ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ವತಿಯಿಂದ ಜೂ.22ರಂದು ಸಂಜೆ 6ಕ್ಕೆ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಪದ್ಮಶ್ರೀ ಡಾ. ಎಂ.ಕೆ. ಶ್ರೀಧರ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಾ.ಎಂ.ಕೆ. ಶ್ರೀಧರ್ ಅವರು ಭಾರತ ದೇಶದ ಅತ್ಯುತ್ತಮ ಶಿಕ್ಷಣ ತಜ್ಞರು ಸಂಶೋಧಕರು ಆಗಿದ್ದಾರೆ. ಕಳೆದ 50 ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕಾಗಿ ಶ್ರಮಿಸಿದ್ದಾರೆ. ವಿಶೇಷ ಚೇತನರಾಗಿದ್ದರು ಕೂಡ ಅವರ ಈ ಸಾಧನೆಗೆ ಅಡ್ಡಿಯಾಗಲಿಲ್ಲ ಈ ದೇಶದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದಾರೆ. ಇಂತಹ ಮಹಾನ್ ವ್ಯಕ್ತಿಯನ್ನು ಶಿವಮೊಗ್ಗದವರಾದ ನಾವು ಸನ್ಮಾನಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಮುಖ್ಯವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ರಚನಾ ಸಮಿತಿಯ ಸದಸ್ಯರಾಗಿದ್ದವರು. ಅವರ ಸಹೋದರರು ಶಿವಮೊಗ್ಗದವರೇ ಆದ ಭೂಪಾಳಂ ಶಶಿದರ್ ಆಗಿದ್ದಾರೆ. ಅವರ ಸಹಕಾರದಲ್ಲಿ ಮತ್ತು ಎಬಿವಿಪಿ ಹಾಗೂ ಆರ್.ಎಸ್.ಎಸ್. ಮತ್ತು ಅಭಿಮಾನಿಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬದಲಾಗುತ್ತಿರುವ ಭಾರತದ ಭರವಸೆಯ ಶಿಕ್ಷಣ ಕುರಿತು ಸಂವಾದವನ್ನು ಕೂಡ ಆಯೋಜಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಭೂಪಾಳಂ ಶಶಿಧರ್, ಡಾ.ರವಿಕಿರಣ್, ಚಂದ್ರಶೇಖರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post