No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಜೆ.ಎನ್.ಎನ್.ಸಿ.ಇ: 5 ದಿನಗಳ ಎಐಸಿಟಿಇ 'ಬೂಟ್ ಕ್ಯಾಂಪ್' ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 7, 2026
in ಶಿವಮೊಗ್ಗ
0
ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾವೀನ್ಯಯುತ ಚಿಂತನೆ‌ ಮತ್ತು ಅದರ ವಿನ್ಯಾಸ ಸಮಾಜದ ಅಭಿವೃದ್ಧಿಯ ಪ್ರಮುಖ ಬದಲಾವಣೆಯ ಶಕ್ತಿಯಾಗಿದೆ ಎಂದು ಎಐಸಿಟಿಇ ಇನೋವೇಶನ್‌ ಕೇಂದ್ರದ ಪ್ರಾದೇಶಿಕ ಸಂಯೋಜಕರಾದ ಅಶೀಷ್‌ ತ್ರಿಪಾಠಿ ಹೇಳಿದರು.

ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ JNNCE ಎಐಸಿಟಿಇ ನೇತೃತ್ವದಲ್ಲಿ ಭಾರತ ಶಿಕ್ಷಣ ಸಚಿವಾಲಯ, ವಾದ್ವಾನಿ ಫೌಂಡೇಷನ್‌ ಹಾಗೂ ಎಸ್‌ಬಿಐ ಫೌಂಡೇಷನ್‌ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ಐದು ದಿನಗಳ ನಾವೀನ್ಯತೆ ಮತ್ತು ಉದ್ಯಮಶೀಲತೆ ಬೂಟ್‌ ಕ್ಯಾಂಪ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ, ಆವಿಷ್ಕಾರ ಎಂಬುದು ಕೇವಲ ಒಂದು ಆಯ್ಕೆಯಲ್ಲ, ಅದು ಒಂದು ಅವಶ್ಯಕತೆ. ಇದು ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡುವುದರ ಜೊತೆಗೆ, ನೈಜ ಜಗತ್ತಿನ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಅದ್ದರಿಂದ ಯುವ ಸಮೂಹದಲ್ಲಿ ಕಾಲೇಜು ಹಂತಗಳಲ್ಲಿಯೆ, ಉದ್ಯಮಶೀಲ ಮನೋಭಾವ ಬೆಳೆಸುವುದು ಅತ್ಯಂತ ಅಗತ್ಯವಾಗಿದೆ.

ಈ ಬೂಟ್‌ಕ್ಯಾಂಪ್ ಕಾರ್ಯಕ್ರಮವು ನಾವೀನ್ಯಯುತ ಆಲೋಚನೆ ಮತ್ತು ಅದರ ಅನುಷ್ಠಾನದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿದೆ. ಉದ್ಯೋಗ ಹುಡುಕುವ ಮನಸ್ಥಿತಿಯಿಂದ, ಉದ್ಯೋಗ ಸೃಷ್ಟಿಸುವ ಆತ್ಮಬಲ ನಿರ್ಮಿಸಲು ಇಂತಹ ವೇದಿಕೆಗಳು ಪ್ರೇರಣಾದಾಯಕವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.
ಅರೇಕಾ ಟೀ ಕಂಪನಿಯ ಸಂಸ್ಥಾಪಕರಾದ ನಿವೇದನ್‌ ನೆಂಪೆ ಮಾತನಾಡಿ, ಹೊಸತನದೆಡೆಗೆ ಚಿಂತಿಸುವಾಗ ಮೂದಲಿಕೆಯ ಮಾತುಗಳು ಸಹಜ. ಸಮಸ್ಯೆಗಳಿದ್ದ ಕಡೆ ಅವಕಾಶಗಳು ಹೆಚ್ಚಾಗಿರುತ್ತದೆ. ಅದರ ಜೊತೆಯಲ್ಲಿ ಸವಾಲುಗಳು ನಮ್ಮನ್ನು ಕಾಡುತ್ತದೆ. ಅಂತಹ ಸವಾಲುಗಳನ್ನು ಸಮರ್ಪಕವಾಗಿ ನಿರ್ವಹಿಸುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ. ನಿಮ್ಮಲ್ಲಿರುವ ನಾವೀನ್ಯಯುತ ಯೋಚನೆಗಳನ್ನು ಬಲವಾಗಿ ನಂಬಿ‌ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ನಮ್ಮ ದೇಶವು ಸೇವಾ ಆಧಾರಿತ ಆರ್ಥಿಕತೆಯಿಂದ, ಜ್ಞಾನ ಆಧಾರಿತ ಆರ್ಥಿಕತೆಯತ್ತ ಸಾಗಬೇಕು. ನಾವೀನ್ಯತೆ ಎಂದಾಗ ನಾವು ಹೊಸದನ್ನು ಸೃಷ್ಟಿಸುವುದು ಮಾತ್ರ ಎಂದು ಅರ್ಥೈಸುತ್ತೇವೆ. ಆದರೆ ಅದು ಸದಾ ಸಂಪೂರ್ಣ ಹೊಸದಾಗಿರಬೇಕೆಂದಿಲ್ಲ. ಈಗಿರುವ ವ್ಯವಸ್ಥೆಯಲ್ಲಿ ಸಣ್ಣ ಸುಧಾರಣೆಗಳನ್ನು ಮಾಡುವುದು ಕೂಡ ಒಂದು ಮಹತ್ವದ ಆವಿಷ್ಕಾರವಾಗಿದೆ.

ಗಾಂಧೀಜಿಯವರ ಸ್ವದೇಶಿ ಚಳುವಳಿಯ ಕಲ್ಪನೆಯು ಕೇವಲ ವಿದೇಶಿ ವಸ್ತುಗಳನ್ನು ತಿರಸ್ಕರಿಸುವುದಾಗಿರಲಿಲ್ಲ. ಜೊತೆಯಲ್ಲಿ ನಮ್ಮ ಜನರಿಗೆ, ನಮ್ಮ ಪರಿಸರಕ್ಕೆ ತಕ್ಕಂತಹ ಉತ್ಪನ್ನಗಳನ್ನು ನಿರ್ಮಿಸುವುದು ಕೂಡ. ಇಂದು ನಾವು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮುಂದೆ ಇದ್ದೇವೆ. ಆದರೆ ತಂತ್ರಜ್ಞಾನವನ್ನು ಸ್ವತಃ ಅಭಿವೃದ್ಧಿಪಡಿಸುವಲ್ಲಿ ಹಿಂದುಳಿದಿದ್ದೇವೆ. ಇಂದಿಗೂ ಹಲವಾರು ಕ್ಷೇತ್ರಗಳಲ್ಲಿ, ಇತರೆ ದೇಶಗಳ ಮೇಲೆ ಅವಲಂಬಿತರಾಗಿದ್ದೇವೆ. ಈ ಅವಲಂಬನೆ ನಮ್ಮನ್ನು ಅಸ್ಥಿರತೆಗೆ ದೂಡಬಹುದು. ಅದನ್ನು ತಪ್ಪಿಸಲು ನಾವು ತಾಂತ್ರಿಕ ಕ್ಷೇತ್ರದ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಕರ್ನಾಟಕದಲ್ಲಿ 2 ಕಡೆ ಬೂಟ್ ಕ್ಯಾಂಪ್

ಜಮ್ಮು ಕಾಶ್ಮೀರ, ಲಡಾಕ್ ಸೇರಿದಂತೆ ದೇಶದಾದ್ಯಂತ 30 ಕೇಂದ್ರಗಳಲ್ಲಿ ಬೂಟ್ ಕ್ಯಾಂಪ್‌ ನಡೆಯುತ್ತಿದ್ದು, ವಿಶೇಷವಾಗಿ ಕರ್ನಾಟಕದಲ್ಲಿ ಕೇವಲ 2 ಕಾಲೇಜುಗಳಲ್ಲಿ ಮಾತ್ರ ಈ ಕಾರ್ಯಕ್ರಮ ನಡೆಯುತ್ತಿದೆ. ಅದರಲ್ಲಿ ಜೆ.ಎನ್.ಎನ್.ಸಿ ಕಾಲೇಜು ಕೂಡ ಒಂದು ಎಂಬುದು ಹೆಮ್ಮೆಯ ವಿಷಯವಾಗಿದೆ. ದೇಶದ ವಿವಿಧ ಕಾಲೇಜಿನ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕೊನೆಯ ದಿನ ವಿದ್ಯಾರ್ಥಿಗಳು ತಮ್ಮ ನಾವೀನ್ಯಯುತ ಚಿಂತನೆಗಳನ್ನು ಪ್ರಸ್ತುತ ಪಡಿಸಲಿದ್ದಾರೆ ಎಂದು ಕಾರ್ಯಕ್ರಮ ಸಂಯೋಜಕ‌ ಕೆ.ಎಲ್.ಅರುಣ್ ಕುಮಾರ್ ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌ ಅಧ್ಯಕ್ಷತೆ ವಹಿಸಿದ್ದರು. ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ, ಎಐಸಿಟಿಇ ಜೆಎನ್‌ಎನ್‌ಸಿಇ ಐಡಿಯಾ ಲ್ಯಾಬ್‌ ಸಂಯೋಜಕ ಡಾ.ಎಂ.ಎಚ್.ಮೋಯಿನುದ್ದಿನ್‌ ಖಾನ್‌, ಬೂಟ್‌ಕ್ಯಾಂಪ್‌ ಸಂಯೋಜಕ ಕೆ.ಎಲ್.ಅರುಣ್‌ ಕುಮಾರ್‌, ವಾದ್ವಾನಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಡಾ.ಸುಪ್ರಭ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: JNNCEKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜುಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

Next Post

Extension of Special Train Services to Manage Summer Rush

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 27, 2026
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

April 27, 2026
ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

ತಾಯಿಯೊಂದಿಗೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್ ಸ್ಟ್ರೋಕ್ ಆಗಿ ಯುವತಿ ಸಾವು

April 27, 2026
ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

ಶಿವಮೊಗ್ಗ ಗ್ರಾಮಾಂತರ | ಭಾರೀ ಮಳೆಗೆ ಅಪಾರ ಹಾನಿ | ಸ್ಥಳಕ್ಕೆ ಎಂಎಲ್‌ಸಿ ಡಾ.ಸರ್ಜಿ ಭೇಟಿ

April 27, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL