ಸದಾ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಹೇಳಿದರು.
ಪತ್ರಕರ್ತರು ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಕಣ್ಣಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಪತ್ರಕರ್ತರಿಗೆ ನೇತ್ರ ತಪಾಸಣೆ, ಕನ್ನಡಕ ವಿತರಣೆ ಶಿಬಿರ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
Also read: ಚೆಸ್ ಪಂದ್ಯಾವಳಿ: ಕ್ರೈಸ್ಟ್ಕಿಂಗ್ ಶಾಲೆಯ ಐದು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ಆರ್.ಎಸ್. ಹಾಲಸ್ವಾಮಿ ಮಾತನಾಡಿ, ಪತ್ರಕರ್ತರು ಕಂಪ್ಯೂಟರ್, ಲ್ಯಾಪ್ಟಾಪ್, ಮೊಬೈಲ್ ಸ್ಕ್ರೀನ್ ನೋಡುವುದು, ಪತ್ರಿಕೆಗಳನ್ನು ಓದುವುದರಿಂದ ಕಣ್ಣಿನ ಮೇಲೆ ಒತ್ತಡ ಬೀಳುತ್ತದೆ. ಕಣ್ಣು ಮತ್ತು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಡಾ. ಅಭಿಷೇಕ್ ಮಾತನಾಡಿ, 40 ವರ್ಷದ ನಂತರ ಸಮೀಪ ದೃಷ್ಟಿ ದೋಷ ಸಾಮಾನ್ಯವಾಗಿದೆ. ಮುಖ್ಯವಾದ ಅಂಗ ಕಣ್ಣಿನ ಬಗ್ಗೆ ಕಾಳಜಿ ವಹಿಸಬೇಕು. ಶಿಬಿರದಲ್ಲಿ ಪತ್ರಕರ್ತರಿಗೆ ನೇತ್ರ ತಪಾಸಣೆ ಮಾಡಿ ಕನ್ನಡಕ ವಿತರಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















