್ತಿನ ಅತ್ಯಂತ ಬಲಾಢ್ಯ ರಾಷ್ಟ್ರಗಳು ಅಂತ ಪರಿಭಾವಿಸುವ ರಾಷ್ಟ್ರಗಳ ನಾಯಕರು ಕೂಡ ಇದೀಗ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ನಾಯಕತ್ವವನ್ನು ಮುಕ್ತ ಕಂಠದಿಂದ ಹೊಗಳಿವೆ.‌ ತನ್ಮೂಲಕ ಪ್ರಭಾವಿ ನಾಯಕತ್ವವನ್ನು ಪ್ರಧಾನಿ ಮೋದಿ ತೋರಿಸಿಕೊಟ್ಟಿದ್ದಾರೆ. ದೇಶವೇ ಹೆಮ್ಮೆಪಡುವ ರೀತಿಯಲ್ಲಿ ನಮ್ಮ ಪ್ರಧಾನಿ ಭಾರತವನ್ನು ಮುನ್ನಡೆಸುತ್ತಿದ್ದಾರೆ ಎಂದರು.

ಯಾರು ಭಾರತವನ್ನು ನಮ್ಮದು ಅಂತ ಭಾವಿಸುತ್ತಾರೆ. ನಾವು ಭಾರತೀಯರು ಅಂತ ತಿಳಿದುಕೊಳ್ಳುತ್ತಾರೆ. ಭಾರತದ ಉನ್ನತಿಯನ್ನು ನೋಡಿ ಸಂಭ್ರಮಿಸುತ್ತಾರೋ ಅವರೆಲ್ಲರಿಗೂ ಸಂಭ್ರಮ ಆಗಿದೆ ಎಂದು ಭಾವಿಸುತ್ತೇನೆ. ಕೆಲವರಿಗೆ ಭಾರತೀಯತೆಯ ಬಗ್ಗೆ ಅನುಮಾನ ಇದ್ದಾಗ ಸಂಕಟ ಆಗಿರಬಹುದು. ಯಾರಿಗೆ ಭಾರತೀಯತೆಯ ಬಗ್ಗೆ ಅನುಮಾನ ಇರುವುದಿಲ್ಲವೋ ಅಂತವರು ಆಸ್ಟ್ರೇಲಿಯ ಪ್ರಧಾನಿ ನಮ್ಮ ಪ್ರಧಾನಿಗೆ ಬಾಸ್ ಅಂದಾಗ ಸಂಭ್ರಮಿಸುತ್ತಾರೆ. ಸಣ್ಣ ಮನಸ್ಸು ಹೊಂದಿದ್ದವರಿಗೆ ಸಂಕಟವೂ ಆಗಿರಬಹುದು ಎಂದು ಲೇವಡಿ ಮಾಡಿದರು.
ಮೋದಿ ಪ್ರಧಾನಿ ಆಗುವ ಮೊದಲು ಜಗತ್ತನಲ್ಲಿ ಹತ್ತನೇ ಆರ್ಥಿಕ ಶಕ್ತಿಯಾಗಿತ್ತು ಭಾರತ. ಆದರೆ ಈಗ ಜಗತ್ತಿನ ಐದನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಯಾರು ತಮ್ಮನ್ನು ತಾವು ಸೂರ್ಯ ಮುಳುಗಿದರೆ ಸಾಮ್ರಾಜ್ಯ ಅಂತ ಭಾವಿಸಿದ್ದಾರೋ, ಎರಡು ಶತಮಾನಕ್ಕೂ ಹೆಚ್ಚು ಕಾಲ ಇಲ್ಲಿ ಆಡಳಿತ ನಡೆಸಿದ್ದರೋ ಅವರನ್ನು ಹಿಂದಿಕ್ಕಿ ನಾವು ಐದನೇ ಸ್ಥಾನಕ್ಕೆ ಬಂದಿದ್ದೇವೆ. ‌ಭಾರತ ತನ್ನ ಜಾಗತಿಕ ಶಕ್ತಿಯನ್ನು ಗುಲಾಮಿ ಮಾನಸಿಕತೆಯಿಂದ ಹೊರಬಂದು ತೋರಿಸಿಕೊಟ್ಟಿದೆ ಎಂದರು.

Also read: Modi govt to take stern action against terrorists of hiding in PoK, to confiscate their properties in J&K

ಇದನ್ನು ನೋಡಿ ಸಹಿಸದ ಕೆಲವರು ಹಿಂದಕ್ಕೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆ ಜನರಿಗೆ ಮೆಕಾಲೆಯೇ ಅತ್ಯಂತ ದೊಡ್ಡ ಶಿಕ್ಷಣ ತಜ್ಞ ಅಂತ ಕಾಣುತ್ತಾನೆ. ಭಾರತದ ಹೆಸರಿನ ಬಗ್ಗೆ ಅನುಮಾನ ಅಪನಂಬಿಕೆ ವ್ಯಕ್ತಪಡಿಸುತ್ತಾರೆ. ಇದನ್ನು ನೋಡಿದಾಗ ಅವರಿನ್ನೂ ಗುಲಾಮಿ ಮಾನಸಿಕತೆಯಿಂದ ಹೊರ ಬಂದಿಲ್ಲವಲ್ಲ ಎಂದು ದುಃಖ ಆಗುತ್ತದೆ. ಅವರನ್ನು ಅಂತಹ ಮಾನಸಿಕತೆಯಿಂದ ಹೊರ ತರುವ ಜವಾಬ್ದಾರಿಯೂ ನಮಗೆ ಇದೆ. ಅಂತಹ ಗುಲಾಮಿ ಮಾನಸಿಕತೆ ಇದ್ದರೆ ಅವರಿಗೂ ಒಳ್ಳೆಯದಲ್ಲ, ದೇಶಕ್ಕೂ ಒಳ್ಳೆಯದಲ್ಲ ಎಂದು ಹೇಳಿದರು.
ಅದರಿಂದ ಹೊರ ತರುವುದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಎಪಿ) ಜಾರಿ ಮಾಡಲಾಗಿತ್ತು. ಆದರೆ ಅದೇ ಗುಲಾಮಿ ಮಾನಸಿಕತೆ ಇರಬೇಕು ಎಂಬ ಇಚ್ಛೆ ಕೆಲವರಿಗೆ ಇದೆ. ಅಂಥವರಿಗೆ ಭಾರತ ಅಂದಾಕ್ಷಣ ದಿಗಿಲು ಶುರುವಾಗಿದೆ ಎಂದು ಹೆಸರು ಪ್ರಸ್ತಾಪಿಸದೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ವ್ಯಕ್ತಿಗೆ ಒಂದು ಆತ್ಮವಿದೆ. ದೇಶಕ್ಕೂ ಅಸ್ಮಿತೆ ಎಂಬ ಒಂದು ಆತ್ಮವಿದೆ. ಭಾರತೀಯತೆ ಈ ದೇಶದ ಆತ್ಮ. ನಿನ್ನೆ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ಅವರು ಒಂದು ಸಭೆ ಮಾಡಿದ್ದಾರೆ. ಸಮಾಜವಾದ, ಪಂಚೆ, ಕಾರು ಅಂತೆಲ್ಲ ಹೇಳಿದ್ದಾರೆ. ಹಿಂದುತ್ವವಾದಿ, ದಡ್ಡ ಅಂದ್ರೆ ಸಿಟಿ ರವಿ ಅಂತಾರೆ. ಆದರೆ ಹರಿಪ್ರಸಾದ್ ಪಂಚೆ ಅಂತ ಹೇಳಿದ್ದು ಯಾರಿಗೆ ಅಂತ ಗೊತ್ತಾಗಿಲ್ಲ. ವಾಚು ಯಾರಿಗೆ ಸೇರಿದ್ದು ? ಸಮಾಜವಾದ ಹಿನ್ನೆಲೆಯಿಂದ ಬಂದವರು ಯಾರು? ಅಂಥವರ ಬಗ್ಗೆ ಉಲ್ಲೇಖ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
ಭೂಕಂಪನದ ಮುನ್ಸೂಚನೆ ಅಂತ ಕಾಣಿಸುತ್ತಿದೆ.‌ ಸರ್ಕಾರದ ಒಳಗೆಯೇ ಭೂಕಂಪನದ ಕೇಂದ್ರಗಳಿವೆ ಅನ್ನುವ ಮುನ್ಸೂಚನೆಯನ್ನು ಅವರು ತೋರಿಸಿದ್ದಾರೆ. ಐದು ವರ್ಷ ಒಳ್ಳೆಯ ಆಡಳಿತ ನೀಡುವ ಜವಾಬ್ದಾರಿ ಅವರಿಗೆ ಇದೆ. ವಿದ್ಯುತ್ ಬಿಲ್ ಏರಿಸಿದರು, ಮುದ್ರಾಂಕ ಶುಲ್ಕ, ಬಸ್ ದರ ಪ್ರಯಾಣ, ಎಣ್ಣೆ ದರ, ಅಬಕಾರಿ ಶುಲ್ಕ ಏರಿಸಿದ್ದಾರೆ. ಇದೀಗ ಸಿಂಗಲ್ ಫೇಸ್ ಕರೆಂಟೂ ಬರ್ತಿಲ್ಲ. ಇನ್ನು ಸ್ವಲ್ಪ ದಿನ ಹೋದರೆ, ಕರೆಂಟ್ ಇಲ್ಲ, ಕರೆಂಟ್ ಫ್ರೀನೂ ಇಲ್ಲ ಎಂದು ವ್ಯಂಗ್ಯವಾಡಿದರು.

ನಾನು ಪಕ್ಷದ ಕಾರ್ಯಕರ್ತರ ಕ್ಷಮೆಯಾಚನೆ ಮಾಡಲು ಬಯಸುತ್ತೇನೆ. ನನಗೆ ಪಕ್ಷದ ಜವಾಬ್ದಾರಿ ಕೊಟ್ಟಿದ್ದರು. ಪಕ್ಷವನ್ನು ಗೆಲ್ಲಿಸಿ ತರಬೇಕಾದ ಹೊಣೆಗಾರಿಕೆಯಲ್ಲಿ ನಂದು ಹೆಚ್ಚಿನ ಪಾಲಿತ್ತು. ಆದರೆ ನಿಮ್ಮೆಲ್ಲ ಪ್ರಯತ್ನಗಳ  ನಡುವೆ ಬಿಜೆಪಿ ಕಾರ್ಯಕರ್ತರಿಗೆ ನಿರಾಸೆ ಉಂಟು ಮಾಡಿದ್ದೇವೆ. ಪಕ್ಷವನ್ನು ಗೆಲ್ಲಿಸುವುದಕ್ಕೆ ಆಗಲಿಗಲ್ಲ. ನಾನು ಕೂಡ ಗೆಲ್ಲಲು ಸಾಧ್ಯ ಆಗಿಲ್ಲ. ಕಾರಣ ಏನೇ ಇರಬಹುದು, ಆ್ರೆ ಹೊಣೆ ನಮ್ಮದೆ. ಆ ಹೊಣೆಯನ್ನು ಸಮರ್ಥವಾಗಿ ನಿಭಾಯಿಸಲು ಆಗದೇ ಇರುವ ಕಾರಣ ನಿಮ್ಮಲ್ಲಿ ಕ್ಷೇಮೆ ಕೇಳುತ್ತೇನೆ ಎಂದರು.
ಚುನಾವಣೆಯಲ್ಲಿ ಸೋಲು ಗೆಲುವು ಇದ್ದಿದ್ದೆ. ಬಿಜೆಪಿಗೆ ಸೋಲು ಹೊಸತೇನಲ್ಲ. ಕಳೆದ ಚುನಾವಣೆಯಲ್ಲಿ ಉಂಟಾದ ಸೋಲಿನಿಂದ ಯಾರು ಧೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ. ಪಕ್ಷದ ಸಂಘಟನೆ ಬೇರು ಮಟ್ಟದಿಂದ ಸದೃಢವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಿಂದ ಹಿಡಿದು ಎಲ್ಲ ಚುನಾವಣೆಗಳಲ್ಲೂ ಬಿಜೆಪಿಯನ್ನು ಅಧಿಕಾರಕ್ಕೆ ನಿಟ್ಟಿನಲ್ಲಿ ನಾವುಗಳೆಲ್ಲ ಪರಿಶ್ರಮ ಹಾಕಬೇಕಿದೆ ಎಂದರು.

ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ, ಜೂನ್‌ನಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ನಡೆಯುವ ಸಾಧ್ಯತೆ ಇದೆ. ಚುನಾವಣಾ ಸಂದರ್ಭದಲ್ಲಿ ಕಾರ್ಯಕರ್ತರು ಮೈಮರೆತರೆ ಅಧಿಕಾರವನ್ನು ಮಾತ್ರ ಕಳೆದುಕೊಳ್ಳುವುದಿಲ್ಲ, ಬದಲಾಗಿ ದೇಶದ ಅಖಂಡತೆಯನ್ನೂ ಕಳೆದುಕೊಳ್ಳುತ್ತೇವೆ ಎಂದು ಆತಂಕ ವ್ಯಕ್ತಪಡಿಸಿದರು.
ಚುನಾವಣಾ ಸಂದರ್ಭದಲ್ಲಿ ಸಮರೋಪಾದಿಯಲ್ಲಿ ಕೆಲಸ ಮಾಡಬೇಕಾಗುತ್ತದೆ. ನಾವೇ ಅಭ್ಯರ್ಥಿಗಳೆಂದು ಭಾವಿಸಿ ಕೆಲಸ ಮಾಡಿದಾಗ ಯಾರೇ ಆದರೂ ಗೆಲ್ಲುವುದಕ್ಕೆ ಸಾಧ್ಯವಿದೆ. ಹೆಚ್ಚಿನ ಸಂಖ್ಯೆಯನ್ನು ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ದೇಶವನ್ನು ಸಂಕಷ್ಟದಿಂದ ಪಾರು ಮಾಡಬೇಕಿದೆ ಎಂದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಈ ಬಾರಿ ಹಿಂದಿನ ದಾಖಲೆಗಳನ್ನೂ ಬದಿಗೆ ಸರಿಸುವುದರ ಮೂಲಕ ಭರ್ಜರಿ ಗೆಲುವು ಸಾಧಿಸಬೇಕಿದೆ ಎಂದು ಹೇಳಿದರು.

ಸಂಘಟನೆಯ ಧ್ವನಿ ಮತ್ತು ಸಿದ್ಧಾಂತ ಶಿಕ್ಷಕರ ಪರವಾಗಿದೆ. ವಿದ್ಯಾವಂತರನ್ನು ಸುಲಭವಾಗಿ ಒಲಿಸಿಕೊಳ್ಳುವುದಕ್ಕೆ ಆಗುವುದಿಲ್ಲ. ಆರು ಜಿಲ್ಲೆಗಳ ವ್ಯಾಪ್ತಿಗೆ ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಬರಲಿದ್ದು ಸಾಕಷ್ಟು ಶ್ರಮವನ್ನು ಈಗಿನಿಂದಲೇ ಹಾಕಬೇಕಿದೆ. ಡಿ.ಎಚ್. ಶಂಕರಮೂರ್ತಿ ಅವರು ಪದವೀಧರ ಕ್ಷೇತ್ರವನ್ನು 30 ವರ್ಷ ಪ್ರತಿನಿಧಿಸಿದ್ದರು. ಹಿಂದಿನ ದಾಖಲೆಗಳನ್ನು ಹಿಂದಿಕ್ಕಿ ಭರ್ಜರಿ ಗೆಲುವು ಸಾಧಿಸಬೇಕಿದೆ ಎಂದರು.

http://kalpa.news/wp-content/uploads/2023/05/VID-20230516-WA0005.mp4

ಮೇ ತಿಂಗಳಲ್ಲಿ ಲೋಕಸಭೆ, ತದನಂತರ ಕ್ಷೇತ್ರ ಮತ್ತು ಕ್ಷೇತ್ರಗಳಿಗೆ ಚುನಾವಣೆ ನಿಗದಿ ಆಗುವ ಸಾಧ್ಯತೆ ಇದೆ. ಆನ್‌ಲೈನ್ ನೋಂದಣಿಗೆ ಅವಕಾಶ ನೀಡಿದೆ. ಜತೆಗೆ ಆಫ್‌ಲೈನ್ ನೋಂದಣಿಗೆ ಹೆಚ್ಚು ಒತ್ತು ನೀಡಬೇಕಾಗುತ್ತದೆ ಎಂದು ಸಲಹೆ ನೀಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಬಿ.ವೈ. ವಿಜಯೇಂದ್ರ, ಆರಗ ಜ್ಞಾನೇಂದ್ರ, ಎಸ್.ಎನ್. ಚನ್ನಬಸಪ್ಪ, ವಿಧಾನಪರಿಷತ್ ಸದಸ್ಯರಾದ ಎಸ್ ರುದ್ರೇಗೌಡ, ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಮಾಜಿ ಸಚಿವ ಹರತಾಳು ಹಾಲಪ್ಪ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಎ‌.ಎನ್. ನಟರಾಜ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಿ.ಕೆ. ಶ್ರೀನಾಥ್, ಶಿವರಾಜ್, ನವೀನ್ ಹೆದ್ದೂರು ಸೇರಿದಂತೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Previous Post

Modi govt to take stern action against terrorists of hiding in PoK, to confiscate their properties in J&K

Next Post

ರಾಜ್ಯ ಕಾಂಗ್ರೆಸ್‌ನಲ್ಲಿ ಭೂಕಂಪದ ಮುನ್ಸೂಚನೆ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಶಾಕಿರಣ ಶಾಲೆ ಕಾಮಗಾರಿ ಕಳಪೆ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಿ: ಆರಗ ಜ್ಞಾನೇಂದ್ರ ಆಗ್ರಹ

ರಾಜ್ಯ ಕಾಂಗ್ರೆಸ್‌ನಲ್ಲಿ ಭೂಕಂಪದ ಮುನ್ಸೂಚನೆ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಲೇವಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL