ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆ.ಎಸ್. ಈಶ್ವರಪ್ಪನವರಿಗೆ #K S Eshwarappa ಕೇವಲ ಎರಡೇ ವಾರದಲ್ಲಿ ಏನಾಯಿತು? ಯಾಕೆ ಈ ಬದಲಾವಣೆಯಾಯಿತು ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಕುರಿತಂತೆ ಮಾತನಾಡಿದ ಅವರು, ಯಡಿಯೂರಪ್ಪನವರ #Yadiyurappa ಕುಟುಂಬ ಎಲ್ಲ ಸಮಾಜವನ್ನು ಸಮಾನವಾಗಿ ಕಂಡಿದೆ ಮತ್ತು ಕಾಣುತ್ತಿದೆ ಎಂದು ಕಳೆದ ಎರಡು ವಾರದ ಕೆಳಗೆ ಈಶ್ವರಪ್ಪನವರು ಶಿಕಾರಿಪುರಕ್ಕೆ ಬಂದಿದ್ದಾಗ ಹೇಳಿದ್ದರು ಎಂದರು.
Also read: ಡಿಮಾನೆಟೈಸೇಷನ್ ನಿಂದ ಲಾಭ ಆಗಿದ್ದು ಅಂಬಾನಿ-ಅದಾನಿಗೆ ಮಾತ್ರ: ಸಿಎಂ ಸಿದ್ದರಾಮಯ್ಯ
ಐದು ಲಕ್ಷಕ್ಕೂ ಆಧಿಕ ಅಂತರದಲ್ಲಿ ರಾಘವೇಂದ್ರ ಅವರನ್ನು ಗೆಲ್ಲಿಸಬೇಕು ಎಂದು ಅವರೇ ಹೇಳಿದ್ದರು. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ ಎಂದು ಅವರೇ ಹಾರೈಸಿದ್ದರು. ಕೇವರ ಎರಡೇ ವಾರದಲ್ಲಿ ಈಶ್ವರಪ್ಪನವರಲ್ಲಿ ಈ ಬದಲಾವಣೆ ಏಕಾಯಿತು? ಇದನ್ನೆಲ್ಲವನ್ನು ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post