ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಜೂನ್ 14, 15 ಮತ್ತು 16 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವರು.
ಜೂನ್ 14 ರಂದು ಬೆಳಿಗ್ಗೆ 9.45 ಕ್ಕೆ ಶಿವಮೊಗ್ಗದಿಂದ ನಿರ್ಗಮಿಸಿ 10 ಗಂಟೆಗೆ ಹಸೂಡಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಿರುವ ಕೋವಿಡ್ ನಿರ್ವಹಣೆ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12 ಹಸೂಡಿಯಿಂದ ಹೊರಟು 12.15 ಕ್ಕೆ ಶಿವಮೊಗ್ಗ ತಲುಪಿ, ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಸ್ತವ್ಯ ಮಾಡುವರು.
ಜೂನ್ 15 ರ ಸಂಜೆ 6 ಗಂಟೆಗೆ ಶಿವಮೊಗ್ಗದಿಂದ ಹೊರಟು ರಾತ್ರಿ 8 ಕ್ಕೆ ಜೋಗ್ಫಾಲ್ಸ್ ನ ಬ್ರಿಟಿಷ್ ಗೆಸ್ಟ್ಹೌಸ್ ತಲುಪಿ ವಾಸ್ತವ್ಯ ಮಾಡುವರು.
ಜೂನ್ 16 ರಂದು ಬೆಳಿಗ್ಗೆ 8 ಗಂಟೆಗೆ ಜೋಗಫಾಲ್ಸ್ನಿಂದ ಹೊರಟು ಶಿರಸಿ ತಲುಪಿ ಕೋವಿಡ್ 19 ಸಂಬಂಧ ಸಭೆ ಹಾಗೂ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆ 5.30 ಕ್ಕೆ ಉತ್ತರ ಕನ್ನಡ ಜಿಲ್ಲೆಯ ಚಂದಗುಳಿಯಿಂದ ನಿರ್ಗಮಿಸಿ ರಾತ್ರಿ 9.30 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ಎನ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post