ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು #Vidhushakara Bharathi Shri of Shringeri Mutt ಜೂ.24ರಿಂದ 26ವರೆಗೆ ಶಿವಮೊಗ್ಗದಲ್ಲಿ ವಾಸ್ತವ್ಯ ಹೂಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
24ರ ಸೋಮವಾರ ಸಂಜೆ 6ಕ್ಕೆ ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಕ್ಕೆ ಆಗಮನ, 6:30ಕ್ಕೆ ಶೋಭಾಯಾತ್ರೆ (ಕೋಟೆ ರಸ್ತೆ ಮೂಲಕ), 7ಕ್ಕೆ ಶ್ರೀ ಶೃಂಗೇರಿ ಶಂಕರ ಂಠದಲ್ಲಿ ಪೂರ್ಣಕುಂಭ ಸ್ವಾಗತ, ಧೂಳೀ ಪಾದಪೂಜೆ, ರಾತ್ರಿ 8ಕ್ಕೆ ಶ್ರೀ ಚಂದ್ರಮೌಳೇರ್ಶವರ ಪೂಜೆ, ಪ್ರಸಾದ ವಿನಿಯೋಗ ನಡೆಯಲಿದೆ.
ಜೂ.25ರ ಮಂಗಳವಾರ ಶ್ರೀ ಶೃಂಗೇರಿ ಶಂಕರಮಠದಲ್ಲಿ ಬೆಳಿಗ್ಗೆ 6ಗಂಟೆಗೆ 108 ನಾರಿಕೇಳ ಗಣಹೋಮ, 9ಕ್ಕೆ ಶ್ರೀ ಜಗದ್ಗುರುಗಳ ಸಾನಿಧ್ಯದಲ್ಲಿ ಪೂರ್ಣಾಹುತಿ, ಸಂಜೆ 5ಕ್ಕೆ ಶ್ರೀ ಗಾಯತ್ರಿ ಮಾಂಗಲ್ಯಮಂದಿರದಲ್ಲಿ ಶಿವಮೊಗ್ಗದ ಎಲ್ಲಾ ಶ್ರೀ ಶಾರದಾ ಶಂಕರ ಭಜನಾ ಮಂಡಳಿಗಳಿಂದ ಶ್ರೀ ಶಂಕರ ಭಗವತ್ಪಾದ ವಿರಜಿತ ಕಲ್ಯಾಣವೃಷ್ಟಸ್ತವ ಸ್ತೋತ್ರ, ಶಿವಪಂಚಾಕ್ಷರ ನಕ್ಷತ್ರಮಾಲಾ ಸ್ತ್ರೋತ್ರ ಹಾಗೂ ಶ್ರೀಲಕ್ಷ್ಮೀ ನೃಸಿಂಹ ಕರುಣಾರಸ ಸ್ತೋತ್ರಗಳ ಮಹಾಸಮರ್ಪಣೆ. ಸಂಜೆ 6ಕ್ಕೆ ಗುರುವಂದನೆ ಶ್ರೀ ಜಗದ್ಗುರುಗಳಿಂದ ಆಶೀರ್ವಚನ, ರಾತ್ರಿ 8ಕ್ಕೆ ಶ್ರೀ ಶೃಂಗೇರಿ ಶಂಕರಮಠದಲ್ಲಿ ಶ್ರೀ ಚಂದ್ರಮೌಳೇಶ್ವರ ಪೂಜೆ, ಪ್ರಸಾಚ ವಿನಿಯೋಗ ಜರುಗಲಿದೆ.
ಜೂ.26ರ ಬಯಧವಾರ ಬೆಳಿಗ್ಗೆ 9ಗಂಟೆಗೆ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಜಗದ್ಗುರುಗಳವರ ಅಮೃತಹಸ್ತದಿಂದ ಅಭಿನವ ವಿದ್ಯಾತೀರ್ಥ ಮಂಟಪದ ಪುನರ್ ನಿರ್ಮಾಣಕ್ಕೆ ಶಂಕುಸ್ಥಾಪನೆ, 11ರಿಂದ ಶ್ರೀ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಭಕ್ತಾದಿಗಳಿಗೆ ಫಲ ಮಂತ್ರಾಕ್ಷತೆ, ಪ್ರಸಾದ ವಿನಿಯೋಗ ಇರಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post